ರೈತರ ಪ್ರತಿಭಟನೆಗೆ ತಿಂಗಳು; ಸರಕಾರ ವಿರುದ್ದ ಸಂಪತ್ ಕುಮಾರ್ ಆಕ್ರೋಶ
ಕಾರ್ಖಾನೆ ಸ್ಥಾಪಿಸಿ ಇಲ್ಲ ನಮ್ಮ ಭೂಮಿ ವಾಪಾಸ್ ನೀಡಿ ; ಸರ್ಕಾರಕ್ಕೆ ಎಚ್ಚರಿಕೆ
Team Udayavani, Jan 15, 2023, 6:28 PM IST
ಕುರುಗೋಡು : ಸಮೀಪದ ಕುಡಿತಿನಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಭಾಗದ ಭೂಮಿ ಕಳೆದುಕೊಂಡ ರೈತರು ಕಾರ್ಖಾನೆ ಸ್ಥಾಪಿಸಿ ಇಲ್ಲ ನಮ್ಮ ಭೂಮಿ ವಾಪಾಸ್ ನೀಡುವಂತೆ ಹೋರಾಟ ಕೈಗೊಂಡು ತಿಂಗಳ ಪೂರೈಸಿತಿದ್ದರು ನೀಚ ಸರಕಾರ ಸ್ಪಂದನೆ ಮಾಡದೆ ಮೌನವಹಿಸಿರುವುದು ದುರಂತದ ಸಂಗತಿಯಾಗಿದೆ ಎಂದು ನಮ್ಮ ಕರ್ನಾಟಕ ರಕ್ಷಣೆ ವೇದಿಕೆ ಅಧ್ಯಕ್ಷ ಸಂಪತ್ ಕುಮಾರ್ ಕಿಡಿಕರಿದ್ದಾರೆ.
ಪ್ರತಿಭಟನೆ ಯಲ್ಲಿ ನಿರತರಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಭೂಮಿ ಕಳೆದುಕೊಂಡು 13 ವರ್ಷವಾದರೂ ಕಾರ್ಖಾನೆಯನ್ನು ಸ್ಥಾಪಿಸಿಲ್ಲ ರೈತರಿಗೆ ಭೂಮಿಗಳನ್ನು ವಾಪಸ್ ನೀಡದೆ ರೈತರಿಗೆ ದ್ರೋಹ ಎಸಗಿದ್ದಲ್ಲದೆ ಅವರ ಜೀವನದ ಜೊತೆಗೆ ಕಾರ್ಖಾನೆ ಮಾಲೀಕರು ಮತ್ತು ಸರಕಾರ ಚೆಲ್ಲಾಟ ವಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವಿಷಯ ಕುರಿತು ಈಗಾಗಲೇ ಹೋರಾಟ ನಡೆಸುತ್ತಿರುವುದು 29 ನೇ ದಿನಕ್ಕೆ ಕಾಲಿಟ್ಟರು ಯಾವುದೇ ಜಿಲ್ಲಾಡಳಿತ ಹಾಗೂ ಸಂಸದರು, ಸಚಿವರು, ಇನ್ನುಳಿದ ಯಾವುದೇ ರಾಜಕಾರಣಿಗಳು ಸಹಕಾರ ಕೊಡದೆ ಸ್ಪಂದನೆ ಮಾಡದ ಕಾರಣ ಕಳವಳಗೊಂಡಿದ್ದಾರೆ.
ಮುಂದಿನ ದಿನಗಳಲ್ಲಿ ಜಿಲ್ಲೆಯ ಜನಪ್ರತಿನಿದಿನಗಳು ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯ ಒದಗಿಸದೆ ಇದ್ದಲ್ಲಿ ಚುನಾವಣೆ ಬಹಿಷ್ಕಾರ ಮಾಡಲಾಗುವುದು ಜೊತೆಗೆ ಒಂದು ದಿನ ಮುಖ್ಯ ಹೆದ್ದಾರಿ ರಸ್ತೆ ತಡೆ ಮಾಡಲಾಗುವುದು ಎಂದರು ನಮ್ಮ ಕರ್ನಾಟಕ ರಕ್ಷಣೆ ವೇದಿಕೆ ಅಧ್ಯಕ್ಷ ಸಂಪತ್ ಕುಮಾರ್ ಜನಪ್ರತಿನಿದಿನಗಳಿಗೆ ಹಾಗೂ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಜಂಗ್ಲಿ ಸಾಬ್, ತಿಪ್ಪೇಸ್ವಾಮಿ, ಪಾಂಡು, ಹುಚ್ಚಪ್ಪ,ಅಂಜಿನಪ್ಪ, ಸಿಐಟಿಯು ಸಂಘಟನೆ, ಸಿಪಿಐಎಂ, ಕನ್ನಡಪರ ಸಂಘಟನೆಗಳ ಮುಖಂಡರು ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…