83 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ: ಪ್ರಕಾಶ್
Team Udayavani, Jun 7, 2018, 5:16 PM IST
ಕೂಡ್ಲಿಗಿ: ಈ ಬಾರಿ ಮುಂಗಾರು ಆರಂಭದ ಪೂರ್ವದಲ್ಲಿಯೇ ಮಳೆರಾಯನ ಆರ್ಭಟ ಜೋರಾಗಿದ್ದು, ರೈತರ ಕೃಷಿ ಚಟುವಟಿಕೆಗಳು ಗರಿಗೆದರಿವೆ.
ಕಳೆದ ಬಾರಿ ಮುಂಗಾರು ವೈಫಲ್ಯದಿಂದಾಗಿ ಮಳೆಗಾಗಿ ದೇವರ ಮೊರೆ ಹೋಗಿದ್ದ ರೈತರು, ಈ ಬಾರಿ ಮುಂಗಾರು ಆರಂಭದ ಮೊದಲೇ ಸಮೃದ್ಧಿ ಮಳೆಯಾಗಿ ಕೆರೆ ಕಟ್ಟೆಗಳು ತುಂಬಿದ್ದು, ಅನ್ನದಾತನಿಗೆ ನೆಮ್ಮದಿ ತಂದಿದ್ದು, ಈಗಾಗಲೇ
ಬಿತ್ತನೆ ಕಾರ್ಯ ಭರದಿಂದ ನಡೆದಿದೆ.
ತಾಲೂಕಿನಲ್ಲಿ 1.1 ಲಕ್ಷ ಹೆಕ್ಟೇರ್ ಭೂಮಿ ಬಿತ್ತನೆಗೆ ಯೋಗ್ಯವಾಗಿದ್ದು, ಪ್ರತಿವರ್ಷ ಮುಂಗಾರು ಹಂಗಾಮಿನಲ್ಲಿ 83 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಮುಂಗಾರು ಹಂಗಾಮಿನಲ್ಲಿ ಬಹುತೇಕ ಭಾಗದಲ್ಲಿ ರೈತರು ಜೋಳ, ಮೆಕ್ಕೆಜೋಳ, ಮಿಡಿ ಸೌತೆ, ಮೆಣಸಿನಕಾಯಿ ಸೇರಿದಂತೆ ವಿವಿಧ ಬೀಜಗಳ ಬಿತ್ತನೆ ಮಾಡಿದ್ದಾರೆ. ಈ ಬಾರಿ ಮುಂಗಾರಿನಲ್ಲಿ ಉತ್ತಮ ಮಳೆಯಾಗಿದೆ. ಈಗಾಗಲೇ ಜೋಳ, ಹೆಸರು, ಮೆಕ್ಕೆಜೋಳ, ಮೆಣಸಿನಕಾಯಿ
ಸೇರಿದಂತೆ ವಿವಿಧ ಧಾನ್ಯಗಳ ಬೀಜಗಳನ್ನು ರೈತರು ಬಿತ್ತನೆ ಮಾಡಿದ್ದು, ಕೆಲವು ತಾಂತ್ರಿಕ ಕಾರಣಗಳಿಂದ ರೈತರಿಗೆ ನಿಗದಿತ ಸಮಯದಲ್ಲಿ ಡಿಎಪಿ ಗೊಬ್ಬರ ಸಿಕ್ಕಿಲ್ಲ. ಇನ್ನೆರಡು ದಿನಗಳಲ್ಲಿ ಡಿಎಪಿ ಗೊಬ್ಬರವನ್ನು ರೈತರಿಗೆ ಲಭ್ಯವಾಗಲಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಎನ್.ವಿ.ಪ್ರಕಾಶ್ ತಿಳಿಸಿದ್ದಾರೆ.
ತಾಲೂಕಿನಲ್ಲಿ ನಾಲ್ಕೈದು ಉತ್ತಮ ಮಳೆಯಾಗಿದ್ದರಿಂದ ಕೆಲವು ಭಾಗಗಳಲ್ಲಿ ಹಳ್ಳಗಳು ಹರಿದು ಕೆರೆ ಕಟ್ಟೆಗಳಿಗೆ ನೀರು
ಬಂದಿದೆ. ಎರಡು ವರ್ಷಗಳಿಂದ ನಿಂತಿದ್ದ ರೈತರ ಪಂಪ್ಸೆಟ್ಗಳಲ್ಲಿ ನೀರು ಬರುತ್ತಿದೆ. ಇದರಿಂದ ರೈತರಿಗೆ ಅನುಕೂಲವಾಗಿದೆ. ಕೃಷಿ ಇಲಾಖೆ ಅಧಿಕಾರಿಗಳು ಸೂಕ್ತ ಸಮಯಕ್ಕೆ ಡಿಎಪಿ ಪೂರೈಸಿದ್ದರೆ ಮುಂಗಾರಿನಲ್ಲಿ ಬಿತ್ತಿದ ಬೆಳೆಗಳು ದಷ್ಟಪುಷ್ಟವಾಗಿ ಬೆಳೆಯಲು ಅನುಕೂಲವಾಗುತ್ತಿತ್ತು. ಆದರೆ ಸೂಕ್ತ ಸಮಯಕ್ಕೆ ಬಿತ್ತನೆ ಬೀಜ, ಇತರೆ ಗೊಬ್ಬರ ಸಿಕ್ಕರೂ ಡಿಎಪಿ ಗೊಬ್ಬರ ರೈತರಿಗೆ ಸಿಗದಿರುವುದ್ದರಿಂದ ರೈತರಿಗೆ ತೊಂದರೆಯಾಗಿದೆ.
ಈ ಬಗ್ಗೆ ಅಧಿಕಾರಿಗಳು ಈಗಲಾದರೂ ರೈತರಿಗೆ ಬೇಕಾದ ರಾಸಾಯನಿಕ ಗೊಬ್ಬರ ಪೂರೈಸಲು ಮುಂದಾಗಬೇಕೆಂದು ರೈತ ಬಸವರಾಜ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…