ನಷ್ಟದಲ್ಲೂ ಸಮರ್ಪಕ ವಿದ್ಯುತ್‌ ಪೂರೈಕೆ

ಲಾಕ್‌ಡೌನ್‌ನಲ್ಲೂ ಸಮರ್ಪಕವಾಗಿ ವಿದ್ಯುತ್‌ ಶುಲ್ಕ ವಸೂಲಿ ಮಾಡಿದ ಜೆಸ್ಕಾಂ

Team Udayavani, May 12, 2020, 11:15 AM IST

ನಷ್ಟದಲ್ಲೂ ಸಮರ್ಪಕ ವಿದ್ಯುತ್‌ ಪೂರೈಕೆ

ಸಾಂದರ್ಭಿಕ ಚಿತ್ರ

ಬಳ್ಳಾರಿ: ಅಗತ್ಯ ಸೇವೆಗಳಲ್ಲಿ ಒಂದಾದ ವಿದ್ಯುತ್‌ನ್ನು ಕೋವಿಡ್ ಲಾಕ್‌ಡೌನ್‌ ಅವಧಿಯಲ್ಲಿ ಕೊರತೆಯಾಗದಂತೆ ಸಮರ್ಪಕವಾಗಿ ನಿಭಾಯಿಸಿದ ಜೆಸ್ಕಾಂ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಲಾಕ್‌ಡೌನ್‌ನಲ್ಲಿ ಮನೆಗೆ ಸೀಮಿತವಾಗಿದ್ದ ಜನರಿಗೆ ನಷ್ಟದ ನಡುವೆಯೂ ಲೋಡ್‌ ಶೆಡ್ಡಿಂಗ್‌ ಮಾಡದೆ ವಿದ್ಯುತ್‌ ಪೂರೈಸುತ್ತಿದೆ.

ಕೋವಿಡ್ ನಿಯಂತ್ರಿಸಲು ಕೇಂದ್ರ ಸರ್ಕಾರ ಮಾ.22 ರಂದು ಜನತಾ ಕರ್ಫ್ಯೂಗೆ ಕರೆ ನೀಡಿದ ಬಳಿಕ ಮಾ.23 ರಿಂದ ದೇಶಾದ್ಯಂತ ಲಾಕ್‌ಡೌನ್‌ ಜಾರಿಗೆ ತರಲಾಯಿತು. ಇದರಿಂದ ಸಣ್ಣ, ಬೃಹತ್‌ ಕೈಗಾರಿಕೆಗಳು ಸೇರಿ ಎಲ್ಲ ಕ್ಷೇತ್ರಗಳು ಸುಮಾರು ಒಂದೂವರೆ ತಿಂಗಳು ಬಂದ್‌ ಆಗಿದ್ದು, ಬಡ ಕೂಲಿಕಾರ್ಮಿಕರು ಸೇರಿ ಎಲ್ಲರೂ ಮನೆಗೆ ಸೀಮಿತರಾದರು. ಬಿರುಬಿಸಿಲ ನಾಡು ಬಳ್ಳಾರಿಯಲ್ಲಿ ಬೇಸಿಗೆ ದಿನಗಳಲ್ಲಿ ಫ್ಯಾನ್‌, ಏರ್‌ ಕೂಲರ್‌, ಎಸಿ ಇಲ್ಲದೇ ಮನೆಗಳಲ್ಲಿ ಕೂಡುವುದೂ ಸುಲಭವಲ್ಲ. ಮೇಲಾಗಿ ಜೆಸ್ಕಾಂ ಬಳ್ಳಾರಿ ವಿಭಾಗಕ್ಕೆ ಮಾರ್ಚ್‌, ಏಪ್ರಿಲ್‌ ತಿಂಗಳಲ್ಲಿ ಗ್ರಾಹಕರಿಂದ ನಿರೀಕ್ಷಿತ ಪ್ರಮಾಣದಲ್ಲಿ ವಿದ್ಯುತ್‌ ಶುಲ್ಕವೂ ಪಾವತಿಯಾಗಿಲ್ಲ. ಇಂಥ ನಷ್ಟದ ನಡುವೆಯೂ ಬೇಸಿಗೆಯಲ್ಲಿ ಯಾವುದೇ ಲೋಡ್‌ಶೆಡ್ಡಿಂಗ್‌ ಮಾಡದೆ ಅನುಕೂಲ ಮಾಡಿಕೊಟ್ಟಿದೆ.

ಎಷ್ಟು ಕೋಟಿ ರೂ. ನಷ್ಟ: ಜೆಸ್ಕಾಂ ಇಲಾಖೆ ಬಳ್ಳಾರಿ ವಿಭಾಗದಲ್ಲಿ ಬಳ್ಳಾರಿ ನಗರ, ಗ್ರಾಮೀಣ, ಸಂಡೂರು, ಸಿರುಗುಪ್ಪ ತಾಲೂಕುಗಳು ಬರುತ್ತವೆ. ಮೂರು ತಾಲೂಕುಗಳಲ್ಲಿ 40 ಸಾವಿರ ಭಾಗ್ಯಜ್ಯೋತಿ ಸಂಪರ್ಕಗಳು ಇವೆ. 55 ಸಾವಿರ ರೈತರ ಪಂಪ್‌ ಸೆಟ್‌, ಸಣ್ಣ ಕೈಗಾರಿಕೆ, ಗೃಹ ಬಳಕೆ 1 ಲಕ್ಷ ವಿದ್ಯುತ್‌ ಸಂಪರ್ಕಗಳು ಇವೆ. ಈ ಮೊದಲು ಪ್ರತಿ ತಿಂಗಳು 30 ಕೋಟಿ ರೂ. ಶುಲ್ಕ ವಸೂಲಿ ಗುರಿ ಹೊಂದಲಾಗಿದ್ದು, ಪಂಪ್‌ಸೆಟ್‌ಗಳ 4 ಕೋಟಿ ರೂ. ಶುಲ್ಕ ವಸೂಲಿಯಾಗದಿದ್ದರೂ, ಬಾಕಿ ಸಂಪರ್ಕಗಳಿಂದ 26 ಕೋಟಿ ರೂ. ಶುಲ್ಕ ವಸೂಲಿಯಾಗುತ್ತಿತ್ತು. ಆದರೆ,
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಳೆದ ಮಾರ್ಚ್‌ನಲ್ಲಿ ಕೇವಲ 17 ಕೋಟಿ ರೂ., ಏಪ್ರಿಲ್‌ನಲ್ಲಿ 15 ಕೋಟಿ ರೂ. ಶುಲ್ಕ ವಸೂಲಿಯಾಗಿದೆ. ಎರಡು ತಿಂಗಳಲ್ಲಿ ಸುಮಾರು 20 ಕೋಟಿ ರೂ. ಶುಲ್ಕ ಬಾಕಿ ಉಳಿದಿದೆ. ಹಾಗಂತ ಶುಲ್ಕ ಪಾವತಿಸದ ಗ್ರಾಹಕರ ಮನೆಗಳ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿಲ್ಲ ಎನ್ನುತ್ತಾರೆ ಜೆಸ್ಕಾಂ ಅಧಿಕಾರಿಗಳು.

ಲೋಡ್‌ಶೆಡ್ಡಿಂಗ್‌ ಇಲ್ಲ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಒಂದೂವರೆ ತಿಂಗಳು ಸಣ್ಣ ಕೈಗಾರಿಕೆಗಳೆಲ್ಲ ಸ್ಥಗಿತಗೊಂಡಿವೆ. ಕೃಷಿ ಚಟುವಟಿಕೆಗಳು ಇದೀಗ ಆರಂಭವಾಗುತ್ತಿವೆ. ಹೀಗಾಗಿ ಲಾಕ್‌ಡೌನ್‌
ಅವಧಿಯಲ್ಲೂ ವಸತಿ ಪ್ರದೇಶಗಳಿಗೆ ಸಮರ್ಪಕವಾಗಿ ವಿದ್ಯುತ್‌ ಪೂರೈಕೆಗೆ ಸಾಧ್ಯವಾಗಿದೆ. ಮೇಲಾಗಿ ಸೋಲಾರ್‌ ವಿದ್ಯುತ್‌ ಬಂದ ಬಳಿಕ ಬೇಸಿಗೆಯಲ್ಲಿ ಲೋಡ್‌ಶೆಡ್ಡಿಂಗ್‌ ಬಹುತೇಕ ಕಡಿತವಾಗಿದೆ.

ನನೆಗುದಿಗೆ ಬಿದ್ದಿದ್ದ ಕಾಮಗಾರಿ ಪೂರ್ಣ: ಜೆಸ್ಕಾಂ ಇಲಾಖೆಯ ಬಳ್ಳಾರಿ ನಗರ, ಗ್ರಾಮೀಣ, ಸಿರುಗುಪ್ಪ, ಸಂಡೂರು ತಾಲೂಕುಗಳಲ್ಲಿ 6.12 ಕೋಟಿ ರೂ. ವೆಚ್ಚದಲ್ಲಿ 498 ಕಾಮಗಾರಿಗಳನ್ನು
ಪೂರ್ಣಗೊಳಿಸಿ ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಹಿಡಿದಂತಾಗಿದೆ. ಈ ಪೈಕಿ ಬಳ್ಳಾರಿ ಗ್ರಾಮಾಂತರ ಭಾಗದಲ್ಲಿ ದುರಸ್ತಿಗೆ ಬಂದಿದ್ದ 44 ವಿದ್ಯುತ್‌ ಕಂಬಗಳನ್ನು ಬದಲಾಯಿಸಲಾಗಿದೆ. 115 ಪ್ರದೇಶಗಳಲ್ಲಿ ಶಾಲಾ-ಕಾಲೇಜುಗಳಲ್ಲಿ ಹಾದು ಹೋಗಿದ್ದ ವಿದ್ಯುತ್‌ ತಂತಿ ಸ್ಥಳಾಂತರ ಮಾಡಲಾಗಿದೆ. 8 ಜನನಿಬಿಡ ಪ್ರದೇಶಗಳಲ್ಲಿನ ವಿದ್ಯುತ್‌ ಪರಿವರ್ತಕ
ಸ್ಥಳಾಂತರ ಮಾಡಲಾಗಿದೆ. ಅದೇರೀತಿ ಸಂಡೂರು ತಾಲೂಕಿನಲ್ಲಿ 35 ವಿದ್ಯುತ್‌ ಕಂಬಗಳ ಬದಲಾವಣೆ, ವಿಶೇಷ ಅನುದಾನ ಯೋಜನೆಯಡಿ 29 ವಿದ್ಯುತ್‌ ಪರಿವರ್ತಕ ಸ್ಥಳಾಂತರ, 20 ಪ್ರದೇಶದಲ್ಲಿ ವಿದ್ಯುತ್‌ ತಂತಿ ಸ್ಥಳಾಂತರಿಸಲಾಗಿದೆ. ಅದೇ ರೀತಿ ಸಿರುಗುಪ್ಪ ತಾಲೂಕಿನಲ್ಲಿ ವಿಶೇಷ ಅಭಿವೃದ್ಧಿ ಯೋಜನೆಯಡಿ ಒಟ್ಟು 181 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ
ಎಂದು ಇಲಾಖೆ ಅಂಕಿ ಅಂಶಗಳು ಸ್ಪಷ್ಟಪಡಿಸುತ್ತವೆ.

ಲಾಕ್‌ಡೌನ್‌ ಅವಧಿಯಲ್ಲೂ ಸಾರ್ವಜನಿಕರಿಗೆ ವಿದ್ಯುತ್‌
ಕೊರತೆಯಾಗಂತೆ ಪೂರೈಸಲಾಗಿದೆ. ಜತೆಗೆ ಹಲವು ದಿನಗಳಿಂದ ನನೆಗುದಿಗೆ ಬಿದ್ದಿದ್ದ ಕಾಮಗಾರಿಗಳನ್ನು 6.12 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದೆ. ಮುಖ್ಯವಾಗಿ ಶಾಲಾ-ಕಾಲೇಜುಗಳಲ್ಲಿ ಹಾದು ಹೋಗಿದ್ದ ವಿದ್ಯುತ್‌ ತಂತಿಗಳನ್ನು, ಜನನಿಬಿಡ ಪ್ರದೇಶಗಳಲ್ಲಿ ಇದ್ದ ವಿದ್ಯುತ್‌ ಪರಿವರ್ತಕವನ್ನು ಸ್ಥಳಾಂತರಿಸಲಾಗಿದೆ.
ರಂಗನಾಥ್‌ ಬಾಬು, ಕಾರ್ಯನಿರ್ವಾಹಕ ಅಭಿಯಂತರ, ಜೆಸ್ಕಾಂ ಬಳ್ಳಾರಿ.

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.