ತ್ಯಾಜ್ಯ ಮರುಬಳಕೆಗೆ ಕ್ರಮ: ಮುರುಗನ್‌

ಗೃಹೋಪಯೋಗಿ ವಸ್ತುಗಳ ಪ್ರದರ್ಶನ

Team Udayavani, May 7, 2022, 2:29 PM IST

policy

ಬಳ್ಳಾರಿ: ಜೆಎಸ್‌ಡಬ್ಲ್ಯು ಸಂಸ್ಥೆ ತನ್ನ ವಿಜಯನಗರ ಸಂಯೋಜಿತ ಉಕ್ಕು ಸ್ಥಾವರದಲ್ಲಿ ಉತ್ಪತ್ತಿಯಾಗುವ ಎಲ್ಲ ಬಗೆಯ ತ್ಯಾಜ್ಯವನ್ನು ಸಂಪೂರ್ಣ ಸಂಸ್ಕರಿಸಿ ಮರುಬಳಕೆ ಮಾಡುತ್ತಿದೆ ಎಂದು ವಿಜಯನಗರ ಉಕ್ಕು ಸ್ಥಾವರದ ಅಧ್ಯಕ್ಷ ಪಿ.ಕೆ. ಮುರುಗನ್‌ ತಿಳಿಸಿದರು.

ಜಿಲ್ಲೆಯ ತೋರಣಗಲ್ಲಿನ ಒಪಿಜೆ ಸೆಂಟರ್‌ ನಲ್ಲಿ ಶುಕ್ರವಾರ ಜೆಎಸ್‌ಡಬ್ಲ್ಯು ಫೌಂಡೇಶನ್‌ ಸಹಯೋಗದೊಂದಿಗೆ ಸ್ಥಳೀಯ ಮಹಿಳಾ ಸ್ವಸಹಾಯ ಸಂಘದ ಮಹಿಳೆಯರು ಪ್ಲಾಸ್ಟಿಕ್‌ ತ್ಯಾಜ್ಯವನ್ನು ಸಂಸ್ಕರಿಸಿ ತಯಾರಿಸಿದ ಹಲವು ಬಗೆಯ ಗೃಹೋಪಯೋಗಿ ವಸ್ತುಗಳ ಪ್ರದರ್ಶನವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಜೆಎಸ್‌ಡಬ್ಲ್ಯು ಸಂಸ್ಥೆ ತನ್ನ ಸ್ಥಾವರದಲ್ಲಿ ಉತ್ಪತ್ತಿಯಾಗುವ ಎಲ್ಲ ಬಗೆಯ ದ್ರವ ಮತ್ತು ಘನ ತ್ಯಾಜ್ಯ ಸಂಪೂರ್ಣವಾಗಿ ಮರು ಸಂಸ್ಕರಣೆಯಾಗಿ, ಮರು ಬಳಕೆಯಾಗಬೇಕೆಂದು ನಿರಂತರವಾಗಿ ಹೊಸ ಆವಿಷ್ಕಾರ ಮತ್ತು ಯೋಜನೆಗಳನ್ನು ಕೈಗೊಂಡಿದ್ದು, ಈ ದಿಸೆಯಲ್ಲಿ ಸಂಸ್ಥೆ ದೇಶದಲ್ಲಿನ ಇತರೆ ಉಕ್ಕು ಕಾರ್ಖಾನೆಗಳಿಗಿಂತಲೂ ಅಗ್ರ ಪಂಕ್ತಿಯಲ್ಲಿದೆ ಎಂದು ತಿಳಿಸಿದರು.

ಸಂಸ್ಥೆಯು ಈಗಾಗಲೇ ಬಳಸಿ ಬಿಸಾಡಿದ ಏಕಬಳಕೆ ಪ್ಲಾಸ್ಟಿಕ್‌ ತ್ಯಾಜ್ಯವನ್ನು ಕಲ್ಲಿದ್ದಲಿಗೆ ಪರ್ಯಾಯ ಇಂಧನವಾಗಿ ಉಷ್ಣ ವಿದ್ಯುತ್‌ ಮತ್ತು ಸಿಮೆಂಟ್‌ ಉತ್ಪಾದನಾ ಸ್ಥಾವರಗಳಲ್ಲಿ ಉರುವಲು ಇಂಧನವಾಗಿ ಬಳಸುತ್ತಿದ್ದು, ಇದು ವಾತಾವರಣದಲ್ಲಿ ಇಂಗಾಲದ ಹೊರ ಸೂಸುವಿಕೆಯನ್ನು ಗಣನೀಯ ಪ್ರಮಾಣದಲ್ಲಿ ತಗ್ಗಿಸಿ, ಪರಿಸರ ಸಂರಕ್ಷಣೆಗೆ ಸಹಕಾರಿಯಾಗಿದೆ ಎಂದರು.

ಜಾಗತಿಕ ತಾಪಮಾನ ಏರಿಕೆಯನ್ನು ತಗ್ಗಿಸುವಲ್ಲಿ ಪ್ರತಿ ವ್ಯಕ್ತಿಯೂ ಜವಬ್ದಾರಿ ಹೊರಬೇಕಿದ್ದು, ಈ ಹಿನ್ನೆಲೆಯಲ್ಲಿ ಜೆಎಸ್‌ಡಬ್ಲ್ಯು ಸಂಸ್ಥೆ ಪರಿಸರ ಸಂರಕ್ಷಣೆ, ಸುತ್ತಲಿನ ಸಮುದಾಯದ ಅಭಿವೃದ್ಧಿ ಮತ್ತು ಕಾನೂನಿನ ನಿಯಮಾವಳಿ ಪಾಲನೆಗೆ ಸದಾ ಬದ್ಧವಾಗಿದೆ ಎಂದು ತಿಳಿಸಿದರು.

ಸ್ಥಳೀಯ ಸಮುದಾಯದ ಸಬಲೀಕರಣ ಮಾಡುವ ಆಶಯದಿಂದ ಆರಂಭಿಸಲಾದ ‘ಸಖೀ’ ಯೋಜನೆಯಲ್ಲಿ, ತೋರಣಗಲ್ಲು ಸುತ್ತಲಿನ ಮಹಿಳಾ ಸ್ವಸಹಾಯ ಸಂಘದ ಮಹಿಳೆಯರು ಜೆಎಸ್‌ಡಬ್ಲ್ಯು ಫೌಂಡೇಶನ್‌ ನೆರವಿನಿಂದ ಬಳಸಿ ಬಿಸಾಡಿದ ಏಕಬಳಕೆ ಪ್ಲಾಸ್ಟಿಕ್‌ನಿಂದ ಉತ್ತಮ ಗುಣಮಟ್ಟದ ಗೃಹೋಪಯೋಗಿ ವಸ್ತುಗಳನ್ನು ತಯಾರಿಸಿ, ಮಾರಾಟ ಮಾಡುವ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.

ಜೆಎಸ್‌ಡಬ್ಲ್ಯು ಸಂಸ್ಥೆ ಉಪಾಧ್ಯಕ್ಷ ಸಂಜಯ ಹಂಡೂರ, ಹಿರಿಯ ವ್ಯವಸ್ಥಾಪಕ ಶಿವಕುಮಾರ ಮಾಳಗಿ, ಫೌಂಡೇಶನ್‌ ಮುಖ್ಯಸ್ಥ ವಿನೋದ ಪುರೋಹಿತ, ಇಕೋಕಾರಿ ಸಂಸ್ಥೆ ನಂದನ್‌ ಭಟ್‌ ಮತು ಸೌಖ್ಯ ಬೆಳಕು ಸಂಸ್ಥೆ ಅಧ್ಯಕ್ಷೆ ಲಕ್ಷ್ಮೀ ಇತರರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.