ಬೇಡಿಕೆ ಈಡೇರಿಕೆಗೆ ಒತ್ತಾಯ

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ವೇತನ ಹೆಚ್ಚಿಸಿ: ಪ್ರತಿಭಟನೆ

Team Udayavani, Nov 28, 2019, 1:28 PM IST

28-November-10

ಬಳ್ಳಾರಿ: ವಿವಿಧೋದ್ದೇಶ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ವಿಶಿಷ್ಟಚೇತನರ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಹಾಗೂ ವಿಶಿಷ್ಟಚೇತನರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಒಕ್ಕೂಟದ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರ ಗ್ರಾಮೀಣ ಪುನರ್ವಸತಿ ಯೋಜನೆಯನ್ನು ವಿಶಿಷ್ಟಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಕಳೆದ 11ವರ್ಷಗಳಿಂದ ವಿಶಿಷ್ಟಚೇತನರಿಗಾಗಿ ವಿಶಿಷ್ಟಚೇತನರೇ ಆದ ಪದವೀಧರ ವಿಶಿಷ್ಟಚೇತನರನ್ನು ಎಂಆರ್‌ಡಬ್ಲೂ ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾದ ವಿಶಿಷ್ಟಚೇತನರನ್ನು ವಿಆರ್‌ಡಬ್ಲೂ ಆಗಿ ತಿಂಗಳ ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಎಂಆರ್‌ಡಬ್ಲೂ ಅವರಿಗೆ ಸದ್ಯ 6 ಸಾವಿರ ರೂ., ವಿಆರ್‌ ಡಬ್ಲೂ ಅವರಿಗೆ 3ಸಾವಿರ ರೂ. ತಿಂಗಳ ಗೌರವಧನ ಪಾವತಿಸಲಾಗುತ್ತಿದೆ. ನ್ಯಾಯಬದ್ಧವಾದ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸಾಕಷ್ಟು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಇಲ್ಲಿವರೆಗೆ ಕ್ರಮವಿಲ್ಲ. ಸಂಬಂ ಸಿದ ಇಲಾಖೆ ಮೇಲಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿವಿಧೋದ್ದೇಶ ಹಾಗೂ ಪುನರ್ವಸತಿ ಕಾರ್ಯಕರ್ತರ ಭದ್ರತೆ ಆಗುವವರೆಗೂ ಗೌರವಧನ ಹೆಚ್ಚಿಸಬೇಕು. ವಿಶಿಷ್ಟಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೂ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು. ವಿವಿಧೋದ್ದೇಶ ಮತ್ತು ಪುನರ್ವಸತಿ ಕಾರ್ಯಕರ್ತರ ಮಹಿಳೆಯರಿಗೆ ಗರ್ಭಿಣಿ ಸಮಯದಲ್ಲಿ 6 ತಿಂಗಳ ವೇತನ ಸಹಿತ ರಜೆ ನೀಡಬೇಕು, ಗ್ರಾಮೀಣ ಪುನರ್ವಸತಿ ಯೋಜನೆಯಡಿ ಕೆಲಸ ನಿರ್ವಹಿಸುವ ಎಂಆರ್‌ಡಬ್ಲೂ ಹಾಗೂ ವಿಆರ್‌ಡಬ್ಲೂ ಅಕಾಲಿಕ ಮರಣ ಹೊಂದಿದರೆ 50 ಸಾವಿರದಿಂದ 2 ಲಕ್ಷ ರೂ.ವರೆಗೆ ಸಹಾಯಧನ ಹೆಚ್ಚಿಸಬೇಕು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾನಿರತರು ಒತ್ತಾಯಿಸಿದರು. ಒಂದು ವೇಳೆ ನಿರ್ಲಕ್ಷ್ಯ  ವಹಿಸಿದರೆ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು. ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯ ನಿರ್ದೇಶಕ ಜಿ.ರುದ್ರೇಗೌಡ, ಒಕ್ಕೂಟದ ಜಿಲ್ಲಾಧ್ಯಕ್ಷ ಕರಿಬಸಯ್ಯ, ಜಿಲ್ಲಾ ಸಂಚಾಲಕ ಮಂಜುನಾಥ್‌, ಜಿಲ್ಲಾ ಕಾರ್ಯದರ್ಶಿ ರವಿಕುಮಾರ್‌, ಜಿಲ್ಲಾಧ್ಯಕ್ಷ ಡಿ.ನೇಮ್ಯಾನಾಯ್ಕ, ರಾಜ್ಯ ನಿರ್ದೇಶಕ ಆರ್‌.ಧನರಾಜ್‌ ಸೇರಿದಂತೆ ನೂರಾರು ವಿಶಿಷ್ಟಚೇತನರು ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.