ಜಮೀನು ಗುತ್ತಿಗೆ ಕೊಡುವ ನಿರ್ಧಾರ ಕೈಬಿಡಿ

ಅನಾವೃಷ್ಟಿಗಳಿಂದ ನಿರ್ಗತಿಕರಾಗುತ್ತಿದ್ದಾರೆ.ಆದರೆ ಸರ್ಕಾರ ಅವರಿಗೆ ಬೆಂಬಲ ನೀಡುತ್ತಿಲ್ಲ.

Team Udayavani, Oct 20, 2022, 1:47 PM IST

ಜಮೀನು ಗುತ್ತಿಗೆ ಕೊಡುವ ನಿರ್ಧಾರ ಕೈಬಿಡಿ

ಬಳ್ಳಾರಿ: ಜಮೀನನ್ನು ಗುತ್ತಿಗೆ ಆಧಾರದಲ್ಲಿ ಕೊಡುವ ಸರ್ಕಾರದ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಿ ಅಖೀಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಜನರು ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ವಿವಿಧ ಘೋಷಣೆಗಳನ್ನು ಕೂಗಿದರು. ಕೂಡಲೇ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಿದರು. ಬಗರ್‌ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆ, ಖಾತೆ ಮಾಡಿಕೊಡುವುದು, ರೈತರ ಮೇಲಿನ ಭೂಕಬಳಿಕೆ ಕೇಸುಗಳನ್ನು ವಾಪಸ್‌ ತೆಗೆದುಕೊಳ್ಳುವುದು ಹಾಗೂ ಇನ್ನಿತರೆ ಹಕ್ಕೊತ್ತಾಯಗಳನ್ನು ಸಂಬಂಧಪಟ್ಟ ಮಂತ್ರಿಗಳು ಹಾಗೂ ಅಧಿ ಕಾರಿಗಳೊಂದಿಗೆ ಮಾತನಾಡಿ ಬಗೆಹರಿಸಿಕೊಡಲಾಗುವುದು ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಎಐಕೆಕೆಎಂಎಸ್‌ ನಿಯೋಗಕ್ಕೆ ಭರವಸೆ ನೀಡಿದರು.

ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ಬಗರ್‌ ಹುಕುಂ ಸಾಗುವಳಿಯು ಭೂ ಕಬಳಿಕೆಯಲ್ಲ. ಬಂಡವಾಳಶಾಹಿಗಳು ಹಾಗೂ ಕಂಪನಿಗಳು ಭೂಮಿಯನ್ನು ಆಕ್ರಮಿಸಿಕೊಳ್ಳುವುದು ಭೂಕಬಳಿಕೆ. ಬಡ ರೈತರು ಭೂಮಿ ಕೇಳುವುದು ನೈತಿಕ ಹಕ್ಕು. ರೈತರು ತಮ್ಮ ಹಕ್ಕುಗಳನ್ನು ಕೇಳುತ್ತಿದ್ದಾರೆ.ಬಡ ರೈತರ ಪರವಾಗಿ ನಿಲ್ಲಬೇಕಾದುದು ಸರ್ಕಾರದ ಕರ್ತವ್ಯ. ಇಂದು ಸಣ್ಣ ರೈತರು ಕಾರ್ಮಿಕರಾಗುತ್ತಿದ್ದಾರೆ.

ಅವರು ಹರಿವ ನೀರಿನಂತೆ ಕೆಲಸ ಹುಡುಕಿಕೊಂಡು ವಲಸೆ ಹೋಗುತ್ತಿದ್ದಾರೆ. ಅಂಥ ರೈತರ ಪರವಾಗಿ ನಿಲ್ಲಬೇಕಾದುದು ಸರ್ಕಾರದ ಕರ್ತವ್ಯ. ಆದ್ದರಿಂದ ರೈತರಿಗೆ ಭೂಮಿಯನ್ನು ಗುತ್ತಿಗೆ ಕೊಡುವ ಬದಲು ಹಕ್ಕುಪತ್ರಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.

ಎಸ್‌ಯುಸಿಐ (ಕಮ್ಯುನಿಸ್ಟ್‌) ಪಕ್ಷದ ರಾಜ್ಯ ಕಾರ್ಯದರ್ಶಿ ಕೆ.ಉಮಾ ಮಾತನಾಡಿ, ರೈತರು ಯಾವುದೇ ಲಾಭದಾಸೆಗಳಿಲ್ಲದೆ, ಹೊಟ್ಟೆಪಾಡಿಗಾಗಿ ಭೂಮಿ ಹಾಗೂ ಪ್ರಕೃತಿಯನ್ನು ನಂಬಿಕೊಂಡು ವ್ಯವಸಾಯ ಮಾಡುತ್ತಿದ್ದಾರೆ. ಅವರು ಆಧುನಿಕ ಉಪಕರಣಗಳಿಲ್ಲದೆ, ಸರ್ಕಾರದ ಬೆಂಬಲವಿಲ್ಲದೆ ಕೃಷಿ ಮಾಡುತ್ತಿರುವುದರಿಂದ ಮತ್ತು ಅತಿವೃಷ್ಟಿ, ಅನಾವೃಷ್ಟಿಗಳಿಂದ ನಿರ್ಗತಿಕರಾಗುತ್ತಿದ್ದಾರೆ.ಆದರೆ ಸರ್ಕಾರ ಅವರಿಗೆ ಬೆಂಬಲ ನೀಡುತ್ತಿಲ್ಲ.

ಜಾಗತೀಕರಣದ ನೀತಿಗಳನ್ನು ಅನುಸರಿಸಿ ಸಬ್ಸಿಡಿಯನ್ನು ತೆಗೆಯುತ್ತಿದ್ದಾರೆ. ಕೃಷಿಗೆ ಸಬ್ಸಡಿ ಕೊಟ್ಟರೆ ನಷ್ಟವೆನ್ನುವ ವಾದವಿದೆ. ಆದರೆ ಮಂತ್ರಿ ಮಹೋದಯರ ಸಂಬಳವನ್ನು ದುಪ್ಪಟ್ಟು ಹೆಚ್ಚಳ ಮಾಡಿದ್ದಾರೆ. ಇದು ನಷ್ಟವಲ್ಲವೇ? ರೈತರ ಸಾಲ ಮನ್ನಾ ಮಾಡದ ಸರ್ಕಾರ ಕಾರ್ಪೊರೇಟ್‌ ಕಂಪನಿಗಳ ಲಕ್ಷಾಂತರ ಕೋಟಿ ಸಾಲವನ್ನು ಮನ್ನಾ ಮಾಡಿದೆ. ಇದು ನಷ್ಟವಲ್ಲವೇ? ರೈತರು ದುಡಿದ ನಾಡಿಗೆ ಅನ್ನ ನೀಡುವವರು. ಅವರು ದಶಕಗಳಿಂದ ಉಳುಮೆ ಮಾಡಿಕೊಂಡು ಬಂದಿರುವ ಅವರ ಭೂಮಿಗೆ ಹಕ್ಕಪತ್ರವನ್ನು ನೀಡಬೇಕು ಎಂದು ಆಗ್ರಹಿಸಿದರು. ಸಂಘಟನೆಯ ರಾಜ್ಯಾಧ್ಯಕ್ಷ ಎಚ್‌.ವಿ. ದಿವಾಕರ್‌, ಅಖೀಲ ಭಾರತ ಸಮಿತಿ ಉಪಾಧ್ಯಕ್ಷ ಡಾ| ಟ.ಎಸ್‌. ಸುನೀತ್‌ ಕುಮಾರ್‌, ರಾಜ್ಯ ಕಾರ್ಯದರ್ಶಿ ಎಂ.ಶಶಿಧರ್‌ ಮಾತನಾಡಿದರು. ಜಿಲ್ಲಾಧ್ಯಕ್ಷ ಗೋವಿಂದ್‌, ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ ಇದ್ದರು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.