ಪದೇ ಪದೆ ಕೆಟ್ಟು ನಿಲ್ಲುವ ನೀರಿನ ಘಟಕ; ನೀರಿಗಾಗಿ ಗ್ರಾಮಸ್ಥರ ನಿತ್ಯ ಪರದಾಟ
ಒಮ್ಮೊಮ್ಮೆ 5 ರೂ ಬಿಲ್ಲೆ ಹಾಕಿದರೂ ನೀರು ಬರಲ್ಲ
Team Udayavani, Jul 27, 2020, 1:20 PM IST
ಸಿರುಗುಪ್ಪ: ಎಚ್. ಹೊಸಳ್ಳಿ ಗ್ರಾಮದ ಗ್ರಾಮಪಂಚಾಯಿತಿ ಆವರಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ನೀರು ಪಡೆಯಲು ಕಾಯಿನ್ ಹಾಕಿದ ಬಾಲಕ ನೀರು ಬಾರದೆ ಕಾಯಿನ್ ಬಾಕ್ಸ್ ಅಲ್ಲಾಡಿಸುತ್ತಿರುವ ಬಾಲಕ.
ಸಿರುಗುಪ್ಪ: ತಾಲೂಕಿನ ಎಚ್.ಹೊಸಳ್ಳಿ ಗ್ರಾಮದ ಗ್ರಾಮಪಂಚಾಯಿತಿ ಆವರಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ 2-3 ದಿನಕ್ಕೊಮ್ಮೆ ಕೆಟ್ಟು ನಿಲ್ಲುತ್ತಿದ್ದು, ಶುದ್ಧ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪರದಾಡುವುದು ಸಾಮಾನ್ಯವಾಗಿದೆ. ಈ ಗ್ರಾಮದಲ್ಲಿರುವ ಬೋರ್ವೆಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಕುಡಿಯುವ ನೀರಿಗಾಗಿ ಕೆರೆಯನ್ನು ಮತ್ತು ಒಂದು ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಾಣ ಮಾಡಲಾಗಿದೆ. ಆದರೆ ಕೆರೆಯಲ್ಲಿ ನೀರು ಖಾಲಿಯಾಗಿದ್ದು, ಇರುವ ಒಂದು ಶುದ್ಧ ಕುಡಿಯುವ ನೀರಿನ ಘಟಕದಿಂದಲೇ ನೀರನ್ನು ತಂದು ಬಳಕೆ ಮಾಡುತ್ತಾರೆ. ಆದರೆ ಈ ಘಟಕವು ಕಳೆದ 2 ತಿಂಗಳಿಂದ 2-3ದಿನಕ್ಕೊಮ್ಮೆ ಕೆಟ್ಟು ನಿಲ್ಲುತ್ತಿದ್ದು, ಶುದ್ಧ ಕುಡಿಯುವ ನೀರಿಗಾಗಿ 5 ಕಿಮೀ ದೂರದಲ್ಲಿರುವ ಕರೂರು ಅಥವಾ ದರೂರು ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದಿಂದ ತಂದು ಕುಡಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಶುದ್ಧ ಕುಡಿಯುವ ನೀರು ಪಡೆಯಲು ಗ್ರಾಮಸ್ಥರು ರೂ. 5ಗಳ ಬಿಲ್ಲೆಯನ್ನು ಹಾಕಿದರೆ ಮಾತ್ರ ನೀರು ಬರುತ್ತವೆ. ಹಲವು ಬಾರಿ ರೂ. 5 ಬಿಲ್ಲೆ ಹಾಕಿದರೂ ನೀರು ಬರುತ್ತಿಲ್ಲ. ಮತ್ತೂಮ್ಮೆ ರೂ. 5 ಹಾಕಿದರೆ ನೀರು ಬರುತ್ತವೆ. ಇದರಿಂದಾಗಿ ಕೆಲವು ಬಾರಿ ಕಾಯಿನ್ ಹಾಕಿದರೂ ನೀರು ಬಾರದೆ ತಾಂತ್ರಿಕ ಸಮಸ್ಯೆ ಇದ್ದರೂ
ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ. ಪದೇ ಪದೆ ಘಟಕ ಕೆಟ್ಟು ನಿಲ್ಲುತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಅಧಿಕಾರಿಗಳು ಘಟಕವನ್ನು ಸರಿಯಾಗಿ ರಿಪೇರಿ ಮಾಡಿಸಿ ಸತತವಾಗಿ ಶುದ್ಧ ನೀರು ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಎಚ್. ಹೊಸಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ರಿಪೇರಿ ಮಾಡಿಸಿ ಶುದ್ಧ ನೀರೊದಗಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಾಪಂ ಇ.ಒ. ಶಿವಪ್ಪ ಸುಬೇದಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ