5ನೇ ಸೆಮಿಸ್ಟರ್‌ ಪರೀಕ್ಷೆಬರೆದರೂ ಫಲಿತಾಂಶದಲ್ಲಿ ಗೈರು!


Team Udayavani, Feb 12, 2019, 8:55 AM IST

bell-3.jpg

ಕೊಪ್ಪಳ: ಬಳ್ಳಾರಿ ವಿಶ್ವವಿದ್ಯಾಲಯವು ಒಂದಿಲ್ಲೊಂದು ಕಾರಣಕ್ಕೆ ಸದಾ ಸುದ್ದಿಯಲ್ಲಿರುತ್ತದೆ. ವಿದ್ಯಾರ್ಥಿಗಳು ಬಿ.ಎ. 5ನೇ ಸೆಮಿಸ್ಟರ್‌ ಪರೀಕ್ಷೆ ಬರೆದರೂ ಸಹಿತ ಫಲಿತಾಂಶದಲ್ಲಿ ಗೈರೆಂದು ನಮೂದಿಸಿ ಮತ್ತೂಂದು ಎಡವಟ್ಟು ಮಾಡಿಕೊಂಡಿದೆ. ಹೀಗಾಗಿ ವಿವಿಯ ಎಡವಟ್ಟುಗಳ ಬಗ್ಗೆ ಶಿಕ್ಷಣ ತಜ್ಞರು, ಹಲವು ಸಂಘಟನೆಗಳು ಸಿಡಿಮಿಡಿಗೊಳ್ಳುತ್ತಿದೆ.

ಹೌದು. ಕೊಪ್ಪಳ ಜಿಲ್ಲೆಯ ಗಂಗಾವತಿಯ ಶ್ರೀ ಕೊಲ್ಲಿ ನಾಗೇಶ್ವರರಾವ್‌ ಸರ್ಕಾರಿ ಮಹಾವಿದ್ಯಾಲಯದಲ್ಲಿ 2018ರಲ್ಲಿ ಹೊನ್ನೂರಪ್ಪ, ವಿರೇಶ ಎಂಬ ವಿದ್ಯಾರ್ಥಿಗಳ ಬಿ.ಎ. 5ನೇ ಸೆಮಿಸ್ಟರ್‌ನ ಆರೂ ಪರೀಕ್ಷೆ ಬರೆದರೂ ಒಂದು ವಿಷಯದಲ್ಲಿ ವಿದ್ಯಾರ್ಥಿ ಗೈರು ಹಾಜರಾಗಿದ್ದಾನೆ ಎಂದು ಫಲಿತಾಂಶದಲ್ಲಿ ತೋರಿಸಲಾಗಿದೆ. ಇದನ್ನು ನೋಡಿರುವ ವಿದ್ಯಾರ್ಥಿಗಳು ದಿಗ್ಭ್ರಾಂತರಾಗಿದ್ದು, ದಿಕ್ಕು ಕಾಣದೇ ಅವರಿವರ ಬಳಿ ಪರದಾಡುವಂತ ಸ್ಥಿತಿ ಬಂದಿದೆ.

ವಿವಿ ನಡೆಸಿದ ಪರೀಕ್ಷೆಗೆ ಹಾಜರಾಗಿರುವ ಈ ಇಬ್ಬರು ವಿದ್ಯಾರ್ಥಿಗಳು ಉತ್ತಮವಾಗಿಯೇ ಪರೀಕ್ಷೆ ಬರೆದಿದ್ದು, ರಾಜ್ಯಶಾಸ್ತ್ರ ವಿಷಯದಲ್ಲಿ ಗೈರು ಹಾಜರಾಗಿದ್ದಾರೆಂದು ವಿವಿ ವೆಬ್‌ಸೈಟ್‌ನಲ್ಲಿ ತೋರಿಸಲಾಗುತ್ತಿದೆ. ಫಲಿತಾಂಶದಲ್ಲಿನ ಗೊಂದಲ ಬಗೆಹರಿಸಿಕೊಳ್ಳಲು ವಿದ್ಯಾರ್ಥಿಗಳು ಸಂಬಂಧಿಸಿದ ಕಾಲೇಜು ಉಪನ್ಯಾಸಕರು ಸೇರಿದಂತೆ ಪ್ರಾಚಾರ್ಯರನ್ನು ಸಂಪರ್ಕಿಸಿದ್ದಾರೆ. ಆದರೆ ಅವರು ಸರಿಯಾಗಿ ಸ್ಪಂದನೆ ಮಾಡುತ್ತಿಲ್ಲ. ನೀವೂ ವಿಶ್ವವಿದ್ಯಾಲಯಕ್ಕೆ ಬರಬೇಕು. ಅಲ್ಲಿಯೇ ಈ ತೊಂದರೆ ಬಗೆಹರಿಯಲಿದೆ. ನಮ್ಮಿಂದ ಏನೂ ತಪ್ಪಾಗಿಲ್ಲ ಎನ್ನುವ ಮಾತನ್ನಾಡಿ ವಿದ್ಯಾರ್ಥಿಗಳನ್ನು ಸುಮ್ಮನಿರಿಸಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳಿಗೆ ಪದವಿ ಹಂತದಲ್ಲಿ ವಿಷಯವಾರು ನೀಡುವ ಆಂತರಿಕ ಅಂಕಗಳಲ್ಲಿ ಈ ಎಡವಟ್ಟು ನಡೆದಿದೆ ಎನ್ನುವ ಮಾತು ಕೇಳಿದರೂ ಸಹಿತ ಯಾರೋ ಮಾಡಿದ ತಪ್ಪಿಗೆ ವಿದ್ಯಾರ್ಥಿಗಳು ಭವಿಷ್ಯ ಹಾಳಾಗುತ್ತಿದೆ ಎಂದು ಸಂಘಟನೆಗಳು ವಿವಿ ಕಾರ್ಯ ವೈಖರಿಗೆ ಆಕ್ರೊಶ ವ್ಯಕ್ತಪಡಿಸಿವೆ.

25ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸಮಸ್ಯೆ:
ಕೇವಲ ಕೊಲ್ಲಿ ನಾಗೇಶ್ವರರಾವ್‌ ಮಹಾವಿದ್ಯಾಲಯದ ವಿದ್ಯಾರ್ಥಿಗಳದ್ದಷ್ಟೇ ಅಲ್ಲ. ವಿವಿ ವ್ಯಾಪ್ತಿಯಲ್ಲಿನ ಹಲವು ಪದವಿ ಕಾಲೇಜುಗಳಲ್ಲಿಯೂ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶದಲ್ಲಿ ಗೈರು ಎಂದು ನಮೂದು ಮಾಡಿ ಪ್ರಕಟಿಸಲಾಗಿದೆ ಎನ್ನುವ ಮಾತು ಕೇಳಿ ಬಂದಿವೆ. ಸದ್ಯಕ್ಕೆ ಕೆಲವೇ ವಿದ್ಯಾರ್ಥಿಗಳ ತೊಂದರೆ ಮಾಧ್ಯಮದ ಮುಂದೆ ಬೆಳಕಿಗೆ ಬಂದಿದೆ. ಇದರ ಜೊತೆಗೆ ಬಿ.ಎಸ್‌ಸಿ ವಿಭಾಗದಲ್ಲಿ ಪರೀಕ್ಷಾ ಮೌಲ್ಯಮಾಪನ ಸರಿಯಾಗಿಲ್ಲ ಎನ್ನುವ ಆಪಾದನೆ ಕೇಳಿ ಬಂದಿದೆ.

ಒಟ್ಟಿನಲ್ಲಿ ಬಳ್ಳಾರಿ ವಿಶ್ವವಿದ್ಯಾಲಯವು ಈ ಬಾರಿ ಪರೀಕ್ಷಾ ಫಲಿತಾಂಶದಲ್ಲಿ ಗೈರು ಎಂದು ನಮೂದಿಸಿ ಫಲಿತಾಂಶ ಪ್ರಕಟಿಸಿದ್ದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ಕೂಲಂಕುಶವಾಗಿ ಪರಿಶೀಲನೆ ನಡೆದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಅಗತ್ಯವಿದೆ.

ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶದಲ್ಲಿ ಗೈರು ಎಂದು ನಮೂದಾಗಿರುವ ಕುರಿತು ನನ್ನ ಗಮನಕ್ಕೆ ಬಂದಿದೆ. ನಾವು ವಿವಿ ಅಧಿಕಾರಿಗಳ ಜೊತೆ ಮಾತನಾಡಿದ್ದೇವೆ. ಕೇವಲ ನಮ್ಮ ಕಾಲೇಜಿನಲ್ಲಷ್ಟೇ ಈ ಸಮಸ್ಯೆಯಾಗಿಲ್ಲ. ಬೇರೆ ಕಾಲೇಜಿನಲ್ಲೂ ಇದೇ ರೀತಿ ಸಮಸ್ಯೆಯಾಗಿದೆ. ನಾವು ಶೀಘ್ರ ವಿಶ್ವವಿದ್ಯಾಲಯಕ್ಕೆ ತೆರಳಿ ಈ ತೊಂದರೆ ನಿವಾರಿಸಲಿದ್ದೇವೆ.
•ನಾರಾಯಣಗೌಡ ಹೆಸರೂರು, ಕೊಲ್ಲಿ ನಾಗೇಶ್ವರರಾವ್‌ ಕಾಲೇಜು ಪ್ರಾಚಾರ್ಯ

ಬಳ್ಳಾರಿ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಪ್ರತಿ ವರ್ಷವೂ ಒಂದಿಲ್ಲೊಂದು ಎಡವಟ್ಟು ಮಾಡಿಕೊಂಡು ವಿದ್ಯಾರ್ಥಿಗಳಿಂದ ಅನಗತ್ಯವಾಗಿ ಹಣ ಖರ್ಚು ಮಾಡಿಸುತ್ತಿದೆ. ಕೂಡಲೇ ವಿದ್ಯಾರ್ಥಿಗಳ ಫಲಿತಾಂಶದಲ್ಲಿನ ತೊಂದರೆ ಸರಿಪಡಿಸಬೇಕು. ಇಲ್ಲಿದ್ದರೆ ವಿವಿ ವಿರುದ್ಧ ಹೋರಾಟ ಮಾಡಲಾಗುವುದು.
•ಅಮರೇಶ ಕಡಗದ, ಎಸ್‌ಎಫ್‌ಐ ಜಿಲ್ಲಾಧ್ಯಕ್ಷ

ನಾನು ಪದವಿ 5ನೇ ಸೆಮಿಸ್ಟರ್‌ನಲ್ಲಿ ಆರು ವಿಷಯಕ್ಕೆ ಪರೀಕ್ಷೆ ಬರೆದಿದ್ದೇನೆ. ಆದರೂ ನನ್ನ ಫಲಿತಾಂಶ ಪಟ್ಟಿಯಲ್ಲಿ ರಾಜ್ಯಶಾಸ್ತ್ರ ವಿಷಯಕ್ಕೆ ಗೈರು ಎಂದು ತೋರಿಸಲಾಗಿದೆ. ನನ್ನ ಸ್ನೇಹಿತ ಪರೀಕ್ಷಾ ಫಲಿತಾಂಶದಲ್ಲೂ ಇದೇ ರೀತಿ ಬಂದಿದೆ. ನಾವು ಕಾಲೇಜು ಪ್ರಾಚಾರ್ಯರ ಗಮನಕ್ಕೆ ತಂದಿದ್ದೇವೆ. ಇದು ಸರಿಯಾಗದಿದ್ದರೆ ಹೋರಾಟ ಮಾಡಲಿದ್ದೇವೆ.
•ಹೊನ್ನೂರಪ್ಪ, ವಿದ್ಯಾರ್ಥಿ

ನಾನು ಬೆಂಗಳೂರಿನಲ್ಲಿದ್ದೇನೆ. ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆ ಎನ್ನುವುದು ನನ್ನ ಗಮನಕ್ಕೆ ಬಂದಿದೆ.ಸಮಸ್ಯೆ ಇರುವುದನ್ನು ನನ್ನ ಗಮನಕ್ಕೆ ತಂದಿದ್ದೀರಾ.. ನಾನು ವಿವಿ ಮೌಲ್ಯಮಾಪನ ವಿಭಾಗದ ಅಧಿಕಾರಿಗಳ ಜೊತೆ ಮಾತನಾಡುವೆ.
•ಸುಭಾಸ್‌, ಬಳ್ಳಾರಿ ವಿವಿ ಕುಲಪತಿ

ದತ್ತು ಕಮ್ಮಾರ

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.