ಗಣಿನಾಡಲ್ಲಿ ನಡೆಯುತ್ತಾ ಆಪರೇಷನ್‌ ಕಮಲ?

ಮುನ್ಸೂಚನೆ ನೀಡಿದ ಈಶ್ವರಪ್ಪ ಹೇಳಿಕೆ

Team Udayavani, Jun 17, 2019, 2:33 PM IST

Udayavani Kannada Newspaper

ವೆಂಕೋಬಿ ಸಂಗನಕಲ್ಲು

ಬಳ್ಳಾರಿ: ರಾಜ್ಯದಲ್ಲಿ ಮತ್ತೂಮ್ಮೆ ‘ಆಪರೇಷನ್‌ ಕಮಲ’ ನಡೆದರೆ ಗಣಿನಾಡು ಬಳ್ಳಾರಿಯೇ ವೇದಿಕೆಯಾಗುತ್ತಾ ?

-ಹೌದು. ಈ ಅನುಮಾನಕ್ಕೆ ಕಾರಣವಾಗಿದ್ದು ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿಕೆ.

ಶಾಸಕ ಆನಂದ್‌ಸಿಂಗ್‌ ಜಿಂದಾಲ್ಗೆ ಭೂಮಿ ಪರಭಾರೆ ವಿರುದ್ಧ ಮಾತನಾಡಿರುವುದು ಹಾಗೂ ನಾಗೇಂದ್ರಗೆ ಸಚಿವ ಸ್ಥಾನ ಕೈತಪ್ಪಿರುವ ಹೊತ್ತಲ್ಲೇ ಬಳ್ಳಾರಿಯಿಂದಲೇ ಆಪರೇಷನ್‌ ಕಮಲ ಶುರುವಾಗಬಹುದು ಎಂಬ ಈಶ್ವರಪ್ಪ ಮಾತು ಇದಕ್ಕೆ ಪುಷ್ಟಿ ನೀಡಿದೆ.

ರಾಜ್ಯ ಸರ್ಕಾರ 3667 ಎಕರೆ ಜಮೀನನ್ನು ಜಿಂದಾಲ್ ಸಂಸ್ಥೆಗೆ ಪರಭಾರೆ ಮಾಡಲು ಸಜ್ಜಾಗಿರುವಾಗ ವಿಜಯನಗರ (ಹೊಸಪೇಟೆ) ಕ್ಷೇತ್ರದ ಕಾಂಗ್ರೆಸ್‌ ಶಾಸಕ ಬಿ.ಎಸ್‌.ಆನಂದ್‌ಸಿಂಗ್‌ ದಿಢೀರ್‌ ಸುದ್ದಿಗೋಷ್ಠಿ ಕರೆದು ಇದಕ್ಕೆ ವಿರೋಧ ವ್ಯಕ್ತಪಡಿಸಿ, ಹೋರಾಟದ ನೇತೃತ್ವ ವಹಿಸಲು ಸಿದ್ಧ ಎಂದಿರುವುದು ದೋಸ್ತಿ ಆಡಳಿತದ ಮೇಲಿನ ಒಳಬೇಗುದಿಯನ್ನು ಹೊರ ಹಾಕಿದಂತಾಗಿದೆ. ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ. ಸಿಂಗ್‌ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಲಿದ್ದಾರೆಯೇ ಎಂಬ ಗುಮಾನಿ ಎಲ್ಲೆಡೆ ಹಬ್ಬಿದೆ.

ನಾಗೇಂದ್ರ ಮೌನ?: ಈ ಮೊದಲು ರಮೇಶ್‌ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ‘ಆಪರೇಷನ್‌ ಕಮಲ’ ಯತ್ನದಲ್ಲಿ ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಪ್ರಮುಖ ಪಾತ್ರ ವಹಿಸಿದ್ದರು. ಅದು ವಿಫಲವಾಗುತ್ತಿದ್ದಂತೆ ಕಾಂಗ್ರೆಸ್‌ನಲ್ಲೇ ಸಕ್ರಿಯರಾಗಿದ್ದ ಅವರಿಗೆ ಮೊನ್ನೆ ನಡೆದ ಸಂಪುಟ ವಿಸ್ತರಣೆ ವೇಳೆಯೂ ಸಚಿವ ಸ್ಥಾನ ಕೈತಪ್ಪಿದೆ. ಈ ಹಿನ್ನೆಲೆಯಲ್ಲಿ ಅವರು ಸೈಲೆಂಟ್ ಆಗಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಈಶ್ವರಪ್ಪ ನೀಡಿದ ಸುಳಿವಿನಂತೆ ಈ ಇಬ್ಬರೂ ಶಾಸಕರು ಪುನಃ ಬಿಜೆಪಿ ಕದ ತಟ್ಟಲಿದ್ದಾರೆಯೇ ಕಾದು ನೋಡಬೇಕಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.