ಪ್ರತ್ಯೇಕ ಜಿಲ್ಲೆ ಕೂಗಿಗೆ ಚುನಾವಣೆಯ ಬ್ರೇಕ್ !


Team Udayavani, Sep 22, 2019, 4:06 PM IST

Udayavani Kannada Newspaper

ವೆಂಕೋಬಿ ಸಂಗನಕಲ್ಲು
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸಪೇಟೆಯನ್ನು ವಿಜಯನಗರ ಜಿಲ್ಲೆಯನ್ನಾಗಿ ಮಾಡುವ ಅನರ್ಹ ಶಾಸಕ ಆನಂದ್‌ಸಿಂಗ್‌ ಪ್ರಯತ್ನಕ್ಕೆ ಜಿಲ್ಲೆಯಾದ್ಯಂತ ಎಲ್ಲೆಡೆ ವಿರೋಧ ವ್ಯಕ್ತವಾಗಿದ್ದು, ವಿಜಯನಗರ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿರುವುದು ಹೊಸ ಜಿಲ್ಲೆ ರಚನೆಗೆ ತಾತ್ಕಾಲಿಕ ಬ್ರೇಕ್‌ ಬಿದ್ದಂತಾಗಿದೆ.

ಹೊಸಪೇಟೆಯನ್ನು ವಿಜಯನಗರ ಜಿಲ್ಲೆಯನ್ನಾಗಿ ಮಾಡಬೇಕೆಂಬ ಕೂಗು ಕಳೆದ ಒಂದೂವರೆ ದಶಕದಿಂದ ಕೇಳಿಬರುತ್ತಿದೆ. ಕಳೆದ ಎರಡು ಅವ ಧಿಗೆ ಬರೋಬ್ಬರಿ ಹನ್ನೊಂದು ವರ್ಷಗಳ ಕಾಲ ವಿಜಯನಗರ ಕ್ಷೇತ್ರವನ್ನು ಶಾಸಕರಾಗಿ ಪ್ರತಿನಿಧಿ ಸಿದ್ದ ಅನರ್ಹ ಶಾಸಕ ಆನಂದ್‌ಸಿಂಗ್‌ ಹೊಸಪೇಟೆಯನ್ನು ವಿಜಯನಗರ ಜಿಲ್ಲೆಯನ್ನಾಗಿಸುವ ವಿಷಯವನ್ನು ಒಮ್ಮೆಯೂ ಗಂಭೀರವಾಗಿ ಪರಿಗಣಿಸಿರಲಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಬಗ್ಗೆ ಹೆಚ್ಚು ಮುತುವರ್ಜಿ ವಹಿಸುತ್ತಿರುವುದು ಹಲವು ಅನುಮಾನಗಳನ್ನು ಮೂಡಿಸಿವೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಮತಗಳ ಅಂತರದಿಂದ ಜಯಗಳಿಸಿದ್ದ ಆನಂದ್‌ಸಿಂಗ್‌ ಗೆ, ಕ್ಷೇತ್ರದಲ್ಲಿ ತನ್ನ ವರ್ಚಸ್ಸು ಕಡಿಮೆಯಾಗುತ್ತಿದೆ ಎಂಬ ಆತಂಕ ಕಾಡುತ್ತಿದೆ. ಹಾಗಾಗಿ ದಶಕದ ವಿಜಯನಗರ ಜಿಲ್ಲೆಯ ಕೂಗಿಗೆ ಇದೀಗ ಧನಿಗೂಡಿಸಿದ್ದಾರೆ. ಈ ಮೂಲಕ ಕ್ಷೇತ್ರದಲ್ಲಿ ತನ್ನ ವರ್ಚಸ್ಸನ್ನು ಪುನಃ ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ರೆಡ್ಡಿಗಳ ಮುಷ್ಠಿಯಿಂದ ಹೊರಬರುವ ಪ್ರಯತ್ನ?: ಗಣಿನಾಡು ಬಳ್ಳಾರಿ ಜಿಲ್ಲೆಯ ಮೇಲೆ ರೆಡ್ಡಿ ಸಹೋದರರು, ರಾಮುಲು ಹಿಡಿತ ಸಾಧಿಸಿದ್ದಾರೆ. ಇವರ ಕಪಿಮುಷ್ಠಿಯಿಂದ ಹೊರಬರುವ ಸಲುವಾಗಿಯೇ ಆನಂದ್‌ಸಿಂಗ್‌ ಅವರು ಬಿಜೆಪಿ ಬಿಟ್ಟಿದ್ದಾರೆ ಎಂಬುದನ್ನೂ ಅಲ್ಲಗಳೆಯುವಂತಿಲ್ಲ. ತಮ್ಮ ಕ್ಷೇತ್ರವನ್ನೇ ಜಿಲ್ಲಾ ಕೇಂದ್ರವಾಗಿ ಮಾಡಿಕೊಂಡರೆ, ತಮ್ಮದೇ ವಿಜಯನಗರ ಜಿಲ್ಲೆಯಲ್ಲಿ ಹಿಡಿತ ಸಾಧಿಸಬಹುದು. ಸಚಿವರೂ ಆಗಬಹುದು. ಚುನಾವಣೆಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಪಕ್ಷದಲ್ಲೂ ಹಿಡಿತ ಸಾಧಿಸಬಹುದು ಎಂಬ ಉದ್ದೇಶದಿಂದ ಅನರ್ಹ ಶಾಸಕ ಆನಂದ್‌ಸಿಂಗ್‌ ಹೊಸಪೇಟೆಯನ್ನು ವಿಜಯನಗರ ಜಿಲ್ಲೆಯನ್ನಾಗಿ ಮಾಡಲು ಪಟ್ಟು ಹಿಡಿದಿದ್ದಾರೆ. ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ರೆಡ್ಡಿ, ರಾಮುಲು ಅವರಿಗೆ ಪರ್ಯಾಯವಾಗಿ ಆನಂದ್‌ಸಿಂಗ್‌ರನ್ನು ಬೆಳೆಸಲು ಬಿಜೆಪಿ ಹೈಕಮಾಂಡ್‌ ಸಹ ಸಿಂಗ್‌ಗೆ ಬೆಂಬಲ ಸೂಚಿಸುತ್ತಿದೆ ಎಂಬ ಮಾತುಗಳು ಸಹ ಪಕ್ಷದ ವಲಯದಲ್ಲಿ ಕೇಳಿಬರುತ್ತಿವೆ.

ಹೊಸ ಜಿಲ್ಲೆ ರಚನೆಗೆ ತಾತ್ಕಾಲಿಕ ಬ್ರೇಕ್‌: ವಿಜಯನಗರ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿರುವುದು ಹೊಸಪೇಟೆಯನ್ನು ವಿಜಯನಗರ ಜಿಲ್ಲಾ ಕೇಂದ್ರವನ್ನಾಗಿ ರಚಿಸುವ ಪ್ರಕ್ರಿಯೆಗೆ ತಾತ್ಕಾಲಿಕ ಬ್ರೇಕ್‌ ಬಿದ್ದಂತಾಗಿದೆ. ವಿಜಯನಗರ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ಕ್ಷೇತ್ರದಲ್ಲಿ ಯಾವೊಂದು ಸಂಘಟನೆಗಳಿಂದಲೂ ವಿರೋಧ ವ್ಯಕ್ತವಾಗದೆ ಭಾರಿ ಬೆಂಬಲ ಲಭಿಸಿತ್ತು. ಪರಿಣಾಮ ಕ್ಷೇತ್ರದಲ್ಲಿ ಪುನಃ ತಮ್ಮ ವರ್ಚಸ್ಸನ್ನು ಹೆಚ್ಚಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ ಆನಂದ್‌ಸಿಂಗ್‌ ಆ ಮೂಲಕ ಉಪಚುನಾವಣೆಗೆ ತಯಾರಿ ನಡೆಸಿದ್ದರು. ಆದರೆ ವಿಜಯನಗರ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿ, ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಉಪಚುನಾವಣೆಗೆ ಮುನ್ನವೇ ಹೊಸಪೇಟೆಯನ್ನು ವಿಜಯನಗರ ಜಿಲ್ಲೆಯನ್ನಾಗಿ ರೂಪಿಸುವ ಆನಂದ್‌ಸಿಂಗ್‌ ಪ್ರಯತ್ನಕ್ಕೆ ತಾತ್ಕಾಲಿಕವಾಗಿ ಬ್ರೇಕ್‌ ಬಿದ್ದಂತಾಗಿದ್ದು,

ವಿಜಯನಗರ ಜಿಲ್ಲೆಗೆ ಎಲ್ಲೆಡೆ ವಿರೋಧ: ಹೊಸಪೇಟೆಯನ್ನು ವಿಜಯನಗರ ಜಿಲ್ಲೆಯನ್ನಾಗಿ ಮಾಡುವಂತೆ ಪಟ್ಟು ಹಿಡಿದಿರುವ ಅನರ್ಹ ಶಾಸಕ ಆನಂದ್‌ಸಿಂಗ್‌ ಮತ್ತು ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸುವಂತೆ ಆದೇಶ ಹೊರಡಿಸಿರುವ ಸರ್ಕಾರದ ವಿರುದ್ಧ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ಶಾಸಕರಾದ ಜಿ. ಸೋಮಶೇಖರರೆಡ್ಡಿ, ಪಿ.ಟಿ.ಪರಮೇಶ್ವರನಾಯ್ಕ, ಜಿ. ಕರುಣಾಕರರೆಡ್ಡಿ ಸೇರಿದಂತೆ ಬಹುತೇಕರು, ಕನ್ನಡ ಪರ, ರೈತ ಪರ ಸಂಘ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿದ್ದು, ಅನರ್ಹ ಶಾಸಕ ಆನಂದ್‌ಸಿಂಗ್‌ರ ಸ್ವಾರ್ಥ ರಾಜಕಾರಣಕ್ಕೆ ರಾಜ್ಯ ಸರ್ಕಾರ ತರಾತುರಿಯಲ್ಲಿ ನಿರ್ಣಯ ಕೈಗೊಳ್ಳಬಾರದು ಎಂದು ಶಾಸಕರು, ಸಂಘಟನೆಗಳ ಮುಖಂಡರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.