ಹಡಪದ ಅಪ್ಪಣ್ಣ ಸಾಹಿತ್ಯ ಚಳವಳಿಯ ಶಕ್ತಿ
243ಕ್ಕೂ ಹೆಚ್ಚಿನ ವಚನ ರಚಿಸಿದ್ದಾರೆ ಅಪ್ಪಣ್ಣ•ಗಮನ ಸೆಳೆದ ಭಾವಚಿತ್ರ ಮೆರವಣಿಗೆ
Team Udayavani, Jul 17, 2019, 4:13 PM IST
ಬಳ್ಳಾರಿ: ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಗಣ್ಯರು ಪುಷ್ಪನಮನ ಸಲ್ಲಿಸಿದರು.
ಬಳ್ಳಾರಿ: ಶಿವಶರಣ ಹಡಪದ ಅಪ್ಪಣ್ಣ ಅವರು, ಸರ್ವಜನರ ಸಮಾನತೆಗಾಗಿ ಸಾಹಿತ್ಯ ಚಳವಳಿಯ ಮೂಲಕ ಶ್ರಮಿಸಿದ ಮಹಾನ್ ವ್ಯಕ್ತಿಯಾಗಿದ್ದರು. 12ನೇ ಶತಮಾನದ ವಚನ ಸಾಹಿತ್ಯ ಚಳವಳಿಗೆ ಅವರು ನೀಡಿದ ಕೊಡುಗೆಯೂ ಅಪಾರ ಎಂದು ತಹಶೀಲ್ದಾರ್ ಯು.ನಾಗರಾಜ ಹೇಳಿದರು.
ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಹಯೋಗದಲ್ಲಿ ಮಂಗಳವಾರ ಏರ್ಪಡಿಸಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಿವಶರಣ ಹಡಪದ ಅಪ್ಪಣ್ಣ ಅವರು ವಚನಕಾರ, ಅಂತರಂಗದ ಆಪ್ತ ಒಡನಾಡಿ, ಬಸವಣ್ಣನವರ ಅತ್ಯಂತ ನಿಕಟವರ್ತಿಯಾಗಿದ್ದರು. ಇವರು ಸಾಮಾಜಿಕ ಬದಲಾವಣೆಗಾಗಿ ಶ್ರಮಿಸಿದ ದೃಷ್ಟಾಂತ ವಿವರಿಸಿದರು.
ವಚನಕಾರ ಅಪ್ಪಣ್ಣ ಅವರು ಬಸವಪ್ರಿಯ ಕೂಡಲ ಚನ್ನಬಸವ ಎಂಬ ಅಂಕಿತವನ್ನಿಟ್ಟುಕೊಂಡು ಸುಮಾರು 243ಕ್ಕೂ ಹೆಚ್ಚಿನ ವಚನ ರಚಿಸಿದ್ದಾರೆ. ಆ ವಚನಗಳಲ್ಲಿ ಮಾನವೀಯ ಮೌಲ್ಯಗಳು, ಸಾಮಾಜಿಕ ಬದಲಾವಣೆ ಅಂಶಗಳು ಮತ್ತು ಸರ್ವಜನರ ಸಮಾನತೆಯ ಸಲಹೆಗಳಿದ್ದು, ಅವರ ಆದರ್ಶಗಳನ್ನು ಇಂದಿನ ಯುವಜನರು ರೂಢಿಸಿಕೊಳ್ಳಬೇಕು ಎಂದರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಬಿ.ಸಿದ್ದಲಿಂಗಪ್ಪ ಅವರು ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಹಡಪದ ಸಮಾಜದ ಮುಖಂಡರಾದ ಲಿಂಗಪ್ಪ ಸೇರಿದಂತೆ ಸಮುದಾಯದ ಮುಖಂಡರು ಇದ್ದರು.
ಗಮನ ಸೆಳೆದ ಮೆರವಣಿಗೆ: ಇದಕ್ಕೂ ಮುನ್ನ ಜಿಲ್ಲಾಡಳಿತದಿಂದ ಏರ್ಪಡಿಸಲಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಮೆರವಣಿಗೆ ಗಮನ ಸೆಳೆಯಿತು. ನಗರದ ಮುನ್ಸಿಪಲ್ ಕಾಲೇಜು ಮೈದಾನದಿಂದ ಆರಂಭವಾದ ಮೆರವಣಿಗೆಗೆ ತಹಶೀಲ್ದಾರ್ ನಾಗರಾಜ್ ಚಾಲನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಹಡಪದ ಸಮಾಜದ ಮುಖಂಡರಾದ ಲಿಂಗಪ್ಪ ಸೇರಿದಂತೆ ಅನೇಕರು ಇದ್ದರು. ಮುನ್ಸಿಪಲ್ ಕಾಲೇಜಿನಿಂದ ಆರಂಭವಾದ ಮೆರವಣಿಗೆಯು ರಾಯಲ್ ಸರ್ಕಲ್ ಮೂಲಕ ಬೆಂಗಳೂರು ರಸ್ತೆ ಮಾರ್ಗವಾಗಿ ಮೋತಿವೃತ್ತದ ಮೂಲಕ ಜೋಳದ ರಾಶಿ ದೊಡ್ಡನಗೌಡ ರಂಗಮಂದಿರಕ್ಕೆ ತೆರಳಿತು. ಮೆರವಣಿಗೆಯಲ್ಲಿ ಡೊಳ್ಳುಕುಣಿತ, ವೀರಗಾಸೆ, ತಾಷಾರಂಡೋಲ್ ಕಲಾ ತಂಡಗಳ ಪ್ರದರ್ಶನ ಗಮನಸೆಳೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ