ವಿಜಯನಗರ 3ನೇ ಬಾರಿ ಉಪಚುನಾವಣೆಗೆ ಅಣಿ

1970ರ ಉಪಚುನಾವಣೆಯಲ್ಲಿ ಬಿ.ಸತ್ಯನಾರಾಯಣಸಿಂಗ್‌ ಗೆಲುವು

Team Udayavani, Nov 15, 2019, 1:39 PM IST

15-November-11

„ವೆಂಕೋಬಿ ಸಂಗನಕಲ್ಲು
ಬಳ್ಳಾರಿ:
ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಪ್ರತಿಷ್ಠಿತ ಕ್ಷೇತ್ರ ಎನಿಸಿಕೊಂಡಿರುವ ವಿಜಯನಗರ ವಿಧಾನಸಭಾ ಕ್ಷೇತ್ರ ಮೂರನೇ ಬಾರಿಗೆ ಉಪ ಚುನಾವಣೆಗೆ ಅಣಿಯಾಗಿದೆ. ಹಿಂದಿನ ಎರಡು ಉಪಚುನಾವಣೆಗಳಲ್ಲೂ ಸಿಂಗ್‌ ಕುಟುಂಬದವರೇ ಜಯ ಗಳಿಸಿದ್ದು, ಇದೀಗ ನಡೆಯುತ್ತಿರುವ ಉಪಚುನಾವಣೆಯಲ್ಲೂ ಸಿಂಗ್‌ ಕುಟುಂಬದ ನಾಗಾಲೋಟ ಮುಂದುವರಿಯಲಿದೆಯೇ ಎಂಬುದು ಮತದಾರರಲ್ಲಿ ಕುತೂಹಲ ಮೂಡಿಸಿದೆ.

ರಾಜ್ಯ ವಿಧಾನಸಭೆಗೆ 1967ರಲ್ಲಿ ನಡೆದ ಮೂರನೇ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಹೊಸಪೇಟೆ ಕ್ಷೇತ್ರದಿಂದ ಆರ್‌ .ನಾಗನಗೌಡ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿದ್ದರು. ಪಿ.ನಾಗಲಿಂಗಯ್ಯ, ಜಂಬಣ್ಣ ಕೋರಿಶೆಟ್ಟಿ ಎಂಬುವರು ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದರು. ಕ್ಷೇತ್ರದಲ್ಲಿ ಅಂದು 67,576 ಮತಗಳಿದ್ದು, ಚುನಾವಣೆಯಲ್ಲಿ 36,544 ಮತಗಳು ಚಲಾವಣೆಯಾಗಿದ್ದವು. ಈ ಪೈಕಿ 2580 ಮತಗಳು ತಿರಸ್ಕೃತವಾಗಿದ್ದವು.

ಚುನಾವಣೆಯಲ್ಲಿ 19,718 ಮತಗಳನ್ನು ಪಡೆದಿದ್ದ ಕಾಂಗ್ರೆಸ್‌ನ ಆರ್‌. ನಾಗನಗೌಡ, ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಪಿ. ನಾಗಲಿಂಗಯ್ಯ (12736) ವಿರುದ್ಧ 6982 ಮತಗಳ ಅಂತರದಿಂದ ಜಯ ಗಳಿಸಿದ್ದರು. ಮೂರನೇ ಸ್ಥಾನ ಪಡೆದಿದ್ದ ಜಂಬಣ್ಣ ಕೋರಿಶೆಟ್ಟಿ ಕೇವಲ 1510 ಮತಗಳನ್ನು ಪಡೆಯಲಷ್ಟೇ ಶಕ್ತರಾಗಿದ್ದರು. ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಜಯ ಗಳಿಸಿದ್ದ ಆರ್‌. ನಾಗನಗೌಡ, 1970ರಲ್ಲಿ ಅಕಾಲಿಕ ನಿಧನ ಹೊಂದಿದ್ದರಿಂದ ಹೊಸಪೇಟೆ (ವಿಜಯನಗರ) ಕ್ಷೇತ್ರ ಮೊದಲ ಬಾರಿಗೆ ಉಪ ಚುನಾವಣೆ ಎದುರಿಸಬೇಕಾಯಿತು.

ಮೊದಲನೇ ಉಪ ಚುನಾವಣೆ: ಆರ್‌.ನಾಗನಗೌಡ ನಿಧನ ಬಳಿಕ ಹೊಸಪೇಟೆ ಕ್ಷೇತ್ರಕ್ಕೆ 1970ರಲ್ಲಿ ಉಪಚುನಾವಣೆ ನಡೆಯಿತು. ಆಗಲೇ ರಾಜಕೀಯವಾಗಿ ಗುರುತಿಸಿಕೊಂಡಿದ್ದ ಸಿಂಗ್‌ ಕುಟುಂಬ ಉಪಚುನಾವಣೆಯಲ್ಲಿ ಬಿ . ಸತ್ಯನಾರಾಯಣ ಸಿಂಗ್‌ ಎನ್‌ಸಿಜೆ ಪಕ್ಷದಿಂದ ಸ್ಪರ್ಧಿಸಿದರೆ, ಪ್ರತಿಸ್ಪರ್ಧಿಯಾಗಿ ಪಿ. ಭೀಮಸೇನ ಶೆಟ್ಟಿ ಎನ್ನುವವರು ಎನ್‌ ಸಿಎನ್‌ ಪಕ್ಷದಿಂದ ಕ್ಕಿಳಿದಿದ್ದರು .

ಆಗ ಕ್ಷೇತ್ರದಲ್ಲಿ ನೋಂದಣಿಯಾಗಿದ್ದ 76,177 ಮತಗಳ ಪೈಕಿ 47,759 ಮತಗಳು ಚಲಾವಣೆಯಾಗಿದ್ದು, 2035 ಮತಗಳು ತಿರಸ್ಕೃತಗೊಂಡಿದ್ದವು. ಎನ್‌ಸಿಜೆ ಪಕ್ಷದ ಬಿ. ಸತ್ಯನಾರಾಯಣಸಿಂಗ್‌ 28,218 ಮತ ಪಡೆದು, ಪ್ರತಿಸ್ಪರ್ಧಿ ಎನ್‌ಸಿಎನ್‌ ಪಕ್ಷದ ಪಿ. ಭೀಮಸೇನಶೆಟ್ಟಿ (17506) ವಿರುದ್ಧ 10,712 ಮತಗಳ ಅಂತರದಿಂದ ಭರ್ಜರಿ ಜಯ ಗಳಿಸಿದ್ದರು. ಈ ಮೂಲಕ ರಾಜಕೀಯ ಸ್ಥಿರತೆ ಕಂಡುಕೊಂಡಿದ್ದ ಸಿಂಗ್‌ ಕುಟುಂಬ ಕ್ಷೇತ್ರದಲ್ಲೂ ತನ್ನದೇ ಆದ ಛಾಪು ಮೂಡಿಸಿದರು. ಬಳಿಕ 1972ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಕಣಕ್ಕಿಳಿದಿದ್ದ ಬಿ.ಸತ್ಯನಾರಾಯಣಸಿಂಗ್‌, 26,717 ಮತ ಪಡೆದು ಪ್ರತಿಸ್ಪರ್ಧಿ ಐಎನ್‌ಒ ಪಕ್ಷದ ಜಿ.ಶಂಕರಗೌಡ (17305) ವಿರುದ್ಧ 9412 ಮತಗಳ ಅಂತರದಿಂದ ಎರಡನೇ ಬಾರಿಗೆ ಗೆಲುವು ದಾಖಲಿಸಿದರು.

ನಂತರ ನಡೆದ 1978, 1983, 1985, 1989 ನಾಲ್ಕೂ ಚುನಾವಣೆಗಳಲ್ಲಿ ಸಿಂಗ್‌ ಕುಟುಂಬದಿಂದ ಯಾರೊಬ್ಬರೂ ಸ್ಪರ್ಧಿಸಿಲ್ಲ. 1989ರಲ್ಲಿ ರಾಜ್ಯ ವಿಧಾನಸಭೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಹೊಸಪೇಟೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜನತಾದಳ ಪಕ್ಷದ ಅಭ್ಯರ್ಥಿ ಗುಜ್ಜಲ ಹನುಮಂತಪ್ಪ 63,805 ಮತಗಳನ್ನು ಪಡೆದು ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಎಚ್‌. ಅಬ್ದುಲ್‌ ವಹಾಬ್‌ (31603) ವಿರುದ್ಧ 32,202 ಮತಗಳ ಅಂತರದಿಂದ ಭರ್ಜರಿ ಜಯ ಗಳಿಸಿದರು. ಈ ವೇಳೆಗಾಗಲೇ ಕ್ಷೇತ್ರದಲ್ಲಿ ಮತದಾರರ ಸಂಖ್ಯೆ ಪೈಕಿ 1,06,279 ಮತಗಳು ಚಲಾವಣೆಯಾಗಿ 6272 ಮತಗಳು ತಿರಸ್ಕೃತಗೊಂಡಿದ್ದವು.

1991ರ 2ನೇ ಉಪ ಚುನಾವಣೆ: ಗುಜ್ಜಲ ಹನುಮಂತಪ್ಪ ಶಾಸಕರಾದ ಕೆಲವೇ ವರ್ಷಗಳಲ್ಲಿ ನಿಧನರಾದರು. ಇದರಿಂದ ಹೊಸಪೇಟೆ ವಿಧಾನಸಭೆ ಕ್ಷೇತ್ರಕ್ಕೆ 1991ರಲ್ಲಿ ಎರಡನೇ ಬಾರಿಗೆ ಉಪ ಚುನಾವಣೆ ನಡೆದಿದ್ದು, ಆಗ ಸಿಂಗ್‌ ಕುಟುಂಬದ ರತನ್‌ಸಿಂಗ್‌ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿದರು. ಪ್ರತಿಸ್ಪರ್ಧಿಯಾಗಿ ಬಿಜೆಪಿಯ ಶಂಕರಗೌಡ, ಜನತಾದಳದಿಂದ ಗುಂಡಿ ಭರಮಪ್ಪ ಕಣಕ್ಕಿಳಿದಿದ್ದರು.

ಕಾಂಗ್ರೆಸ್‌ನ ರತನ್‌ಸಿಂಗ್‌ 27,021 ಮತಗಳನ್ನು ಪಡೆದು, ಬಿಜೆಪಿಯ ಶಂಕರಗೌಡ (26588) ವಿರುದ್ಧ ಕೇವಲ 433 ಮತಗಳ ಅಂತರದಿಂದ ಜಯ ಗಳಿಸಿದರು. ಜನತಾದಳದ ಗುಂಡಿ ಭರಮಪ್ಪ 18,908 ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನಕ್ಕಿಳಿದರು. ಕ್ಷೇತ್ರದಲ್ಲಿ 1,63,474 ಮತಗಳ ಪೈಕಿ 82,730 ಮತಗಳು ಚಲಾವಣೆಯಾಗಿದ್ದು, 6555 ಮತಗಳು ತಿರಸ್ಕೃತಗೊಂಡಿದ್ದವು.

3ನೇ ಉಪಚುನಾವಣೆ: ಅನರ್ಹ ಶಾಸಕ ಆನಂದ್‌ಸಿಂಗ್‌ ರಾಜೀನಾಮೆಯಿಂದ ವಿಜಯನಗರ ಕ್ಷೇತ್ರ ಇದೀಗ ಮೂರನೇ ಉಪ ಚುನಾವಣೆಗೆ ಅಣಿಯಾಗಿದೆ. ಬಿಜೆಪಿಯಿಂದ ಆನಂದ್‌ ಸಿಂಗ್‌ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್‌ ಪ್ರಬಲ ಅಭ್ಯರ್ಥಿಯ ಕೊರತೆ, ಕ್ಷೇತ್ರದಲ್ಲಿ ಸಿಂಗ್‌ ವರ್ಚಸ್ಸು ಸೇರಿ ಮೂರನೇ ಉಪ ಚುನಾವಣೆಯಲ್ಲೂ ‘ಸಿಂಗ್‌’ ಕುಟುಂಬದ ಗೆಲುವಿನ ಪರ್ವ ಮುಂದುವರಿಯಲಿದೆಯೇ ಕಾದು ನೋಡಬೇಕಿದೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.