ವರ್ಗಾವಣೆಯಲ್ಲಿ ಒತ್ತಡ ಹೇರುವವರ ಹೆಸರು ಬಹಿರಂಗಪಡಿಸಿ

ಎಸ್‌ಎಸ್‌ಎಲ್ಸಿ ಪರೀಕ್ಷೆ ಮೌಲ್ಯಮಾಪನ ಮಾಡಿದ ಶಿಕ್ಷಕರಿಗೆ ಗೌರವ ಧನ ನೀಡಿ

Team Udayavani, Jul 1, 2019, 3:51 PM IST

1-July-33

ಬಳ್ಳಾರಿ: ವಿಧಾನ ಪರಿಷತ್‌ ಸದಸ್ಯ ಅರುಣ್‌ ಶಹಾಪುರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು

ಬಳ್ಳಾರಿ: ಶಿಕ್ಷಕರ ವರ್ಗಾವಣೆಯಲ್ಲಿ ಒತ್ತಡ ಹೇರುತ್ತಿರುವ ವಿಧಾನ ಪರಿಷತ್‌ ಸದಸ್ಯರ ಹೆಸರನ್ನು ಉನ್ನತ ಶಿಕ್ಷಣ ಸಚಿವರು ಬಹಿರಂಗ ಪಡಿಸಬೇಕು ಎಂದು ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಅರುಣ್‌ ಶಹಾಪೂರ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಎಸ್‌.ಆರ್‌. ಶ್ರೀನಿವಾಸ್‌ ಅವರು ಈಗಷ್ಟೇ ಶಿಕ್ಷಣ ಇಲಾಖೆಯ ಅಧಿಕಾರ ವಹಿಸಿಕೊಂಡಿದ್ದಾರೆ. ಶಿಕ್ಷಣ ಇಲಾಖೆ ಏನು ಎಂಬುದರ ಕುರಿತು ಅರಿಯಬೇಕಿದೆ. ಆದರೆ, ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಅವರು ಶಿಕ್ಷಕರ ವರ್ಗಾವಣೆ ವಿಷಯದಲ್ಲಿ ವಿಧಾನ ಪರಿಷತ್‌ ಸದಸ್ಯರು ಒತ್ತಡ ಹೇರುತ್ತಿರುವ ಹೇಳಿಕೆ ನೀಡಿದ್ದಾರೆ. ಅವರು ಇಷ್ಟು ಅಸಮರ್ಥರಾಗಬಾರದು. ಇದನ್ನು ನಿಭಾಯಿಸುವ ಮಟ್ಟಕ್ಕೆ ಅಧಿಕಾರ ನಡೆಸಬೇಕು ಎಂದರು.

ಸಮ್ಮಿಶ್ರ ಸರ್ಕಾರ ಬಂದು ಒಂದು ವರ್ಷ ಆಗಿದೆ. ಎನ್‌.ಮಹೇಶ್‌ ಮೊದಲು ಶಿಕ್ಷಣ ಸಚಿವರಾಗಿದ್ದರು. ಅವರು ರಾಜೀನಾಮೆ ಕೊಟ್ಟ ನಂತರ ಸಿಎಂ ಬಳಿ ಶಿಕ್ಷಣ ಖಾತೆ ಇತ್ತು. ಅಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗಲಿಲ್ಲ. ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಕುಸಿದಿದೆ. ಹೊಸ ಶಿಕ್ಷಣ ಸಚಿವರು ವರ್ಗಾವಣೆ ವಿಚಾರವಾಗಿ, ವಿಪ ಸದಸ್ಯರು ಒತ್ತಡ ಹೇರಿದ್ದಾರೆ ಅಂತಿದ್ದಾರೆ. ಇಂತಹ ವಿಷಯಗಳು ಬಂದಾಗ ಶಿಕ್ಷಣ ಕ್ಷೇತ್ರದ ಸಂಘಗಳ ಸಭೆ ಕರೆದು, ಸಲಹೆ ಪಡೆದುಕೊಳ್ಳಿ, ಮುಕ್ತವಾಗಿ ವರ್ಗಾವಣೆ ನಡೆಯಬೇಕಿದೆ. ಬಿಇಒ, ಡಿಡಿಪಿಐಗಳು ಹಣ ಪಡೆಯದೇ, ನಿಯಮ ಪಾಲಿಸಿ, ಶಿಕ್ಷಕರ ವರ್ಗಾವಣೆ ಮಾಡಲಿ ಎಂದು ಒತ್ತಾಯ ಮಾಡಿದರು.

ರಾಜ್ಯದಲ್ಲಿ ಕಳೆದ ಹಲವು ತಿಂಗಳಿನಿಂದ ಸಂಬಳ ನೀಡಿಲ್ಲ. ಈ ಹಿಂದೆ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಮೌಲ್ಯಮಾಪನ ಮಾಡಿದ ಶಿಕ್ಷಕರಿಗೆ ಗೌರವ ಧನ ನೀಡಿಲ್ಲ. ಈ ಸಮಸ್ಯೆಗಳ ಕುರಿತು ಚಿಂತನೆ ನಡೆಸಿ, ಪರಿಹಾರ ಕಂಡುಕೊಳ್ಳಬೇಕಾದ ಸಚಿವರು ಇತರೆ ರಾಜ್ಯಗಳ ಮಾದರಿ ಅರಿಯುವ, ಅಧ್ಯಯನ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ. ಕೇರಳ, ಗೋವಾ, ದೆಹಲಿ ಶಿಕ್ಷಣ ಮಾದರಿ ಅಧ್ಯಯನ ಕುರಿತು ಮಾತನಾಡುತ್ತಿರುವ ಸಚಿವ ಶ್ರೀನಿವಾಸ ಮೊದಲು ನಮ್ಮ ರಾಜ್ಯದ ಮಾದರಿ ಅರಿತು ಮುಂದುವರಿಯಬೇಕು ಎಂದು ಅವರು ತಿಳಿಸಿದರು.

ವಿಎಸ್‌ಕೆ ವಿವಿ ವಿವರಣೆ ಕೇಳಿದ ಸರ್ಕಾರ: ಇದೇ ವೇಳೆ ಇಲ್ಲಿನ ವಿಜಯನಗರ ಕೃಷ್ಣದೇವರಾಯ ವಿವಿಯಲ್ಲಿ ನಡೆಯುತ್ತಿರುವ ನೇಮಕಾತಿ ವಿವಾದ ಕುರಿತು ವಿವರಣೆ ನೀಡುವಂತೆ ಸರ್ಕಾರ ವಿವಿ ಆಡಳಿತ ಮಂಡಳಿಯನ್ನು ಕೇಳಿದೆ ಎಂದ ಅವರು, ವಿವಿಯಲ್ಲಿ ನಡೆಯುತ್ತಿರುವ ನೇರ ನೇಮಕಾತಿ ಕುರಿತು ದೃಶ್ಯಮಾಧ್ಯಮದಲ್ಲಿ ವರದಿ ಪ್ರಸಾರ ಆದ ಜತೆಗೆ ಮೇ 29ರಂದು ಅಖೀಲ ಭಾರತ ವಿದ್ಯಾರ್ಥಿ ಪರಿಷತ್‌ ದೂರು ನೀಡಿತ್ತು. ಎಬಿವಿಪಿ ಕಾರ್ಯಕರ್ತರು ಈ ಕುರಿತು ನನಗೂ ಸಹ ದೂರು ಸಲ್ಲಿಸಿದ್ದರು. ಇವನ್ನು ಆಧರಿಸಿ, ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯದ ಅಪರ ಮುಖ್ಯ ಕಾರ್ಯದರ್ಶಿ ವಿವಿಯ ಕುಲಪತಿ, ಕುಲಸಚಿವರಿಗೆ ಪತ್ರ ಬರೆದು ವಿವರಣೆ ಕೇಳಿದ್ದಾರೆ ಎಂದರು. ಅಗತ್ಯ ಎನಿಸಿದರೆ ಮುಂದಿನ ಅಧಿವೇಶನದ ವೇಳೆ ಸದನದಲ್ಲೂ ಸಹ ಈ ಕುರಿತು ವಿಷಯ ಪ್ರಸ್ತಾಪ ಮಾಡಲಿದ್ದೇನೆ ಎಂದರು.

ಟಾಪ್ ನ್ಯೂಸ್

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.