ವಾಹನ ಉಪಕರ ಭರಿಸಲು ಸಜ್ಜಾಗಿ!

ವಾಹನಗಳ ಮಾಲೀಕರಿಂದ ವರ್ಷಕ್ಕೊಮ್ಮೆ ಸಂಗ್ರಹಹಳೆ ಪದ್ಧತಿಗೆ ಹೊಸ ಚಾಲನೆ

Team Udayavani, Nov 21, 2019, 12:51 PM IST

21-November-8

„ವೆಂಕೋಬಿ ಸಂಗನಕಲ್ಲು
ಬಳ್ಳಾರಿ: ವಸತಿ ತೆರಿಗೆ, ಕುಡಿವ ನೀರು, ಶೌಚಾಲಯ ಸೇರಿ ಬಳ್ಳಾರಿ ಮಹಾನಗರ ಪಾಲಿಕೆ ವಿಧಿಸುವ ಹಲವು ಬಗೆಯ ತೆರಿಗೆಗಳನ್ನು ಪಾವತಿಸುತ್ತಿರುವ ಸಾರ್ವಜನಿಕರು ಇದೀಗ ವಾಹನಗಳ ಮೇಲೂ ವಿಧಿಸುವ ಮೂಲಸೌಕರ್ಯ ತೆರಿಗೆಯನ್ನು ಭರಿಸಲು ಸಜ್ಜಾಗಬೇಕಿದೆ.

ಹೌದು….! ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಷ್ಟು ವರ್ಷಗಳ ಕಾಲ ಇಲ್ಲದ ವಾಹನಗಳ ಮೂಲಸೌಕರ್ಯ ಉಪಕರವನ್ನು ಇದೀಗ ಹೊಸದಾಗಿ ವಿಧಿಸಲಾಗುತ್ತಿದ್ದು, ವರ್ಷಕ್ಕೊಮ್ಮೆ ವಾಹನಗಳ ಮಾಲೀಕರ ಜೇಬಿಗೆ ಕತ್ತರಿ ಬೀಳಲಿದೆ. ವಾಹನಗಳ ಮೇಲೆ ಮೂಲಸೌಕರ್ಯ ಉಪಕರವನ್ನು ವಿಧಿಸುವಂತೆ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರ ಸೂಚನೆ ಮೇರೆಗೆ ಇಲ್ಲಿನ ಮಹಾನಗರ ಪಾಲಿಕೆ ಆಯುಕ್ತರು ನ. 13ರಂದು ಆದೇಶ ಹೊರಡಿಸಿದ್ದಾರೆ.

ಅದರಂತೆ ಪಾಲಿಕೆ ವ್ಯಾಪ್ತಿಯಲ್ಲಿರುವ ದ್ವಿಚಕ್ರ, ತ್ರಿಚಕ್ರ ವಾಹನ, ಲಘು ವಾಹನ, ಸಾರಿಗೆ, ಸರಕು ಸಾಗಾಣಿಕಾ ವಾಹನಗಳ ಮೇಲೆ ಮೂಲಸೌಕರ್ಯ ಉಪಕರವನ್ನು ನೇರವಾಗಿ ವಸೂಲಿ ಮಾಡಲು ಕರವಸೂಲಿಗಾರರು ಇನ್ನು ಮುಂದೆ ಮಾಲೀಕರ ಮನೆಬಾಗಿಲು ತಟ್ಟಲಿದ್ದಾರೆ.

ಏತಕ್ಕಾಗಿ ವಾಹನಗಳ ಉಪಕರ: ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ರಸ್ತೆ ನಿರ್ಮಾಣ, ಬೀದಿ ಬದಿ ವಿದ್ಯುತ್‌ ದೀಪಗಳ ಅಳವಡಿಕೆ, ರಸ್ತೆಗಳ ದುರಸ್ತಿ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತದೆ. ಅದಕ್ಕಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೊದಲಿನಿಂದಲೂ ಮೋಟಾರ್‌ ವಾಹನಗಳ ಮೂಲಸೌಕರ್ಯ ಉಪಕರವನ್ನು ನೇರವಾಗಿ ಮಾಲೀಕರಿಂದ ಸಂಗ್ರಹಿಸಲಾಗುತ್ತದೆ.

ಬಳ್ಳಾರಿ ಪಾಲಿಕೆಯಲ್ಲೂ ಕಳೆದ 2014-2015ರ ವರೆಗೂ ವಿಸ್ತರಿಸಲಾಗಿದೆ. ನಂತರದ ದಿನಗಳಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಉಪಕರ ಪಾವತಿ ಸ್ಥಗಿತಗೊಂಡಿದೆ. ಇದೀಗ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರೇ ವಾಹನಗಳ ಮೂಲಸೌಕರ್ಯ ಉಪಕರವನ್ನು ವಸೂಲಿ ಮಾಡುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ಇದೀಗ ಆದೇಶ ಹೊರಡಿಸಲಾಗಿದ್ದು, ವರ್ಷಕ್ಕೊಮ್ಮೆ ವಾಹನಗಳ ಮಾಲೀಕರಿಂದ ಉಪಕರವನ್ನು ಸಂಗ್ರಹಿಸಲಾಗುತ್ತದೆ. ಕರವಸೂಲಿಗಾರರೇ ಮಾಲೀಕರ ಮನೆ ಬಾಗಿಲಿಗೆ ತೆರಳಿ, ಕರವನ್ನು ಸಂಗ್ರಹಿಸಿ, ರಶೀದಿ ನೀಡಲಿದ್ದಾರೆ ಎಂದು ಪಾಲಿಕೆ ಉಪ ಆಯುಕ್ತ ಭೀಮಪ್ಪ ಸ್ಪಷ್ಟಪಡಿಸಿದ್ದಾರೆ.

ಆರ್‌ಟಿಒ ವಿಧಿಸಿಲ್ಲ: ವಾಹನಗಳನ್ನು ಹೊಸದಾಗಿ ಖರೀದಿಸಿದಾಗ ನೋಂದಣಿಗಾಗಿ ಸಂಬಂಧಪಟ್ಟ ಪ್ರಾದೇಶಿಕ ಸಾರಿಗೆ ಇಲಾಖೆಗೆ ಕೊಂಡೊಯ್ದಾಗ ಅಲ್ಲಿಯೂ ಮೂಲಸೌಕರ್ಯ ಉಪಕರವನ್ನು ಮಾಲೀಕರಿಂದ ವಸೂಲಿ ಮಾಡಬೇಕಿತ್ತು. ಆದರೆ, ಇಲ್ಲಿನ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ವಾಹನಗಳ ಬೆಲೆಗಷ್ಟೇ ತೆರಿಗೆ ಪಡೆಯಲಾಗುತ್ತಿದೆ. ಉಪಕರವನ್ನು ಸಂಗ್ರಹಿಸುವ ಪದ್ಧತಿ ಅಲ್ಲಿಯೂ ಸ್ಥಗಿತಗೊಂಡಿದೆ. ಹೀಗಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ ಈ ಕುರಿತು ಸ್ಪಷ್ಟಪಡಿಸಿಕೊಂಡು ಈ ಆದೇಶವನ್ನು ಹೊರಡಿಸಲಾಗಿದೆ.

ಇನ್ನುಮುಂದೆ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲೂ ವಾಹನ ನೋಂದಣಿ ವೇಳೆ ಕರ ವಿಧಿಸುವಂತೆ ಸೂಚಿಸಲಾಗುವುದು. ಅಲ್ಲಿ ಪಾವತಿಸಿರುವ ಬಗ್ಗೆ ಬಿಲ್‌ಗ‌ಳನ್ನು ಮನೆಗೆ ಬರುವ ಕರವಸೂಲಿಗಾರರಿಗೆ ತೋರಿಸಬಹುದು.

ಯಾವ ವಾಹನಗಳಿಗೆ ಎಷ್ಟೆಷ್ಟು ಉಪಕರ: ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ದ್ವಿಚಕ್ರ ವಾಹನಕ್ಕೆ 50 ರೂ, ಮೂರು ಚಕ್ರ ವಾಹನ 100 ರೂ, ನಾಲ್ಕು ಚಕ್ರ ವಾಹನ 300 ರೂ, ಪ್ರಯಾಣಿಕರನ್ನು ಸಾಗಿಸುವ ವಾಹನಗಳಿಗೆ 400 ರೂ., ಸರಕು ಸಾಗಾಣಿಕಾ ವಾಹನಗಳಿಗೆ 500 ರೂ.ಗಳ ಉಪಕರವನ್ನು ನಿಗ ಪಡಿಸಲಾಗಿದೆ. ವರ್ಷಕ್ಕೊಮ್ಮೆ ವಾಹನಗಳ ಮೇಲೆ ಈ ಉಪಕರವನ್ನು ಮಾಲೀಕರು ಪಾವತಿಸಬೇಕಿದೆ. ಬಳ್ಳಾರಿ ಮಹಾನಗರ ಪಾಲಿಕೆಯು ಮನೆ ತೆರಿಗೆ, ಕುಡಿವ ನೀರಿನ ತೆರಿಗೆಯನ್ನೇ ಸಮರ್ಪಕವಾಗಿ
ವಸೂಲಿ ಮಾಡದ ಪಾಲಿಕೆ ಸಿಬ್ಬಂದಿ, ಇದೀಗ ಹೊಸದಾಗಿ ವಾಹನಗಳ ಮಾಲೀಕರಿಂದ ಉಪಕರ ವಸೂಲಿಯನ್ನು ಎಷ್ಟರ ಮಟ್ಟಿಗೆ ಯಶಸ್ವಿಗೊಳಿಸುತ್ತಾರೋ ಅಥವಾ ಉಪಕರವನ್ನು ಪಾವತಿಸದಿದ್ದಲ್ಲಿ ಅಂತಹ ವಾಹನಗಳ ಮಾಲೀಕರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದರ ಬಗ್ಗೆ ಸ್ಪಷ್ಟತೆಯಿಲ್ಲ. ಹಾಗಾಗಿ ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿ ಮಟ್ಟಿಗೆ ಈ ಉಪಕರ ಸಂಗ್ರಹ ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.