ಸಾರಿಗೆ ಅಧಿಕಾರಿಗಳ ವಾಹನ ಬೇಟೆ ಚುರುಕು

ಮೂರು ದಿನಗಳಲ್ಲಿ 80 ಪ್ರಕರಣ ದಾಖಲು•ನಾಲ್ಕು ತಂಡಗಳ ರಚನೆ •ಕಠಿಣ ಕ್ರಮ

Team Udayavani, May 20, 2019, 11:16 AM IST

20-May-9

ಬಳ್ಳಾರಿ: ಸಿರುಗುಪ್ಪ ಪಟ್ಟಣದಲ್ಲಿ ಟ್ರ್ಯಾಕ್ಟರ್‌ಗಳಲ್ಲಿ ಭತ್ತದ ಮೂಟೆ ಸಾಗಿಸುತ್ತಿರುವುದು.

ಬಳ್ಳಾರಿ: ಹೈಕೋರ್ಟ್‌ ನಿರ್ದೇಶನ, ಕೆಎಸ್‌ಆರ್‌ಟಿಸಿ ಸೇರಿ ವಿವಿಧ ಸಂಘ ಸಂಸ್ಥೆಗಳು ನೀಡಿರುವ ದೂರನ್ನು ಆಧರಿಸಿ ಕಳೆದ ಕೆಲ ದಿನಗಳಿಂದ ಪ್ರಯಾಣಿಕ, ಸರಕು ಸಾಗಣೆ ವಾಹನಗಳ ತಪಾಸಣೆ (ಪ್ರವರ್ತನಾ ಕಾರ್ಯ) ನಡೆಸುತ್ತಿರುವ ಇಲ್ಲಿನ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಕೇವಲ ಮೂರು ದಿನಗಳಲ್ಲಿ 80ಕ್ಕೂ ಹೆಚ್ಚು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ. ಇದಕ್ಕಾಗಿ ನಾಲ್ಕು ತಂಡಗಳನ್ನು ರಚಿಸಲಾಗಿದ್ದು, ಮೇ 31ರವರೆಗೂ ತಪಾಸಣಾ ಕಾರ್ಯ ಮುಂದುವರಿಯಲಿದೆ.

ಸರಕು ಸಾಗಣಿಕಾ ವಾಹನಗಳಲ್ಲಿ ಕೃಷಿ, ಕೂಲಿ ಕಾರ್ಮಿಕರನ್ನು, ಪ್ರಯಾಣಿಕರನ್ನು ಕರೆದೊಯ್ಯುವಂತಿಲ್ಲ. ಅಂತಹ ವಾಹನಗಳಲ್ಲಿ ಮದುವೆ ದಿಬ್ಬಣಗಳು ಹೋಗುವಂತಿಲ್ಲ. ಅದಕ್ಕಾಗಿ ಮೀಸಲಿಟ್ಟಿರುವ ವಾಹನಗಳಲ್ಲೇ ಸಂಚರಿಸಬೇಕು ಎಂದು ಇತ್ತೀಚೆಗಷ್ಟೇ ಹೈಕೋರ್ಟ್‌ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ಇದರೊಂದಿಗೆ ಸರ್ಕಾರಿ ಬಸ್‌ ನಿಲ್ದಾಣಗಳ ಬಳಿ ಖಾಸಗಿ ಪ್ರಯಾಣಿಕ ವಾಹನಗಳು ನಿಲ್ಲಿಸುವಂತಿಲ್ಲ. ಪ್ರಯಾಣಿಕರನ್ನು ಹತ್ತಿಸಿಕೊಳ್ಳುವುದು, ಇಳಿಸುವುದು ಮಾಡುವಂತಿಲ್ಲ. ನಿಲ್ದಾಣದಿಂದ 500 ಮೀಟರ್‌ ದೂರದಲ್ಲಿ ವಾಹನಗಳನ್ನು ನಿಲ್ಲಿಸಬೇಕು ಎಂದು ಇಲ್ಲಿನ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ದೂರು ನೀಡಿದ್ದರು. ಅದೇ ರೀತಿ ಸಿರುಗುಪ್ಪ ಭಾಗದಲ್ಲಿ ಟ್ರ್ಯಾಕ್ಟರ್‌ಗಳಲ್ಲೇ ಭತ್ತದ ಮೂಟೆಗಳನ್ನು ಸಾಗಿಸುತ್ತಿದ್ದು, ಕ್ರಮ ಕೈಗೊಳ್ಳುವಂತೆ ಲಾರಿ ಅಸೋಸಿಯೇಷನ್‌ ಮುಖಂಡರು ದೂರು ನೀಡಿದ್ದರು. ನಗರ ಪ್ರದೇಶದಿಂದ ಸಮೀಪದ ಹಳ್ಳಿಗಳಿಗೆ ತೆರಳುವ ಆಟೋಗಳಲ್ಲೇ ಜನ ಸಂಚರಿಸುತ್ತಿದ್ದು, ಈ ಆಟೋಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಖಾಸಗಿ ಪ್ರಯಾಣಿಕ ವಾಹನಗಳ ಸಂಘದಿಂದ ದೂರು ಸಲ್ಲಿಸಲಾಗಿತ್ತು. ಈ ಎಲ್ಲ ದೂರುಗಳನ್ನು ಆಧರಿಸಿ ಕಳೆದ ಮೇ 17 ರಿಂದ ಕಾರ್ಯಾಚರಣೆಗೆ ಇಳಿದಿರುವ ಇಲ್ಲಿನ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಮೂರು ದಿನಗಳಲ್ಲಿ 80 ಪ್ರಕರಣಗಳನ್ನು ದಾಖಲಿಸಿದ್ದು, ಸಂಬಂಧಪಟ್ಟ ವಾಹನಗಳು, ಮಾಲೀಕರ ವಿರುದ್ಧ ಕ್ರಮಕ್ಕೆ ಮುಂದಾಗಿದೆ.

ಇಲ್ಲಿನ ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್‌ ಮಲ್ನಾಡ್‌, ಇಲಾಖೆಯ ಅಧಿಕಾರಿಗಳಾದ ಶ್ರೀನಿವಾಸ್‌ ಗಿರಿ, ಮೂರ್ತಿ ರವಿ, ಹೇಮಂತ್‌ ಕುಮಾರ್‌, ಇತರೆ ಜಿಲ್ಲೆ ಸಾರಿಗೆ ಅಧಿಕಾರಿಗಳಾದ ದಿಲೀಪ್‌ ಮಹೇಂದ್ರಕರ್‌, ಧರ್ಮರಾಜ್‌ ಪವಾರ್‌, ಪದ್ಮೇಶಾ ಸೇರಿ ಒಟ್ಟೂ ನಾಲ್ಕು ತಂಡಗಳನ್ನು ರಚಿಸಿದ್ದು, ಮೇ 17 ರಿಂದ ತಪಾಸಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಮೊದಲಿಗೆ ಸಿರುಗುಪ್ಪ ಪಟ್ಟಣದಲ್ಲಿ ಒಂದು ಟ್ರ್ಯಾಕ್ಟರ್‌ಗೆ ಎರಡೆರಡು ಟ್ರಾಲಿಗಳನ್ನು ಅಳವಡಿಸಿಕೊಂಡು ಭತ್ತದ ಮೂಟೆಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗಳ ಮೇಲೆ ದಾಳಿ ನಡೆಸಲಾಗಿದೆ.

ಬಳ್ಳಾರಿಯಲ್ಲಿ ಬಸ್‌ ನಿಲ್ದಾಣದ ಎದುರುಗಡೆಯೇ ಖಾಸಗಿ ಬಸ್‌, ವಾಹನಗಳನ್ನು ನಿಲ್ಲಿಸಲಾಗುತ್ತಿದ್ದು, ಅಂತಹವುಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜತೆಗೆ ಸಮೀಪದ ಹಳ್ಳಿಗೆ ಕೆಎಸ್ಸಾರ್ಟಿಸಿ ಬಸ್‌ಗಳು ಸಂಚರಿಸುತ್ತಿದ್ದರೂ, ಆಟೋ ಚಾಲಕರು ಪ್ರಯಾಣಿಕರನ್ನು ತಮ್ಮ ಆಟೋಗಳಲ್ಲಿ ಕರೆದೊಯ್ಯುತ್ತಿದ್ದಾರೆ. ಇದರಿಂದ ಸಾರಿಗೆ ಬಸ್‌ಗಳಿಗೆ ತೊಂದರೆಯಾಗಲಿದೆ. ಇಂತಹ ಪ್ರಯಾಣ ಪ್ರಯಾಣಿಕರಿಗೂ ಸೂಕ್ತವಲ್ಲ. ನಗರದಲ್ಲಿನ ಬಹುತೇಕ ಖಾಸಗಿ ಪ್ರಯಾಣಿಕ ಬಸ್‌ಗಳಲ್ಲಿ ಸುಮಾರು 5-6 ಟನ್‌ ಸರಕನ್ನು ನಿತ್ಯ ಸಾಗಿಸುವ ವಾಹನಗಳ ವಿರುದ್ಧ ಸೇರಿ ಒಟ್ಟು 80ಕ್ಕೂ ಹೆಚ್ಚು ಪ್ರಕರಣಗಳನ್ನು ಕೇವಲ ಮೂರು ದಿನಗಳಲ್ಲಿ ದಾಖಲಿಸಲಾಗಿದೆ ಎನ್ನುತ್ತಾರೆ ಇಲಾಖೆಯ ಅಧಿಕಾರಿಗಳು.

ಮೇ 31ರವರೆಗೆ ತಪಾಸಣೆ: ವಾಹನಗಳ ತಪಾಸಣಾ ಕಾರ್ಯ ಮೇ 31ವರೆಗೆ ಮುಂದುವರಿಯಲಿದೆ. ಸ್ಥಳೀಯ, ಹೊರಗಿನ ಅಧಿಕಾರಿಗಳು ಸೇರಿ ತಂಡವೊಂದರಲ್ಲಿ ಇಬ್ಬರು ಅಧಿಕಾರಿಗಳಂತೆ ಒಟ್ಟು ನಾಲ್ಕು ತಂಡ ರಚಿಸಲಾಗಿದೆ. ಸೋಮವಾರ ಬೆಳಗಾವಿ ಅಧಿಕಾರಿಗಳು ಬಳ್ಳಾರಿಯಲ್ಲಿ ತಪಾಸಣಾ ಕಾರ್ಯದಲ್ಲಿ ತೊಡಗಲಿದ್ದು, ಇನ್ನು ಹಲವು ವಾಹನಗಳ ವಿರುದ್ಧ ಕ್ರಮಕೈಗೊಳ್ಳುವ ಸಾಧ್ಯತೆಯಿದೆ.

ಸಿರುಗುಪ್ಪದಲ್ಲಿ ಟ್ರ್ಯಾಕ್ಟರ್‌ಗಳಿಗೆ ಎರಡೆರಡು ಟ್ರಾಲಿಗಳನ್ನು ಅಳವಡಿಸಿಕೊಂಡು ಭತ್ತದ ಮೂಟೆ ಸಾಗಿಸುತ್ತಿರುವ ಬಗ್ಗೆ ತಪಾಸಣೆ ನಡೆಸಲಾಗಿದೆ. ಅದು ಬೆಳೆ ಕಟಾವು ಮಾಡುವ ಡಿಸೆಂಬರ್‌-ಜನವರಿ ತಿಂಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಈ ಪ್ರಕ್ರಿಯೆ ನಡೆಯಲಿದೆ. ಅಲ್ಲಿನ ರೈಸ್‌ಮಿಲ್ ಮಾಲೀಕರನ್ನೆಲ್ಲ ಸಂಪರ್ಕಿಸಿ ಮೂರು ಟ್ರ್ಯಾಕ್ಟರ್‌ಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ. ಇನ್ನುಳಿದಂತೆ ಬಸ್‌ ನಿಲ್ದಾಣಗಳ ಬಳಿ ಖಾಸಗಿ ಸಾರಿಗೆ ವಾಹನಗಳ ನಿಲುಗಡೆ, ಸರಕು ಸಾಗಾಣಿಕೆ ವಾಹನಗಳಲ್ಲಿ ಕಾರ್ಮಿಕರ ಕರೆದೊಯ್ಯುವುದು, ಆಟೋಗಳಲ್ಲಿ ಪ್ರಯಾಣಿಕರ ಸಾಗಾಣಿಕೆ ಸೇರಿ ಕೇವಲ ಮೂರು ದಿನಗಳಲ್ಲಿ 80 ಪ್ರಕರಣಗಳನ್ನು ದಾಖಲಿಸಲಾಗಿದೆ.
•ಶ್ರೀಧರ್‌ ಮಲ್ನಾಡ್‌,
ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಬಳ್ಳಾರಿ.

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.