ಜಂತು ನಿವಾರಣೆ ಮಾತ್ರೆ ಸೇವಿಸಿ

ಮಕ್ಕಳಿಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಶಿವರಾಜ ಹೆಡೆ ಕರೆ

Team Udayavani, Sep 27, 2019, 5:49 PM IST

27-Sepctember-16

ಬಳ್ಳಾರಿ: ಸದೃಢ ಆರೋಗ್ಯಕ್ಕಾಗಿ ಜಂತು ಹುಳು ನಿವಾರಣಾ ಮಾತ್ರೆಯನ್ನು ಮಕ್ಕಳು ಸೇವಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಶಿವರಾಜ ಹೆಡೆ ಹೇಳಿದರು.

ನಗರದ ಬಾಲಕಿಯರ ಸರ್ಕಾರಿ ಪಿಯು ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಮಕ್ಕಳಿಗೆ ಮಾತ್ರೆ ವಿತರಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

1ರಿಂದ 19 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಅಂಗನವಾಡಿ ಹಾಗೂ ಶಾಲಾ ಕಾಲೇಜುಗಳಲ್ಲಿ ಜಂತುಹುಳು ನಿವಾರಣೆಯ ಅಲ್ಬಂಡಜೋಲ್‌ ಮಾತ್ರೆಗಳನ್ನು ಚೀಪಿಸಿ ಸೇವಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಮಾತ್ರೆಯನ್ನು ಉಚಿತವಾಗಿ ನೀಡುತ್ತಿದ್ದು ತಪ್ಪದೇ ಚೀಪಿಸಬೇಕು. ಪ್ರಸ್ತುತ ಜಿಲ್ಲೆಯಲ್ಲಿ ಅಂಗನವಾಡಿ ಮತ್ತು ಶಾಲಾ-ಕಾಲೇಜುಗಳಲ್ಲಿ 1ರಿಂದ 19 ವರ್ಷದೊಳಗಿನ ಒಟ್ಟು 947790 ಮಕ್ಕಳಿಗೆ
ಮಾತ್ರೆ ಚೀಪಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಜಿಲ್ಲೆಯ 2784 ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಅನುದಾನಿತ 21865 ಮತ್ತು 1130 ಖಾಸಗಿ ಶಾಲೆಗಳಲ್ಲಿ ಮತ್ತು 270 ಕಾಲೇಜ್‌ ಹಾಗೂ ಐಟಿಐಗಳಲ್ಲಿ ಏಕಕಾಲಕ್ಕೆ ಮಾತ್ರೆ ಚೀಪಿಸಲಾಗುವುದು ಎಂದರು.

ಅಧ್ಯಕ್ಷತೆ ವಹಿಸಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶ್ರೀಧರನ್‌ ಮಾತನಾಡಿ, ಹೆಚ್ಚಿನ ರೋಗಗಳು ಅಶುಚಿತ್ವದ ಕಾರಣದಿಂದಾಗಿ ಹುಟ್ಟಿಕೊಳ್ಳುತ್ತವೆ. ಹಾಗಾಗಿ ಮಕ್ಕಳು ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಬೇಕು. ಆರೋಗ್ಯವೇ ಭಾಗ್ಯ ಎನ್ನುವಂತೆ ಉತ್ತಮ ಆರೋಗ್ಯ ಹೊಂದಿದಲ್ಲಿ ಮಾತ್ರ ಚಟುವಟಿಕೆಯಿಂದ ಇರಲು ಸಾಧ್ಯ. ಆರೋಗ್ಯದ ಕುರಿತು ಎಂದಿಗೂ ನಿರ್ಲಕ್ಷ್ಯ ವಹಿಸದಿರಿ ಹಾಗೂ ಶೌಚದ ನಂತರ ಕೈಗಳನ್ನು ಸಾಬೂನಿನಿಂದ
ತೊಳೆಯುವುದರಿಂದ ಪರೋಕ್ಷವಾಗಿ ಜಂತು ಹುಳು ಸೋಂಕು ತಡೆಯಬಹುದು ಎಂದರು.

ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಮಹಾಲಿಂಗನಗೌಡ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿ ಕಾರಿ ಡಾ| ಇಂದ್ರಾಣಿ, ಜಿಲ್ಲಾ ಸರ್ವೆಕ್ಷಣಾ ಧಿಕಾರಿ ಡಾ| ಮರಿಯಂ ಬಿ, ತಾಲೂಕಾ ಆರೋಗ್ಯಾಧಿಕಾರಿ ಡಾ| ಕೆ.ಜಿ. ವೀರೇಂದ್ರಕುಮಾರ, ವೈದ್ಯಾಧಿಕಾರಿ ಡಾ| ಕರುಣಾ, ಶಿಕ್ಷಣ ಇಲಾಖೆಯ
ಇಸಿಓ ಮೋಹಿನುದ್ದೀನ್‌, ಗಿರಿಮಲ್ಲ, ಉಪನ್ಯಾಸಕರಾದ ಯು. ಶ್ರೀನಿವಾಸ ಮೂರ್ತಿ, ಎ. ಈರಣ್ಣ, ಶ್ಯಾಮಣ್ಣ, ಡಿಎನ್‌ಓ ಸರೋಜ, ಆರ್‌ಬಿಎಸ್‌ಕೆ ಜಿಲ್ಲಾ ಸಂಯೋಜಕ ಮನೋಹರ, ಎವಿಡೆನ್ಸ್‌ ಆಕ್ಷನ್‌ನ ಷಡಾಕ್ಷರಿ, ಟಿಡಿವೈಎಚ್‌ಇಓ ಕೃಷ್ಣಾ ನಾಯ್ಕ, ಶಾಂತವ್ವ ಉಪ್ಪಾರ, ವಿಜಯಲಕ್ಷ್ಮೀ ಕುರಡಪ್ಪನವರ, ಮೇಘರಾಜ್‌, ನೇತ್ರಾ ಸೇರಿದಂತೆ ಶಾಲಾ ವಿಧ್ಯಾರ್ಥಿನಿಯರು ಹಾಗೂ ಉಪನ್ಯಾಸಕರು, ಟ್ಯಾಂಕ್‌ಬಂಡ್‌ ನಗರ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಇದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿ ಕಾರಿ ಈಶ್ವರ ಎಚ್‌.ದಾಸಪ್ಪವನರ ಸ್ವಾಗತಿಸಿದರು. ಉಪನ್ಯಾಸಕ ಚಾಂದಪಾಶಾ ವಂದಿಸಿದರು.

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.