ಏರ್ ಜಾಕ್ ಕುಸಿದು ಕಾರ್ಮಿಕ ಸಾವು
Team Udayavani, May 22, 2022, 5:44 PM IST
ಕುರುಗೋಡು: ಸಾರಿಗೆ ಸಂಸ್ಥೆಯ ಬಸ್ ರಿಪೇರಿ ಮಾಡುತ್ತಿದ್ದ ವೇಳೆಯಲ್ಲಿ ಜಾಕ್ಏರ್ ಬಲೂನ್ ಕುಸಿದ ಪರಿಣಾಮ ತಾಂತ್ರಿಕ ಸಹಾಯಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುರುಗೋಡಿನ ಬಸ್ ಡಿಪೋದಲ್ಲಿ ಶನಿವಾರ ಬೆಳಗ್ಗೆ ಜರುಗಿದೆ.
ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಳ್ಳಾರಿ ವಿಭಾಗಕ್ಕೆ ಸೇರಿದ ಕುರುಗೋಡು ಬಸ್ ಡಿಪೋದಲ್ಲಿ ತಾಂತ್ರಿಕ ಸಹಾಯಕನಾಗಿದ್ದ ಟಿ. ಮಂಜುನಾಥ್ (32) ಮೃತಪಟ್ಟ ವ್ಯಕ್ತಿ.
ಎಂದಿನಂತೆ ಕರ್ತವ್ಯಕ್ಕೆ ಹಾಜರಾದಾಗ ಬೆಳಗ್ಗೆ 8ಗಂಟೆ ಸಮಯದಲ್ಲಿ ಬಸ್ಸಿಗೆ ಜಾಕ್ ಅಳವಡಿಸಿ ಬಲೂನ್ ರಿಪೇರಿ ಮಾಡಲು ಮುಂದಾಗಿದ್ದು, ಈ ವೇಳೆ ಜಾಕ್ಏಕಾಏಕಿ ಸ್ಲಿಪ್ ಆಗಿ ಮಂಜುನಾಥನ ಎದೆ ಮತ್ತು ಕುತ್ತಿಗೆಯ ಮೇಲೆ ಕುಸಿದಿದೆ ಎನ್ನಲಾಗಿದೆ.
ಅಲ್ಲಿಯೇ ಇದ್ದ ಕೆಲ ನೌಕರರು ಮಂಜುನಾಥನನ್ನು ಕಾಪಾಡಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿ ನಂತರ ಮಂಜುನಾಥ್ ಅವರನ್ನು ಹೊರಗೆ ತೆಗೆದು ಹೆಚ್ಚಿನ ಚಿಕಿತ್ಸೆಗಾಗಿ ಪಟ್ಟಣದ ಸಮುದಾಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಸಾವಿನ ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಸಾರಿಗೆ ಸಂಸ್ಥೆಯಲ್ಲಿ 13 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಕಳೆದ ವರ್ಷವಷ್ಟೇ ಕುರುಗೋಡು ಡಿಪೋಗೆ ವರ್ಗಾವಣೆಗೊಂಡಿದ್ದರು. ಮಂಜುನಾಥ್ ಸಾವಿಗೆ ಇಲ್ಲಿನ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ ಸಿಬ್ಬಂದಿ ತಮ್ಮ ಆಕ್ರೋಶ ಹೊರಹಾಕಿದರು. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ