ಕ್ಷಯರೋಗ ತಡೆಗಟ್ಟಲು ಸಹಕಾರ ಅಗತ್ಯ
ಕೇಂದ್ರ ಕಾರಾಗೃಹದ ಅಧಿಧೀಕ್ಷಕ ಮಲ್ಲಿಕಾರ್ಜುನ ಬಿ. ಸ್ವಾಮಿ ಕರೆ •ಕ್ಷಯರೋಗ ಪತ್ತೆ-ಚಿಕಿತ್ಸೆ ಆಂದೋಲನ
Team Udayavani, Jul 24, 2019, 3:21 PM IST
ಬಳ್ಳಾರಿ: ಕೇಂದ್ರ ಕಾರಾಗೃಹದಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ಕ್ಷಯರೋಗ ಪತ್ತೆ ಹಚ್ಚುವಿಕೆ ಮತ್ತು ಚಿಕಿತ್ಸೆ ಆಂದೋಲನ ಕಾರ್ಯಕ್ರಮದಲ್ಲಿ ಕಾರಾಗೃಹದ ಅಧಿಧೀಕ್ಷಕ ಮಲ್ಲಿಕಾರ್ಜುನ ಬಿ. ಸ್ವಾಮಿ ಮಾತನಾಡಿದರು.
ಬಳ್ಳಾರಿ: ಸಾಂಕ್ರಾಮಿಕ ರೋಗಗಳಲ್ಲಿ ಒಂದಾದ ಕ್ಷಯರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ ಎಂದು ಕೇಂದ್ರ ಕಾರಾಗೃಹದ ಅಧಿಧೀಕ್ಷಕ ಮಲ್ಲಿಕಾರ್ಜುನ ಬಿ. ಸ್ವಾಮಿ ತಿಳಿಸಿದರು.
ನಗರದ ಕೇಂದ್ರ ಕಾರಾಗೃಹದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ರಾಷ್ಟ್ರೀಯ ಪರಿಷ್ಕೃತ, ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ ಹಮ್ಮಿಕೊಳ್ಳಲಾಗಿದ್ದ ಸಕ್ರಿಯ ಕ್ಷಯರೋಗ ಪತ್ತೆ ಹಚ್ಚುವಿಕೆ ಮತ್ತು ಚಿಕಿತ್ಸೆ ಆಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೆಮ್ಮುವಾಗ, ಸೀನುವಾಗ ಕರ್ಚಿಪ್ ಅನ್ನು ಬಳಸುವುದರಿಂದ ಹಾಗೂ ಇತರೆ ಸ್ಥಳಗಳಲ್ಲಿ ಉಗುಳುವುದನ್ನು ನಿಲ್ಲಿಸಬೇಕು. ಪ್ರತಿಯೊಬ್ಬ ವ್ಯಕ್ತಿಯು ತನ್ನ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬೇಕು ಎಂದ ಅವರು, ಕಾರಗೃಹದಲ್ಲಿ ಇರುವ ಎಲ್ಲರೂ ತಮ್ಮ ಸ್ವಚ್ಛತೆಗೆ ಆದ್ಯತೆ ನೀಡಬೇಕು. ವೈದ್ಯರು ನೀಡುವ ಔಷಧಗಳನ್ನು ಸರಿಯಾದ ರೀತಿಯಲ್ಲಿ ಸೇವಿಸುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ನಿರ್ಮೂಲನೆ ಮಾಡಬಹುದು ಎಂದು ವಿವರಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ| ಕೆ.ಜಿ. ವಿರೇಂದ್ರ ಕುಮಾರ ಮಾತನಾಡಿ, ‘ಕಾಲ ಬಂದಿದೆ, ಟಿಬಿ ಕೊನೆಗಾಣಿಸಲು’ ಎಂಬ ಘೋಷಣೆಯೊಂದಿಗೆ ಜುಲೈ 15ರಿಂದ 27ರವರೆಗೆ ಕ್ಷಯರೋಗವನ್ನು ಸಕ್ರಿಯವಾಗಿ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಆಂದೋಲನವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ನಿರಂತರ ಚಿಕಿತ್ಸೆಯಿಂದ ಕ್ಷಯರೋಗವನ್ನು ಗುಣಪಡಿಸಬಹುದು ಎಂದರು.
ಮೈಕ್ಯೋಬ್ಯಾಕ್ಟೀರಿಯಂ ಟ್ಯೂಬರ್ ಕ್ಯುಲೋಸಿಸ್ ಎಂಬ ಸೂಕ್ಷ್ಮಾಣು ಜೀವಿಯಿಂದ ಹರಡುವ ಟಿಬಿಯು ಶ್ವಾಸಕೋಶದ ಕ್ಷಯ ಮತ್ತು ಶ್ವಾಸಕೋಶೇತರ ಕ್ಷಯ ಎಂಬ ಎರಡು ವಿಧಗಳಿಂದ ಕ್ಷಯರೋಗಿ ಕೆಮ್ಮಿದಾಗ, ಸೀನಿದಾಗ ಹೊರಬರುವ ತುಂತುರುಗಳಿಂದ ರೋಗಾಣುಗಳು ಆರೋಗ್ಯವಂತ ವ್ಯಕ್ತಿಯ ದೇಹ ಸೇರಿ ಕ್ಷಯರೋಗದ ಸೋಂಕು ಉಂಟುಮಾಡುತ್ತದೆ ಎಂದು ಸಂಕ್ಷಿಪ್ತವಾಗಿ ವಿವರಿಸಿದರು.
ಕ್ಷಯರೋಗ ಹರಡುವಿಕೆ: ಆಂದೋಲನದಲ್ಲಿ ರೋಗ ನಿರ್ಣಯಿಸಿದ ಎಲ್ಲ ಪ್ರಕರಣಗಳಿಗೂ ಉಚಿತ ಚಿಕಿತ್ಸೆ ನೀಡಲಾಗುವುದು. ಒಮ್ಮೆ ಚಿಕಿತ್ಸೆಯನ್ನು ಆರಂಭಿಸಿದ ನಂತರ ಚಿಕಿತ್ಸೆಯನ್ನು ಅಪೂರ್ಣಗೊಳಿಸಬಾರದು. ಅರ್ಧದಲ್ಲಿ ಚಿಕಿತ್ಸೆಯನ್ನು ನಿಲ್ಲಿಸಬಾರದು. ಇದು ಎಂಡಿಆರ್ ಟಿಬಿಯಾಗಿ ಬದಲಾವಣೆಯಾಗಿ ಹೆಚ್ಚಿನ ತೊಂದರೆಗಳನ್ನು ಉಂಟುಮಾಡುವುದಲ್ಲದೆ 2 ವರ್ಷಗಳ ಚಿಕಿತ್ಸೆಗೆ ಗುರಿಯಾಗಿಸುತ್ತದೆ. ಅಲ್ಲದೇ, ದೇಹದ ಇತರೆ ಭಾಗಗಳಿಂದಲೂ ಸಾಂಕ್ರಾಮಿಕ ರೋಗಗಳು ಹರಡಬಹುದು ಎಂದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಎಚ್.ದಾಸಪ್ಪ ಮಾತನಾಡಿದರು. ನಗರ ಕ್ಷಯರೋಗ ಮೇಲ್ವಿಚಾರಕ ವಾಗೀಶ ಮಾತನಾಡಿ, ರಾಷ್ಟ್ರೀಯ ನಿಕ್ಷಯ ಪೋಷಣ ಅಡಿಯಲ್ಲಿ ಚಿಕಿತ್ಸಾ ಅವಧಿಯಲ್ಲಿ ರೋಗಿಗೆ ನೆರವಾಗುವ ದೃಷ್ಟಿಯಿಂದ ಚಿಕಿತ್ಸೆ ಪಡೆಯುವ ಪ್ರತಿ ಫಲಾನುಭವಿಗೆ ಮಾಸಿಕವಾಗಿ 500 ರೂ. ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಕಾರಾಗೃಹ ಆಸ್ಪತ್ರೆ ವೈದ್ಯರಾದ ಡಾ| ಕೆ.ಎಸ್.ಆರ್. ಗುಪ್ತಾ, ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ವಿರೇಶ ಎಚ್, ಬಸವರಾಜ ರಾಜಗುರು, ರಾಮಾಂಜೀನೆಯ, ಗುಡದಯ್ಯ, ಚಂದ್ರು, ಜ್ಯೋತಿಲಕ್ಷ್ಮೀ, ಕಾರಗೃಹ ಸಿಬ್ಬಂದಿ ವರ್ಗದವರು ಮತ್ತು ಗಾಂಧಿನಗರದ ನಗರ ಆರೋಗ್ಯ ಕೇಂದ್ರದ ಸಿಬ್ಬಂದಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ