ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಿ

ರೈತರು ಆದಷ್ಟು ಮುಂಜಾಗ್ರತೆ ಕ್ರಮಗಳನ್ನು ವಹಿಸಿದರೆ ಅನುಕೂಲವಾಗುತ್ತದೆ

Team Udayavani, Jul 25, 2022, 6:27 PM IST

ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಿ

ಸಿರುಗುಪ್ಪ: ರೈತರು ದೇಶದ ಬೆನ್ನೆಲುಬಾಗಿದ್ದು, ರೈತರು ಆರ್ಥಿಕವಾಗಿ ಸ್ಥಿತಿವಂತರಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ರಾಷ್ಟ್ರೀಯ ಕೆಮಿಕಲ್‌ ಫರ್ಟಿಲೈಜರ್ನ ಸೀಮಾಂಧ್ರ ಪ್ರದೇಶದ ಮಾರ್ಕೇಟಿಂಗ್‌ ಮ್ಯಾನೇಜರ್‌ ಎಂ.ಜಿ. ದೇಸಾಯಿ ತಿಳಿಸಿದರು.

ತಾಲೂಕಿನ ಗಡಿಭಾಗದಲ್ಲಿರುವ ಗೂಳ್ಯಂ ಗ್ರಾಮದಲ್ಲಿ ರಾಷ್ಟ್ರೀಯ ಕೆಮಿಕಲ್‌ ಫರ್ಟಿಲೈಜರ್‌ ವತಿಯಿಂದ ರೈತರಿಗೆ ಹಮ್ಮಿಕೊಂಡಿದ್ದ ಮೆಣಸಿನಕಾಯಿ ಮತ್ತು ಹತ್ತಿ ಬೆಳೆಗಳ ಕುರಿತು ಏರ್ಪಡಿಸಿದ್ದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು ಈ ಭಾಗದಲ್ಲಿ ಹೆಚ್ಚಾಗಿ ಒಣ ಮೆಣಸಿನಕಾಯಿ ಮತ್ತು ಹತ್ತಿ ಬೆಳೆಯನ್ನು ಬೆಳೆಯುತ್ತಿದ್ದು, ಈ ಬೆಳೆಗಳನ್ನು ಬೆಳೆಸಲು ರೈತರು ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಬೇಸಾಯ ತಜ್ಞ ಡಾ| ಎಂ.ಎ.ಬಸವಣ್ಣೆಪ್ಪ ಮಾತನಾಡಿ, ರೈತರು ಕೇವಲ ಒಂದೇ ಬೆಳೆಗೆ ಜೋತು ಬೀಳದೆ ಸಮಗ್ರ ಬೆಳೆ ಪದ್ಧತಿಯಲ್ಲಿ ವಿವಿಧ ಬೆಳೆಗಳನ್ನು ಬೆಳೆದರೆ ಅನುಕೂಲವಾಗುತ್ತದೆ. ಸಮಗ್ರ ಕೃಷಿಯೊಂದಿಗೆ ಕುರಿ, ಕೋಳಿ, ಮೇಕೆ, ಹಸು, ಎಮ್ಮೆಗಳನ್ನು ಸಾಕಬೇಕು, ಇದರಿಂದ ನಿರಂತರವಾಗಿ ಅದಾಯ ಬರುತ್ತದೆ. ರೈತರು ಏಕ ಬೆಳೆ ಬೆಳೆಯುವ ಪದ್ಧತಿಯನ್ನು ಕೈಬಿಟ್ಟು ವಿವಿಧ ಬೆಳೆಗಳನ್ನು ಬೆಳೆದರೆ ಮಾರುಕಟ್ಟೆಯಲ್ಲಿ ಒಂದು ಬೆಳೆಗೆ ದರ ಕಡಿಮೆ ಇದ್ದರೆ ಮತ್ತೂಂದು ಬೆಳೆಯಲ್ಲಿ ಧರ ಹೆಚ್ಚಿರುತ್ತದೆ. ಇದರಿಂದ ಕೃಷಿಯಲ್ಲಿ ರೈತರು ಸಮತೋಲನವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಮಣ್ಣು ವಿಜ್ಞಾನಿ ಡಾ| ರವಿ ಮಾತನಾಡಿ ಮನುಷ್ಯನ ಆರೋಗ್ಯಕ್ಕೆ ರಕ್ತ ಮತ್ತು ಮೂತ್ರ ಪರೀಕ್ಷೆ ಎಷ್ಟು ಮುಖ್ಯವೋ, ಕೃಷಿಯಲ್ಲಿ ಮಣ್ಣು ಪರೀಕ್ಷೆಯೂ ಅಷ್ಟೇ ಪ್ರಾಮುಖ್ಯತೆಯನ್ನು ಪಡೆದಿದ್ದು, ಮಣ್ಣು ಪರೀಕ್ಷೆ ಮಾಡಿಸಿದರೆ ಜಮೀನಿಗೆ ಮಾಡಬೇಕಾದ ರಸಗೊಬ್ಬರದ ಖರ್ಚುಗಳನ್ನು ಉಳಿಸಬಹುದು ಅಲ್ಲದೆ ಇಳುವರಿ ಹೆಚ್ಚು ಪಡೆಯಬಹುದು. ಭೂಮಿ ಫಲವತ್ತತೆಯನ್ನು ಉಳಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ರೈತರು ನೀರಾವರಿಯಲ್ಲಿ ವರ್ಷಕ್ಕೆ ಒಂದು ಬಾರಿ, ಮಳೆಯಾಶ್ರಿತ ಪ್ರದೇಶದ ರೈತರು ಮೂರು ವರ್ಷಕ್ಕೊಮ್ಮೆ ಮಣ್ಣು ಪರಿಕ್ಷೆಯನ್ನು  ಕಡ್ಡಾಯವಾಗಿ ಮಾಡಿಸಿದರೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಕೀಟ ತಜ್ಞ ಆನಂದ ಕುಮಾರ್‌ ಮಾತನಾಡಿ, ಕಳೆದ ಬಾರಿ ಒಣ ಮೆಣಸಿನಕಾಯಿ ಬೆಳೆದ ರೈತರು ಕರಿನುಸಿ ಹುಳುವಿನ ಬಾದೆಯಿಂದ ಸಾಕಷ್ಟು ನಷ್ಟವನ್ನು ಅನುಭವಿಸಿದ್ದು, ಈ ವರ್ಷ ಮೆಣಸಿನಕಾಯಿ ಬೆಳೆಯನ್ನು ಬೆಳೆಯಬೇಕೋ, ಬೇಡವೋ ಎನ್ನುವ ಗೊಂದಲ ರೈತರನ್ನು ಕಾಡುತ್ತಿದೆ.

ಆದರೆ ಈ ವರ್ಷವೂ ಮೆಣಸಿನಕಾಯಿ ಬೆಳೆಯನ್ನು ಬೆಳೆಯಿರಿ, ಆದರೆ ಕರಿನುಸಿ ಹುಳುವಿನ ಬಾದೆ ತಡೆಯುವಂತೆ ಮೆಣಸಿನಕಾಯಿ ಬೆಳೆಗೆ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಔಷಧಿಗಳನ್ನು ಸಿಂಪಡಿಸಿ ಅಲ್ಲದೆ ಮೆಣಸಿನಕಾಯಿ ಹೊಲದ ಸುತ್ತಲು 2 ಸಾಲು ಮೆಕ್ಕೆಜೋಳದ ಬೆಳೆಯನ್ನು ಬೆಳೆದರೆ ವಿವಿದ ಕೀಟಗಳು ಬರದಂತೆ ತಡೆಯಲು ತಡೆಗೋಡೆಯಂ ತೆ ಕೆಲಸ ಮಾಡುತ್ತದೆ. ರೈತರು ಆದಷ್ಟು ಮುಂಜಾಗ್ರತೆ ಕ್ರಮಗಳನ್ನು ವಹಿಸಿದರೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಕೃಷಿ ವಿಜ್ಞಾನಿ ಡಾ| ಗೋವಿಂದಪ್ಪ, ಆರ್‌ .ಸಿ.ಎಫ್‌ನ ಏಸುರತ್ನಂ, ವಿಶಾಲ್‌, ಕೃಷಿ ಅಧಿಕಾರಿ ಸಾಂಬಶಿವಪ್ಪ, ಬಳ್ಳಾರಿ ಆರ್‌.ಸಿ.ಎಫ್‌ನ ಗುರುಲಿಂಗಪ್ಪ ಮಾತನಾಡಿದರು. ವಿವಿಧ ಗ್ರಾಮಗಳ ರೈತರು ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.