ವಿವಿ ನೇಮಕಾತಿ ಅಕ್ರಮ ತಡೆಗೆ ಆಗ್ರಹ


Team Udayavani, May 29, 2019, 5:20 PM IST

29-May-31

ಬಳ್ಳಾರಿ: ಎಬಿವಿಪಿ ಮುಖಂಡ ಅಡವಿಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬಳ್ಳಾರಿ: ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ಬೋಧಕ, ಬೋಧಕೇತರ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಶೀಘ್ರದಲ್ಲೇ ಎಬಿವಿಪಿ ನೇತೃತ್ವದಲ್ಲಿ ರಾಜ್ಯಪಾಲರ ಬಳಿಗೆ ನಿಯೋಗ ತೆರಳಿ ನೇಮಕಾತಿಯನ್ನು ತಡೆಹಿಡಿಯುವಂತೆ ಒತ್ತಾಯಿಸಲಾಗುವುದು ಎಂದು ಎಬಿವಿಪಿ ಮುಖಂಡ ಅಡವಿಸ್ವಾಮಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಎಸ್‌ಕೆ ವಿವಿ ಕುಲಪತಿ ಎಂ.ಎಸ್‌.ಸುಭಾಷ್‌ ಅವರು, ನೇಮಕಾತಿಗಳನ್ನು ಸಂಪೂರ್ಣವಾಗಿ ಕಾನೂನು ಬಾಹಿರವಾಗಿ ಮಾಡುತ್ತಿದ್ದಾರೆ. 2014ರಲ್ಲಿ ರಾಜ್ಯಪಾಲರು ಹೊರಡಿಸಿರುವ ಆದೇಶದಲ್ಲಿ ವಿವಿ ಕುಲಪತಿಗಳು ಅವಧಿ ಮುಕ್ತಾಯಕ್ಕೆ 6 ತಿಂಗಳ ಮುನ್ನವೇ ಎಲ್ಲ ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು ಎಂದು ಸ್ಪಷ್ಟವಾಗಿ ಸೂಚಿಸಿದ್ದಾರೆ. ವಿವಿಯಿಂದ ನೇಮಕಾತಿಗಾಗಿ ಹೊರಡಿಸಲಾದ ಅಧಿಸೂಚನೆಗಳು ಆರು ತಿಂಗಳ ಮಟ್ಟಿಗೆ ಮಾತ್ರ ಚಾಲ್ತಿಯಲ್ಲಿರುತ್ತವೆ. ಅಷ್ಟರೊಳಗೆ ಮರು ಅಧಿಸೂಚನೆ ಹೊರಡಿಸಲು ಅವಕಾಶವಿರುತ್ತದೆ. ನಂತರ ಹೊರಡಿಸುವ ಎಲ್ಲ ಅಧಿಸೂಚನೆಗಳು ಹೊಸದಾಗಿ ಹೊರಡಿಸಬೇಕಾಗುತ್ತದೆ. ಯುಜಿಸಿ ನಿಯಮಗಳು ಪ್ರತಿ ಆರು ತಿಂಗಳಿಗೊಮ್ಮೆ ಬದಲಾವಣೆ ಯಾಗುವುದರಿಂದ ನೇಮಕಾತಿಗೆ ಸಂಬಂಧಿಸಿದ ನಿಯಮಾವಳಿಗಳು ಸಹ ಬದಲಾವಣೆಯಾಗುತ್ತವೆ. ಈ ಎಲ್ಲ ನಿಯಮಗಳನ್ನು ಉಲ್ಲಂಘಿಸಿರುವ ಕುಲಪತಿ ಎಂ.ಎಸ್‌.ಸುಭಾಷ್‌ ಅವರು ಬೋಧಕ, ಬೋಧಕೇತರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಮುಂದಾಗುತ್ತಿದ್ದಾರೆ ಎಂದು ಆರೋಪಿಸಿದರು.

ಬೋಧಕ, ಬೋಧಕೇತರ ಹುದ್ದೆಗಳನ್ನು ಅಭ್ಯರ್ಥಿಗಳಿಂದ ಹಣ ಪಡೆದು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕುಲಪತಿಗಳ ನೇರ ಸಂಬಂಧಿಗಳೇ ಧಾರವಾಡದಲ್ಲಿ ಕೂತು ಬೋಧಕ, ಬೋಧಕೇತರ ಹುದ್ದೆಗಳನ್ನು ಇಂತಿಷ್ಟು ಹಣಕ್ಕೆ ಅಭ್ಯರ್ಥಿಗಳೊಂದಿಗೆ ಡೀಲ್ ಮಾಡುತ್ತಿದ್ದಾರೆ. ಕುಲಪತಿಗಳ ಮೊಬೈಲ್ ಟ್ರ್ಯಾಪ್‌ ಮಾಡಿದರೆ ಎಲ್ಲವೂ ಬಹಿರಂಗವಾಗಲಿದೆ. ಹೀಗಾಗಿ ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ಎಸಿಬಿಗೆ ಎಬಿವಿಪಿ ವತಿಯಿಂದ ಸೋಮವಾರ ದೂರು ಸಲ್ಲಿಸಲಾಗಿದೆ. ಇದರೊಂದಿಗೆ ನೇಮಕಾತಿ ತಡೆಯುವಂತೆ ಇನ್ನೆರಡು ದಿನಗಳಲ್ಲಿ ಎಬಿವಿಪಿ ನೇತೃತ್ವದಲ್ಲಿ ರಾಜ್ಯಪಾಲರ ಬಳಿಗೆ ನಿಯೋಗ ತೆರಳಿ ಒತ್ತಾಯಿಸಲಾಗುತ್ತದೆ ಎಂದು ಎಚ್ಚರಿಸಿದರು.

ವಿಎಸ್‌ಕೆ ವಿವಿಯಲ್ಲಿ ನಡೆಯುತ್ತಿರುವ ನೇಮಕಾತಿಗೆ ಸಂಬಂಧಿಸಿದಂತೆ ಎವಿಬಿಪಿಗೆ ಮಾಹಿತಿ ನೀಡಿದ್ದೇನೆ ಎಂದು ಆರೋಪಿಸಿ ವಿವಿಯ ಆಡಳಿತ ವಿಭಾಗದಲ್ಲಿ ಗುತ್ತಿಗೆ ನೌಕರರನಾಗಿ ಕಾರ್ಯನಿರ್ವಹಿಸುತ್ತಿರುವ ಚಿದಾನಂದ ಎನ್ನುವವರಿಗೆ ಜಾತಿನಿಂದನೆ ಪ್ರಕರಣ ದಾಖಲಿಸುವುದಾಗಿ ಕುಲಪತಿಗಳು ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ, ವಿವಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಚಿದಾನಂದ ಮತ್ತವರ ಸಂಬಂಧಿಕರನ್ನು ಏಕಾಏಕಿ ರಾತ್ರೋರಾತ್ರಿ ಬೇರೆಡೆಗೆ ವರ್ಗಾವಣೆ ಮಾಡಿದ್ದಾರೆ ಎಂದು ಚಿದಾನಂದ ತಿಳಿಸಿದರು. ವಿವಿ ನೊಂದ ಅಭ್ಯರ್ಥಿ ಶ್ರೀವಾಣಿ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ವಿವಿ ಸಿಂಡಿಕೇಟ್ ಮಾಜಿ ಸದಸ್ಯೆ ವಿಜಯಲಕ್ಷ್ಮಿ, ಯುವರಾಜ್‌ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.