ಜನಪರ ಮರಳು ನೀತಿ ಜಾರಿಯಾಗಲಿ


Team Udayavani, Mar 8, 2019, 6:51 AM IST

bell-1.jpg

ಕಂಪ್ಲಿ: ತಾಲೂಕಿನಲ್ಲಿ ಸಮರ್ಪಕವಾಗಿ ಮರಳು ಸಿಗದೆ ಸ್ವತ್ಛ ಭಾರತ್‌ ಯೋಜನೆಯಡಿ ಕೈಗೊಂಡಿರುವ ವೈಯಕ್ತಿಕ ಶೌಚಾಲಯ ನಿರ್ಮಾಣ ಹಾಗೂ ಬಡ ಮದ್ಯಮ ವರ್ಗದವರಿಗೆ ಮನೆ ನಿರ್ಮಿಸಿಕೊಳ್ಳಲು ತೊಂದರೆಯಾಗಿದ್ದು, ಕೂಡಲೇ ಜನಪರ ಮರಳು ನೀತಿ ಜಾರಿಗೊಳಿಸಬೇಕೆಂದು
ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಕಾಂ| ತಿಪ್ಪಯ್ಯ ಆಗ್ರಹಿಸಿದರು.

ಪಟ್ಟಣದ ತಾಲೂಕು ಕಚೇರಿ ಎದುರು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‌ ಪದಾಧಿಕಾರಿಗಳು ನಡೆಸಿದ ಸಾಂಕೇತಿಕ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಸಾಕಷ್ಟು ಜನರು ಕೂಲಿ ಕಾರ್ಮಿಕರಾಗಿದ್ದಾರೆ. ನೂತನ ತಾಲೂಕಾಗಿರುವ
ಕಂಪ್ಲಿ ಪಟ್ಟಣವು ವೇಗವಾಗಿ ಬೆಳೆಯುತ್ತಿದೆ. ಆಶ್ರಯಮನೆ, ಶೌಚಾಲಯ ಹಾಗೂ ಚರಂಡಿಗಳ ನಿರ್ಮಾಣಕ್ಕೆ ಕಟ್ಟಡ ಕಾರ್ಮಿಕರ ಅಗತ್ಯವಿದೆ. ಕಾರ್ಮಿಕರು ತಮ್ಮ ಉಪ ಜೀವನಕ್ಕೆ ಬಂಡಿಯಲ್ಲಿ ಮರಳು ಸಾಗಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ ಅಧಿಕಾರಿಗಳು ಮರಳು ಬಂಡಿಗಳನ್ನು
ತಡೆ ಹಿಡಿಯುವ ಮೂಲಕ ಕಾರ್ಮಿಕರ ಹೊಟ್ಟೆ ಮೇಲೆ ಕಲ್ಲು ಹಾಕುತ್ತಿದ್ದಾರೆ. ಲಾರಿ ಮತ್ತು ಟ್ರ್ಯಾಕ್ಟರ್‌ಗಳಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದೆ ಬಡವರ ಮೇಲೆ ಕ್ರಮ ಕೈಗೊಳ್ಳುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಬಳಿಕ ತಹಶೀಲ್ದಾರ್‌ ಶ್ರೀಶೈಲ ವೈ.ತಳವಾರ ಅವರಿಗೆ ಮನವಿ ಸಲ್ಲಿಸಲಾಯಿತು. ತಹಶೀಲ್ದಾರ್‌ ಶ್ರೀಶೈಲ ವೈ.ತಳವಾರ ಮಾತನಾಡಿ ಮರಳು ನೀತಿ ರಾಜ್ಯಾದ್ಯಂತ ಏಕರೂಪದಲ್ಲಿದೆ. ಇದನ್ನು ಜಿಲ್ಲಾಧಿಕಾರಿಗಳ ನೇತೃತ್ವದ ಟಾಸ್ಕ್ಫೋರ್ಸ್‌ ಸಮಿತಿ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕಿದ್ದು, ಕಾರ್ಮಿಕರ ಬೇಡಿಕೆಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಕಂಪ್ಲಿ ತಾಲ್ಲೂಕು ಪ್ರಧಾನಕಾರ್ಯದರ್ಶಿ ಕಾಂ.ಬಂಡಿ ಬಸವರಾಝ್, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ
ಕಾರ್ಮಿಕರ ಫೆಡರೇಷನ್‌ ಕಂಪ್ಲಿ ವಲಯ ಸಮಿತಿ ಅಧ್ಯಕ್ಷ ಐ ಹೊನ್ನೂರಸಾಬ್‌, ಆರ್‌.ನಾಗರಾಜ,ಖಜಾಂಚಿ ಎನ್‌. ರಾಜಾಭಕ್ಷಿ, ಕಾರ್ಮಿಕರಾದ ನೂರ್‌ಸಾಬ್‌, ಜಮಾಲ್‌, ಮಂಜು, ಸಿದ್ದಪ್ಪ, ಕೋಟೆ ಹುಸೇನ್‌ಸಾ,ಕೋಟೆ ಗೌಸ್‌ ,ಸುಂಕಪ್ಪ,ಯಲ್ಲಪ್ಪ, ಭರತ್‌, ಉಮೇಶ್‌, ರಾಮ, ರೇಣುಕಪ್ಪ
ಸೇರಿದಂತೆ ಅನೇಕ ಕಾರ್ಮಿಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.