ದಾಹ ತಣಿಸಲು ಕುರುಗೋಡು ಕೆರೆ ಸಿದ್ಧ


Team Udayavani, Mar 18, 2019, 8:46 AM IST

bell-1.jpg

ಕುರುಗೋಡು: ಬೇಸಿಗೆಯಲ್ಲಿ ಜನರ ದಾಹ ತಣಿಸಲು 24 ಎಕರೆ ವಿಸ್ತೀರ್ಣದ 450 ಮಿಲಿಯನ್‌ ಲೀಟರ್‌ ಸಾಮರ್ಥ್ಯದ ಕೆರೆಗೆ ಎಚ್‌ಎಲ್‌ಸಿ ಕಾಲುವೆಯಿಂದ ಪುರಸಭೆ ನೀರು ತುಂಬಿಸಿದೆ. ಕಳೆದ 13ವರ್ಷಗಳ ಹಿಂದೆ ಕುರುಗೋಡು ಪಟ್ಟಣದ ಜನತೆ ಕುಡಿಯುವ ನೀರಿಗಾಗಿ ಪರದಾಡುವಂತಾಗಿತ್ತು. ಇದರಿಂದ ಬೇಸತ್ತ ಜನತೆ ಸ್ಥಳೀಯ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ನಿರಂತರ
ಹೋರಾಟ ನಡೆಸಿದ್ದರು. ಇದರ ಪರಿಣಾಮ ಸಿಂದಿಗೇರಿ ರಸ್ತೆಗೆ ಹೊಂದಿಕೊಂಡಿರುವ 24 ಎಕರೆ ಭೂಮಿಯಲ್ಲಿ 2005ರಲ್ಲಿ ಸುಮಾರು 11ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಕೆರೆ ನಿರ್ಮಿಸಲಾಯಿತು.

ಪಟ್ಟಣದಲ್ಲಿ 23ವಾರ್ಡ್‌ಗಳಿದ್ದು, 21 ಸಾವಿರ ಜನಸಂಖ್ಯೆ ಇದೆ.
ನೀರು ಸೋರಿಕೆ: ಕುಡಿಯುವ ನೀರಿಗಾಗಿ ಕೈಗೊಂಡ ಕೆರೆ ನಿರ್ಮಾಣ ಜನೋಪಯೋಗಿ ಆಗಿದ್ದರೂ ನೀರಿನ ಸೋರಿಕೆ, ಅಕ್ರಮ ನೀರಿನ ಬಳ ತಡೆಗಟ್ಟುವುದೇ ದೊಡ್ಡ ಸವಾಲಾಗಿದೆ. ಪ್ರತಿದಿನ ಸುಮಾರು ಮೂರ್‍ನಾಲ್ಕು ಅಡಿಯಷ್ಟು ಕೆರೆಯ ನೀರು ಯಥಾಸ್ಥಿತಿಯಲ್ಲಿ ಸೋರಿಕೆಯಾಗುತ್ತಿದೆ. ಕೆಲ ಖಾಸಗಿ ರೈತರು ಅಕ್ರಮವಾಗಿ ಕೆರೆ ನೀರನ್ನು ಬಳಸಿಕೊಳ್ಳುತ್ತಿದ್ದಾರೆ.

ಭದ್ರತೆ ಮಾಯ: ಕೆರೆಯ ಸುತ್ತಮುತ್ತ ಯಾವುದೇ ರೀತಿಯ ಭದ್ರತೆ ಇಲ್ಲವಾಗಿದೆ. ಇದರ ಪರಿಣಾಮ ಕಳೆದ 2015-16ನೇ
ಸಾಲಿನಲ್ಲಿ ವ್ಯಕ್ತಿಯೊಬ್ಬ ಮೀನು ಹಿಡಿಯಲು ಹೋಗಿ ಅಸು ನೀಗಿದ್ದ. ಇಷ್ಟಾದರೂ ಪುರಸಭೆ ಎಚ್ಚುತ್ತುಕೊಂಡಂತೆ ಕಾಣುತ್ತಿಲ್ಲ. ಕೂಡಲೇ ಅಧಿಕಾರಿಗಳು ಕೆರೆಯ ಸುತ್ತಮುತ್ತ ರಕ್ಷಣೆಗೆ ಮುಂದಾಗಬೇಕಿದೆ.

ಮೇವಿನ ಕೊರತೆ: ಬೇಸಿಗೆ ಅಭಾವ ಹೆಚ್ಚಾಗಿದ್ದು, ಕೆರೆಯಿಂದ ಪೋಲಾಗುವ ನೀರನ್ನು ತಡೆಗಟ್ಟಿ ಜನ ಜಾನುವಾರುಗಳಿಗೆ ನೆರವಾಗಲು ಮೇವು ಬೆಳೆಯಲು ನೀರೊದಗಿಸಬೇಕು. ಬೇಸಿಗೆಯಲ್ಲಿ ನೀರಿನ ಅಭಾವದಿಂದ ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಮೇವಿನ ಕೊರತೆ ಬಾಧಿಸುತ್ತಿದೆ. ಜಿಲ್ಲಾಡಳಿತ ಜಾನುವಾರುಗಳಿಗೆ ಮೇವು ಬೆಳೆಯಲು ಅನುಕೂಲ ಕಲ್ಪಿಸುವ ಜರೂರು ಇದೆ. 

ತಂತಿ ಬೇಲಿ ನಿರ್ಮಾಣ  ಬೇಸಿಗೆ ಹಂಗಾಮಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕೆರೆಯನ್ನು ಸಂಪೂರ್ಣವಾಗಿ ಭರ್ತಿ ಮಾಡಲಾಗಿದೆ. ಈ ಬಗ್ಗೆ ಯಾವುದೇ ದೂರು ಬಂದಿಲ್ಲ. ಆದರೆ, ಕುಡಿಯುವ ನೀರಿನ ಸೋರಿಕೆ ಅಕ್ರಮ ಬಳಕೆ ಬಗ್ಗೆ ಮಾಹಿತಿ ಇದೆ. ಚುನಾವಣೆ ಮುಗಿದ ನಂತರ ಸೂಕ್ತ ಕ್ರಮ ಕೈಗೊಂಡು ತಂತಿ ಬೇಲಿ ನಿರ್ಮಿಸಲಾಗುತ್ತದೆ. 
 ಎಚ್‌. ಫಿರೋಜ್‌ ಖಾನ್‌, ಪುರಸಭೆ ಮುಖ್ಯಾಧಿಕಾರಿ, ಕುರುಗೋಡು

ನೀರಿನ ಅಕ್ರಮ ತಡೆಯಲಿ ಪುರಸಭೆ ಕುಡಿಯುವ ನೀರಿನ ಸಮಸ್ಯೆ ಹೋಗಲಾಡಿಸಿದ್ದಾರೆ. ಆದರೆ ಕೆರೆಯಿಂದ ನೀರು ಪೋಲಾಗುವುದು, ಖಾಸಗಿಯವರು ನೀರನ್ನು ಅಕ್ರಮವಾಗಿ ಬಳಸಿಕೊಳ್ಳುವುದನ್ನು ತಡೆಗಟ್ಟಬೇಕಿದೆ. ಕೆರೆಗೆ ಸೂಕ್ತ ಭದ್ರತೆ ಇಲ್ಲದ ಕಾರಣ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.  ದಿನವರೆಗೂ ಸಹ ಸತ್ತ ವ್ಯಕ್ತಿ ಕುಟುಂಬಕ್ಕೆ ಪುರಸಭೆಯಾಡಳಿತ ಬಿಡಿಗಾಸನ್ನೂ ಕೊಟ್ಟಿಲ್ಲ. ಇದ್ಯಾವ ನ್ಯಾಯ?. 
 ಎಚ್‌.ಎಂ. ವಿಶ್ವನಾಥಸ್ವಾಮಿ. ಬೀದಿಬದಿ ವ್ಯಾಪಾರಸ್ಥರ ಸಂಘದ ಜಿಲ್ಲಾ ಕಾರ್ಯದರ್ಶಿ.

ಈಗೀಗ ನೀರು ಬಿಡಾಕತ್ಯಾರ ಪುರಸಭೇವ್ರು ಈಗೀಗ ನೀರ್‌ ಬೇಷ್‌ ಬಿಡಾಕತ್ಯಾರ. ಜಾತ್ರಿ ಬ್ಯಾರೆ ಐತಂತ ನೀರ್‌ ಬಿಡಾಕತ್ಯಾರೇನು ತಿಳಿದ್ಹಂಗೆ ಹಾಗೈತಿ. ಮುಂದೇನ್‌ ಮಾಡ್ತಾರೋ ಗೊತ್ತಿಲ್ರಿ  ಸುಮಲತಾ, ಕುರುಗೋಡು ಪಟ್ಟಣ ನಿವಾಸಿ. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.