ಬೆಂಗಳೂರು ಗಲಭೆ ಆರೋಪಿಗಳು ಬಳ್ಳಾರಿಗೆ ಶಿಫ್ಟ್: ಬಳ್ಳಾರಿ ಜೈಲಿನ 16 ಖೈದಿಗಳಿಗಿದೆ ಕೋವಿಡ್ !


Team Udayavani, Aug 14, 2020, 10:08 AM IST

ಬೆಂಗಳೂರು ಗಲಭೆ ಆರೋಪಿಗಳು ಬಳ್ಳಾರಿಗೆ ಶಿಫ್ಟ್: ಬಳ್ಳಾರಿ ಜೈಲಿನ 16 ಖೈದಿಗಳಿಗಿದೆ ಕೋವಿಡ್ !

ಬಳ್ಳಾರಿ: ಬೆಂಗಳೂರಿನ ಕಾಡುಗೊಂಡನಹಳ್ಳಿ ಮತ್ತು ದೇವರ ಜೀವನಹಳ್ಳಿಯಲ್ಲಿ ಮಂಗಳವಾರ ರಾತ್ರಿ ನಡೆದ ಗಲಭೆಯ ಆರೋಪಿಗಳಲ್ಲಿ ಕೆಲವರನ್ನು ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಆದರೆ ಬಳ್ಳಾರಿಯ ಕೇಂದ್ರ ಕಾರಾಗೃಹದ 16 ಮಂದಿಗೆ ಖೈದಿಗಳಿಗೆ ಕೋವಿಡ್ 19 ಪಾಸಿಟಿವ್ ಕಂಡು ಬಂದಿದೆ.

ಬೆಂಗಳೂರು ಗಲಭೆಯ ಆರೋಪಿಗಳನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡುತ್ತಿರುವ ವಿಚಾರ ತಿಳಿದು ಬಳ್ಳಾರಿ ಜೈಲಿನ ಸ್ಥಿತಿಗತಿಯ ಬಗ್ಗೆ ಉದಯವಾಣಿ ವಿಚಾರಿಸಿದಾಗ ಈ ಮಾಹಿತಿ ತಿಳಿದುಬಂದಿದೆ.

ಕೇಂದ್ರ ಕಾರಾಗೃಹದ 16 ಜನ ಖೈದಿಗಳಿಗೆ ಕೋವಿಡ್ ಸೋಂಕು ದೃಢವಾಗಿದೆ. ಇತ್ತೀಚೆಗೆ ಪೆರೋಲ್ ಮೇಲೆ ಹೋಗಿದ್ದ ಏಳು ಜನರು ಮತ್ತು ನಗರದಲ್ಲಿ ನಡೆದ ಕೊಲೆ ಪ್ರಕರಣವೊಂದರಲ್ಲಿ ಬಂಧಿಸಲಾಗಿರುವ 9 ಜನ ಆರೋಪಿಗಳಿಗೆ ಸೋಂಕು ಇರುವುದು ಪತ್ತೆಯಾಗಿದೆ. ಈ ಎಲ್ಲ ಸೋಂಕಿತರನ್ನು ಐಸೋಲೇಷನ್ ವಾರ್ಡ್ ನಲ್ಲಿಟ್ಟು ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದ್ದಾರೆ.

ಬಳ್ಳಾರಿ

ಇದನ್ನೂ ಓದಿ: ಬೆಂಗಳೂರು ಗಲಭೆ: ರಾತ್ರೋರಾತ್ರಿ ಸಿಸಿಬಿ ದಾಳಿ, ಕಾರ್ಪೋರೇಟರ್ ಪತಿ ಸೇರಿ 60 ಮಂದಿಯ ಬಂಧನ

ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಇದುವರೆಗೆ 206 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್, ಡಿಸಿಪಿ ಕುಲ್ ದೀಪ್ ಕುಮಾರ್ ಜೈನ್, ಡಿಸಿಪಿ ರವಿಕುಮಾರ್ ನೇತೃತ್ವದಲ್ಲಿ ಕಳೆದ ರಾತ್ರಿ ಹಲವೆಡೆ ದಾಳಿ ಮಾಡಿ ಕಾರ್ಪೋರೇಟರ್ ಇರ್ಷಾದ್ ಬೇಗಂ ಪತಿ ಕಲೀಂ ಪಾಷಾ ಸೇರಿದಂತೆ 60 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು ದಾಳಿ ಪ್ರಕರಣ ಆರೋಪಿಗಳು ಬಳ್ಳಾರಿ ಜೈಲಿಗೆ ಶಿಫ್ಟ್ ! ಕಾರಣವೇನು ಗೊತ್ತಾ?

ಬಳ್ಳಾರಿ

ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಆರಂಭದಲ್ಲಿ ಜಿಲ್ಲೆಯಲ್ಲಿ ಕೇವಲ ಬೆರಳೆಣಿಕೆಯಷ್ಟಿದ್ದ ಸೋಂಕಿತರ ಸಂಖ್ಯೆ ಇದೀಗ 12 ಸಾವಿರಕ್ಕೂ ಹೆಚ್ಚು ಜನರಲ್ಲಿ ದೃಢಪಟ್ಟಿದೆ. ಜತೆಗೆ ಜಿಲ್ಲಾಧಿಕಾರಿ ಕಚೇರಿ, ಆಹಾರ, ಆರೋಗ್ಯ ಇಲಾಖೆ, ಕೃಷಿ, ಪೊಲೀಸ್ ಇಲಾಖೆಗಳಲ್ಲಿ ಹಲವಾರು ಅಧಿಕಾರಿಗಳಿಗೂ ಆವರಿಸಿದ್ದು, ಕೆಲವರು ಸೋಂಕಿಗೆ ಬಲಿಯಾಗಿದ್ದಾರೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.