14ರಂದು ಅಂಬೇಡ್ಕರ್‌-ಜಗಜೀವನ್‌ರಾಂ ಜಯಂತಿ ಆಚರಣೆ

ಲೋಪಗಳಿಗೆ ಅಸ್ಪದ ನೀಡದಂತೆ ಜಿಲ್ಲಾಧಿಕಾರಿ ಸೂಚನೆ

Team Udayavani, Mar 29, 2022, 2:56 PM IST

preeti

ಬಳ್ಳಾರಿ: ಜಿಲ್ಲಾಡಳಿತದ ವತಿಯಿಂದ ಮಾಜಿ ಉಪಪ್ರಧಾನಿ ಹಸಿರು ಕ್ರಾಂತಿ ಹರಿಕಾರ ಡಾ| ಬಾಬು ಜಗಜೀವನರಾಂ ಹಾಗೂ ಸಂವಿಧಾನಶಿಲ್ಪಿ ಡಾ| ಬಿ.ಆರ್‌.ಅಂಬೇಡ್ಕರ್‌ ಅವರ ಜಯಂತಿಯನ್ನು ಏ.14ರಂದು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಧರಿಸಲಾಯಿತು.

ಮೆರವಣಿಗೆ, ಸ್ತಬ್ಧಚಿತ್ರ, ಆಹಾರ, ವೇದಿಕೆ ಸೇರಿದಂತೆ ವಿವಿಧ ಇಲಾಖೆಗಳಿಗೆ ವಹಿಸಲಾದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಮತ್ತು ಯಾವುದೇ ಲೋಪಗಳಿಗೆ ಅಸ್ಪದ ನೀಡದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಏ. 14ರಂದು ಬೆಳಗ್ಗೆ 9:30ಕ್ಕೆ ಮುನ್ಸಿಪಲ್‌ ಕಾಲೇಜು ಮೈದಾನದಿಂದ ಮೆರವಣಿಗೆ ಆರಂಭವಾಗಲಿದ್ದು, ಗಡಗಿ ಚನ್ನಪ್ಪ ವೃತ್ತದ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿ ರಸ್ತೆ ಮಾರ್ಗವಾಗಿ ವಾಲ್ಮೀಕಿ ಭವನಕ್ಕೆ ತೆರಳಲಿದೆ. ಬೆಳಗ್ಗೆ 11ಕ್ಕೆ ವಾಲ್ಮೀಕಿ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು ಸಾರಿಗೆ, ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಚಾಲನೆ ನೀಡಲಿದ್ದು, ಸಂಪನ್ಮೂಲ ವ್ಯಕ್ತಿಯೊಬ್ಬರು ಡಾ| ಬಿ.ಆರ್‌.ಅಂಬೇಡ್ಕರ್‌ ಮತ್ತು ಡಾ| ಬಾಬು ಜಗಜೀವನರಾಂ ಅವರ ಕುರಿತು ಉಪನ್ಯಾಸ ನೀಡಲಿದ್ದಾರೆ. ಶಾಸಕರು, ನಿಗಮಮಂಡಳಿ ಅಧ್ಯಕ್ಷರು, ಜನಪ್ರತಿನಿಧಿಗಳು, ಅಧಿಕಾರಿಗಳು ಆಗಮಿಸಲಿದ್ದಾರೆ ಎಂದರು. ವಾಲ್ಮೀಕಿ ಭವನದಲ್ಲಿ ಸೌಂಡ್‌ ಎಕೋಸಿಸ್ಟಮ್‌ ಸರಿಯಾಗದಿದ್ದಲ್ಲಿ ಮುನ್ಸಿಪಲ್‌ ಕಾಲೇಜು ಮೈದಾನದಲ್ಲಿಯೇ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಮುಖಂಡರ ಮನವಿಗೆ ಸ್ಪಷ್ಟನೆ ನೀಡಿದರು.

ಜಗಜೀವನರಾಂ ಭವನ ಕಾಮಗಾರಿ ಪೂರ್ಣ

ಬಳ್ಳಾರಿ ನಗರದಲ್ಲಿ ಕಳೆದ 12 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಡಾ| ಬಾಬು ಜಗಜೀವನರಾಂ ಭವನದ ನಿರ್ಮಾಣ ಕಾಮಗಾರಿಯನ್ನು ಇನ್ನೂ ಮೂರು ತಿಂಗಳೊಳಗೆ ಪೂರ್ಣಗೊಳಿಸಿ ಸಮುದಾಯದ ಬಳಕೆಗೆ ನೀಡಲಾಗುವುದು ಎಂದ ಡಿಸಿ ಮಾಲಪಾಟಿ, ಭವನದ ಕುರಿತು ತಮ್ಮ ನೋವು ಅರ್ಥವಾಗುತ್ತದೆ. ನಾಳೆಯಿಂದಲೇ ಭವನದ ಕಂಪೌಂಡ್‌ ಕಾಮಗಾರಿ ಆರಂಭಿಸಲಾಗುವುದು. ಎಲ್ಲ ರೀತಿಯಿಂದಲೂ ಸುಸಜ್ಜಿತವಾದ ಭವನವನ್ನು ತಮಗೆ ಒದಗಿಸಲಾಗುತ್ತದೆ ಎಂದು ಅವರು ಭರವಸೆ ನೀಡಿದರು.

ಅಂಬೇಡ್ಕರ್‌ ವೃತ್ತದ ಸೌಂದರೀಕರಣಕ್ಕೆ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು. ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜಿಲ್ಲಾಡಳಿತದ ವತಿಯಿಂದಲೇ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗುವುದು ಎಂದು ವಿವರಿಸಿದ ಜಿಲ್ಲಾಧಿಕಾರಿಗಳು ಕೆಎಎಸ್‌/ಐಎಎಸ್‌ ತರಬೇತಿಗೆ ಜಿಲ್ಲಾಡಳಿತದಿಂದ ಸ್ಪರ್ಧಾತ್ಮಕ ತರಬೇತಿ ಒದಗಿಸಲು ಕ್ರಮವಹಿಸಲಾಗುವುದು ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿರುವ ವಿವಿಧ ಇಲಾಖೆಗಳ ಅಡಿಯಲ್ಲಿ ಬರುವ ಹಾಸ್ಟೆಲ್‌ಗ‌ಳ ಕಾಯಕಲ್ಪಕ್ಕೆ ಕ್ರಿಯಾಯೋಜನೆ ರೂಪಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಜಿಪಂ ಸಿಇಒ ಜೆ.ಲಿಂಗಮೂರ್ತಿ, ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್‌, ಅಪರ ಜಿಲ್ಲಾಧಿಕಾರಿ ಪಿ.ಎಸ್‌. ಮಂಜುನಾಥ, ಎಎಸ್ಪಿ ಗುರುನಾಥ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿ ಕಾರಿಗಳು ಮತ್ತು ವಿವಿಧ ದಲಿತ ಸಂಘಟನೆಗಳ ಮುಖಂಡರು ಸೇರಿದಂತೆ ಇತರರು ಇದ್ದರು. ವಿವಿಧ ದಲಿತ ಸಂಘಟನೆಗಳ ಮುಖಂಡರು ಈ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.