ಚೌಡಯ್ಯ ಕಾಯಕದಲ್ಲಿ ದೈವತ್ವ ಕಂಡ ಶರಣರು
ನೇರ, ನಿಷ್ಠುರ ವಚನಗಳಿಂದ ಸಮಾಜ ತಿದ್ದುವ ಕಾರ್ಯ: ಪ್ರಸನ್ನಕುಮಾರ್
Team Udayavani, Jan 23, 2021, 6:03 PM IST
ಹರಪನಹಳ್ಳಿ: ಅಂಬಿಗರ ಚೌಡಯ್ಯ ನಾಡು ಕಂಡ ಅಪರೂಪದ ಶರಣ. ಜಾತ್ಯತೀತ ಸಮಾಜ ಕಟ್ಟಬೇಕೆನ್ನುವ ಉದ್ದೇಶದಿಂದ ತಮ್ಮನ್ನು ತಾವು ಸಮರ್ಪಿಸಿಕೊಂಡವರು. ಸಮಾಜದಲ್ಲಿನ ಮೂಢನಂಬಿಕೆ, ಡಾಂಭಿಕತನ, ಲೋಪದೋಷ ತೊಲಗಿಸಿ ನೇರ, ನಿಷ್ಠುರ ವಚನ ರಚಿಸುವ ಮೂಲಕ ಸಮಾಜ ತಿದ್ದುವ ಕೆಲಸ ಮಾಡಿದ್ದಾರೆ ಎಂದು ಉಪವಿಭಾಗಾಧಿಕಾರಿ ವಿ.ಕೆ.ಪ್ರಸನ್ನಕುಮಾರ್ ಹೇಳಿದರು.
ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ತಾಲ್ಲೂಕು ಆಡಳಿತದಿಂದ ಗುರುವಾರ ಏರ್ಪಡಿಸಲಾಗಿದ್ದ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ನಿಜಶರಣ ಅಂಬಿಗರ ಚೌಡಯ್ಯನವರು ಕಾಯಕದಲ್ಲಿ ದೆ„ವತ್ವ ಕಂಡವರು. ಜಾತಿ, ಮತ, ಪಂಥದ ಹೆಸರಿನಲ್ಲಿ ನಡೆಯುತ್ತಿರುವ ಮೂಢನಂಬಿಕೆ, ಕಂದಾಚಾರಗಳನ್ನು ತೊಲಗಿಸಿ, ವಚನಗಳ ಮೂಲಕ ಸಮಾಜದಲ್ಲಿ ಲೋಪದೋಷಗಳನ್ನು ತಿದ್ದಿ, ಸಮಾಜ ಸುಧಾರಣೆಗೆ ಶ್ರಮಿಸಿದವರು. ಅಂಬಿಗರ ಚೌಡಯ್ಯನವರ ಹೆಸರೆ ವಚನಗಳ ನಾಮಾಂಕಿತವಾಗಿತ್ತು. ಅದರಕ್ಕೆ ಕವಿ, ಉದರಕ್ಕೆ ಸಿಹಿ ಎನ್ನುವ ಹಾಗೆ ಅವರ ವಚನಗಳು ನೇರ ನಿಷ್ಠುರವಾಗಿದ್ದರೂ ವಚನಗಳಲ್ಲಿನ ಸಾರ ಅರ್ಥಪೂರ್ಣವಾಗಿತ್ತು ಎಂದರು. ತಹಶೀಲ್ದಾರ್ ಎಲ್.ಎಂ.ನಂದೀಶ್ ಮಾತನಾಡಿ, ಕಾಯಕತತ್ವ, ಸದಾಚಾರ, ಸನ್ಮಾರ್ಗದಿಂದ ಸಂಪಾದನೆ, ಇದ್ದುದರಲ್ಲಿ ತೃಪ್ತಿಪಡುವುದರ ಮೂಲಕ ಆದರ್ಶ ಬದುಕನ್ನು ಸಾಗಿಸಬೇಕು ಎನ್ನುವುದೇ ಅಂಬಿಗರ ಚೌಡಯ್ಯನವರ ಸಂದೇಶವಾಗಿತ್ತು ಎಂದರು.
ವಕೀಲ ಕಣವಿಹಳ್ಳಿ ಮಂಜುನಾಥ, ತಾಲೂಕು ಮಟ್ಟದ ವಿವಿಧ ಅ ಧಿಕಾರಿಗಳು, ಕಂದಾಯ ಇಲಾಖೆಯ ಕಚೇರಿ ಸಿಬ್ಬಂದಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ