ಜಿಂದಾಲ್ ಗೆ ಭೂಮಿ ಪರಭಾರೆ ಉತ್ತಮ ಕಾರ್ಯ

ಹಾಲಿ-ಮಾಜಿ ಶಾಸಕರದ್ದು ವೈಯಕ್ತಿಕ ವಿಚಾರ•ದಾಖಲೆ ಪಡೆದು ಚರ್ಚಿಸಿ: ಕೊಂಡಯ್ಯ

Team Udayavani, Jul 1, 2019, 11:51 AM IST

1-July-13

ಬಳ್ಳಾರಿ: ವಿಧಾನ ಪರಿಷತ್‌ ಸದಸ್ಯ ಕೆ.ಸಿ.ಕೊಂಡಯ್ಯ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಳ್ಳಾರಿ: ರಾಜ್ಯದ ಮೈತ್ರಿ ಸರ್ಕಾರವು ಜಿಂದಾಲ್ ಉಕ್ಕು ಕಾರ್ಖಾನೆಗೆ ಅಂದಾಜು 3,667 ಎಕರೆ ಭೂಮಿ ಪರಭಾರೆ ವಿರುದ್ಧದ ಹೋರಾಟ ಕೈಗೊಂಡಿರುವ ವಿಜಯನಗರ ಶಾಸಕ ಆನಂದಸಿಂಗ್‌, ಮಾಜಿ ಶಾಸಕ ಎಚ್.ಅನಿಲ್ ಲಾಡ್‌ ಅವರದ್ದು ವೈಯುಕ್ತಿಕ ವಿಚಾರ ಎಂದು ವಿಧಾನ ಪರಿಷತ್ತಿನ ಸದಸ್ಯ ಕೆ.ಸಿ.ಕೊಂಡಯ್ಯ ಅಭಿಪ್ರಾಯಪಟ್ಟಿದ್ದಾರೆ.

ನಗರದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಆಯೋಜಿಸಲಾಗಿದ್ದ ಕೌಶಲ್ಯಾಭಿವೃದ್ಧಿ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಂದಾಲ್ ಸಂಸ್ಥೆಗೆ ರಾಜ್ಯ ಸರ್ಕಾರ ಪರಭಾರೆ ಮಾಡಲು ಹೊರಟಿರುವ ಸಾವಿರಾರು ಎಕರೆ ಭೂಮಿಯು ಇಂದು ಅಥವಾ ನಿನ್ನೆಯ ದಿನ ರೈತರಿಂದ ಭೂಮಿಯನ್ನು ವಶ ಪಡಿಸಿಕೊಂಡಿಲ್ಲ. 2007ನೇ ಇಸ್ವಿಯಲ್ಲೇ ಈ ಭೂಮಿಯನ್ನು ವಶಪಡಿಸಿಕೊಂಡು ಜಿಂದಾಲ್ ಸಮೂಹ ಸಂಸ್ಥೆಗೆ ಲೀಜ್‌ ಕಂ ಸೇಲ್ ಡೀಡ್‌ ಒಪ್ಪಂದದಡಿ ನೀಡಲಾಗಿತ್ತು. ಆದರೀಗ ಅದನ್ನು ಮಾರಾಟದ ಕ್ರಮವಿಕ್ರಯ ಮಾಡುವ ಅನಿವಾರ್ಯತೆಯೂ ಬಂದೊದಗಿದೆ. ಹೀಗಾಗಿ, ಭೂಮಿ ಪರಭಾರೆಗೆ ಈ ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ಅನುಮೋದನೆ ಪಡೆಯಲಾಗಿದೆ. ಈಗ ಜಿಂದಾಲ್ ಸಮೂಹ ಸಂಸ್ಥೆಗೆ ಭೂಮಿಯನ್ನು ಪರಭಾರೆ ಮಾಡೋದನ್ನು ವಿರೋಧಿಸುವ ಶಾಸಕ ಆನಂದಸಿಂಗ್‌ ಹಾಗೂ ಮಾಜಿ ಶಾಸಕ ಎಚ್.ಅನಿಲ್ ಲಾಡ್‌ ಅವರ ನಡೆಯು ಸರಿಯಾಗಿಲ್ಲ. ಹಾಗೊಂದು ವೇಳೆ ಅವರು ಭೂಮಿ ಪರಭಾರೆ ವಿರೋಧಿಸುವುದೇ ಆದರೆ, ಅದು ಅವರ ವೈಯಕ್ತಿಕ ವಿಚಾರ. ಅವರ ವಿರೋಧಕ್ಕೂ ಈ ಮೈತ್ರಿಕೂಟ ಸರ್ಕಾರದ ನಿರ್ಣಯಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ಜಿಂದಾಲ್ ಸಂಸ್ಥೆಗೆ ಭೂಮಿ ಪರಭಾರೆ ವಿರುದ್ಧದ ಹೋರಾಟ ಶಾಸಕ ಆನಂದಸಿಂಗ್‌, ಮಾಜಿ ಶಾಸಕ ಅನಿಲ್ ಲಾಡ್‌ ಅವರದು ವೈಯುಕ್ತಿಕ ವಿಚಾರ. ಜಿಂದಾಲ್ ಸಂಸ್ಥೆಗೆ ಭೂಮಿ ಪರಭಾರೆ ಮಾಡುತ್ತಿರುವುದು ಉತ್ತಮ ಕಾರ್ಯವಾಗಿದೆ. ಉತ್ತಮ ಕೆಲಸ, ಕಾರ್ಯಗಳಿಗೆ ಅನೇಕ ವಿಘ್ನಗಳು ಎದುರಾಗುತ್ತಿವೆ. ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ ಅವರು ಸೇರಿದಂತೆ ಅನೇಕರು ಇಲ್ಲಿಗೆ ಬಂದು ವಿರೋಧ ವ್ಯಕ್ತಪಡಿಸಿದ್ದಾರೆ. ಇಲ್ಲಿ ರೈತರ ಭೂಮಿಯನ್ನು ಯಾರು ಕೊಡುತ್ತಿಲ್ಲ. ಸರ್ಕಾರದ ಭೂಮಿಯನ್ನು ನೀಡಲಾಗುತ್ತಿದೆ. ಜಿಂದಾಲ್ ಒಳ್ಳೆಯ ಕಂಪನಿ. ಅದು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತದೆ. ನ್ಯಾಯಯುತವಾಗಿ ಈ ಭೂಮಿಯನ್ನು ಜಿಂದಾಲ್ಗೆ ನೀಡಲಾಗುತ್ತಿದೆ. ಉದ್ಯಮಗಳಿಗೆ ಹೀಗೆ ತಡೆ ಮಾಡಿದರೆ ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಕೈಗಾರಿಕೆಗಳು ಬರುವುದೇ ಕಷ್ಟವಾಗುತ್ತದೆ. ಸ್ವಪಕ್ಷದವರಾದ ಶಾಸಕ ಆನಂದ ಸಿಂಗ್‌, ಮಾಜಿ ಶಾಸಕ ಅನಿಲ್ ಲಾಡ್‌ ಅವರು ವಿರೋಧ ಮಾಡುವುದು ಅವರ ವೈಯಕ್ತಿಕ ವಿಚಾರ. ಯಾರೊಬ್ಬರೂ ಕೂಡ ದಾಖಲೆಗಳನ್ನು ತೆಗೆದುಕೊಂಡು ಬಂದು ಚರ್ಚೆ ಮಾಡುವುದಿಲ್ಲ. ಇದರ ಸತ್ಯಾಂಶ ತಿಳಿದವರು ಯಾರು ಕೂಡ ವಿರೋಧ ಮಾಡುವುದಿಲ್ಲ ಎಂದರು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.