ಕತ್ತಲ ಕರಗಿಸಲು ಕಾಡುತ್ತಿದೆ ಕಲ್ಲಿದ್ದಲ ಕೊರತೆ


Team Udayavani, Nov 12, 2017, 6:00 AM IST

Ban12111703Medn.jpg

ಬಳ್ಳಾರಿ: ಅಗತ್ಯವಿರುವ ಕಲ್ಲಿದ್ದಲಿನ ಪೂರೈಕೆಯಲ್ಲಿ ಕೊರತೆ ಉಂಟಾದ ಪರಿಣಾಮ ಬಿಟಿಪಿಎಸ್‌ ವಿದ್ಯುತ್‌ ಉತ್ಪಾದನೆಗಾಗಿ ಹೆಣಗಾಡುತ್ತಿದೆ. ಅಲ್ಲದೇ, ಕಲ್ಲಿದ್ದಲಿನ ಪೂರೈಕೆಯಲ್ಲಿ ವ್ಯತ್ಯಯ ಹಾಗೂ ಸಂಗ್ರಹ ಪ್ರಮಾಣ ಇಳಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್‌ ನಿಗಮಕ್ಕೆ ಪ್ರತಿದಿನ 1000 ಮೆಗಾವ್ಯಾಟ್‌ ವಿದ್ಯುತ್‌ ನೀಡಲು ಒಪ್ಪಂದ ಮಾಡಿಕೊಂಡಿದ್ದ ಬಿಟಿಪಿಎಸ್‌ಗೆ ಈಗ ಸಂಕಷ್ಟ ಎದುರಾಗಿದೆ.

ಬಿಟಿಪಿಎಸ್‌ ರಾಜ್ಯದ ವಿದ್ಯುತ್‌ ಜಾಲಕ್ಕೆ 1700 ಮೆ.ವ್ಯಾ. ವಿದ್ಯುತ್‌ ಪೂರೈಸುವ 500 ಮೆ.ವ್ಯಾ. ಸಾಮರ್ಥ್ಯದ ಎರಡು ಹಾಗೂ 700 ಮೆ.ವ್ಯಾ. ಸಾಮರ್ಥ್ಯದ ಒಂದು ಘಟಕ ಹೊಂದಿದೆ. ತನ್ನ ಸಾಮರ್ಥ್ಯದ ಪೂರ್ಣ ಪ್ರಮಾಣದ ವಿದ್ಯುತ್‌ ಉತ್ಪಾದಿಸಲು ಬಿಟಿಪಿಎಸ್‌ಗೆ ಪ್ರತಿದಿನ 17 ಸಾವಿರ ಟನ್‌ ಕಲ್ಲಿದ್ದಲಿನ ಅಗತ್ಯ ಇದೆ. ಪ್ರಸ್ತುತ ಬಿಟಿಪಿಎಸ್‌ನಲ್ಲಿ ಕೇವಲ 9000 ಟನ್‌ ಕಲ್ಲಿದ್ದಲು ಸಂಗ್ರಹವಿದ್ದು, ಇದರಿಂದ ಬಿಟಿಪಿಎಸ್‌ನ 500 ಮೆ.ವ್ಯಾ. ಸಾಮರ್ಥ್ಯದ ಒಂದು ಘಟಕವನ್ನು ಎರಡು ದಿನಗಳ ಕಾಲ ನಡೆಸಬಹುದಾಗಿದೆ. ನಂತರ ಪರಿಸ್ಥಿತಿ ಏನು ಎನ್ನುವ ಅನಿಶ್ಚಿತತೆ ಬಿಟಿಪಿಎಸ್‌ ಆಡಳಿತ ಮಂಡಳಿಯನ್ನು ಕಾಡುತ್ತಿದೆ.

ಕಾರಣ ಏನು?: ಬಿಟಿಪಿಎಸ್‌ನ 500 ಮೆ.ವ್ಯಾ. ಸಾಮರ್ಥ್ಯದ ಒಂದು ಘಟಕವನ್ನು ಒಂದು ದಿನ ಓಡಿಸಲು 5000 ಟನ್‌ ಕಲ್ಲಿದ್ದಲು ಬೇಕು. ಅಂದರೆ, 1700 ಮೆ.ವ್ಯಾ. ಸಾಮರ್ಥ್ಯದ 3 ಘಟಕಗಳನ್ನು ಓಡಿಸಲು 17,000 ಟನ್‌ ಕಲ್ಲಿದ್ದಲು ಬೇಕು. ಬಿಟಿಪಿಎಸ್‌ಗೆ ಸಿಂಗರೇಣಿ ಕೋಲ್‌ ಫೀಲ್ಡ್‌ನಿಂದ ನಿತ್ಯ 2 ರೈಲ್ವೆ ರೇಕುಗಳಲ್ಲಿ ತಲಾ 3,500 ಟನ್‌ನಂತೆ 7 ಸಾವಿರ ಟನ್‌ ಕಲ್ಲಿದ್ದಲು ಬರುತ್ತಿತ್ತು. ಆದರೆ, ಸಿಂಗರೇಣಿಯಿಂದ ಅಗತ್ಯ ಪ್ರಮಾಣದ ಕಲ್ಲಿದ್ದಲು ಪೂರೈಕೆ ಆಗುತ್ತಿಲ್ಲ. ಬಿಟಿಪಿಎಸ್‌ಗೆಂದೇ ಸಿಂಗರೇಣಿ ಕೋಲ್‌ ಮೈನ್ಸ್‌ ಪ್ರದೇಶದಲ್ಲಿ ಕಲ್ಲಿದ್ದಲಿನ ನಿಕ್ಷೇಪವನ್ನು ನಿಗದಿಪಡಿಸಿದ್ದು, ಅಲ್ಲಿಂದ ಕಲ್ಲಿದ್ದಲಿನ ಗಣಿಗಾರಿಕೆ ಇನ್ನೂ ಆರಂಭವಾಗಿಲ್ಲ. ಇದೇ ಕಲ್ಲಿದ್ದಲಿನ ಸಮಸ್ಯೆಗೆ ಮೂಲ ಎಂಬ ಮಾತುಗಳು ಕೇಳಿ ಬಂದಿವೆ.

ಕಲ್ಲಿದ್ದಲಿನ ಸರಬರಾಜು ಇಲ್ಲದೆ ಬಿಟಿಪಿಎಸ್‌ನಲ್ಲಿ ವಿದ್ಯುತ್‌ ಉತ್ಪಾದನೆ ಕುಂಠಿತವಾಗುತ್ತಿದ್ದು, ಇದರಿಂದ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳು ವಿದ್ಯುತ್‌ ಸರಬರಾಜು ಖೋತಾ ಎದುರಿಸುತ್ತಿವೆ. ಬೇಸಿಗೆಯಲ್ಲಿ ಕಲ್ಲಿದ್ದಲು ಸಮರ್ಪಕವಾಗಿತ್ತು. ಆದರೆ ನೀರಿಲ್ಲದಾಗಿತ್ತು. ಆದರೆ ಈಗ ನೀರಿದೆ ಕಲ್ಲಿದ್ದಲು ಇಲ್ಲ. ಹೀಗಾಗಿ ನೀರು, ಕಲ್ಲಿದ್ದಲುಗಳ ಕೊರತೆಯಿಂದ ಬಿಟಿಪಿಎಸ್‌ನಲ್ಲಿ ನಿರೀಕ್ಷಿತ ಪ್ರಮಾಣದ ವಿದ್ಯುತ್‌ ಉತ್ಪಾದನೆ ಆಗುತ್ತಿಲ್ಲ.

ಪ್ರಸ್ತುತ ಬಿಟಿಪಿಎಸ್‌ನ ಒಂದನೇ ಘಟಕದಲ್ಲಿ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ. ಘಟಕಕ್ಕೆ ಕಲ್ಲಿದ್ದಲು ಕೊರತೆ ಇದೆ. ಒಡಿಶಾದ ಮಹಾನದಿ ಕೋಲ್‌ ಫೀಲ್ಡ್‌ನಿಂದ ಸಮುದ್ರ ಮಾರ್ಗದ ಮೂಲಕ ಆಂಧ್ರದ ಕೃಷ್ಣಪಟ್ಟಣಂ ಬಂದರಿಗೆ ಸರಕು ಸಾಗಾಣಿಕೆ ಹಡಗಿನಲ್ಲಿ ಬರುವ ಕಲ್ಲಿದ್ದಲನ್ನು ಬಿಟಿಪಿಎಸ್‌ಗೆ ತರಿಸಿಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ. ಕಲ್ಲಿದ್ದಲಿನ ಸರಬರಾಜು ಸುಗಮವಾಗಬೇಕು. ಪ್ರಸ್ತುತ ಇಲ್ಲಿ ವಿದ್ಯುತ್‌ ಉತ್ಪಾದಿಸಲು ಆರ್‌ಟಿಪಿಎಸ್‌ನಿಂದ ಕಲ್ಲಿದ್ದಲು ಎರವಲು ಪಡೆಯಲಾಗುತ್ತಿದೆ.
– ಎಸ್‌.ಮೃತ್ಯುಂಜಯ, ಇಡಿ, ಬಿಟಿಪಿಎಸ್‌

– ಎಂ.ಮುರಳಿಕೃಷ್ಣ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.