ಕಾಲುವೆಗೆ ನೀರು ಹರಿಸದಿದ್ದರೆ ಅನಿರ್ದಿಷ್ಟಾವಧಿ ಧರಣಿ 


Team Udayavani, Mar 13, 2018, 5:14 PM IST

10.jpg

ಬಳ್ಳಾರಿ: ತುಂಗಭದ್ರಾ ಜಲಾಶಯದ ಬಲದಂಡೆಯ ಕೆಳಮಟ್ಟದ (ಎಲ್‌ಎಲ್‌ಸಿ) ಕಾಲುವೆಗೆ ಐಸಿಸಿ ನಿರ್ಣಯದಂತೆ ಮಾ.30ರ ವರೆಗೆ ನೀರು ಹರಿಸಬೇಕು. ಇಲ್ಲವಾದಲ್ಲಿ ಜಲಾಶಯದ ಮುನಿರಾಬಾದ್‌ ಕಚೇರಿ ಎದುರು ಮಾ.21ರಿಂದ ಅನಿರ್ದಿಷ್ಟಾವಧಿ  ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ತುಂಗಭದ್ರಾ ಮತ್ತು ಅಖಂಡ ರೈತಸಂಘದ ಅಧ್ಯಕ್ಷ ದರೂರು ಪುರುಷೋತ್ತಮಗೌಡ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಡಿಕೆ ಈಡೇರಿಸದಿದ್ದರೆ ಧರಣಿಯೊಂದಿಗೆ ಜಿಲ್ಲೆಯ ಕಾಲುವೆ ವ್ಯಾಪ್ತಿಯ ತಾಲೂಕು, ಪಟ್ಟಣಗಳಲ್ಲಿ ರಸ್ತೆತಡೆ ನಡೆಸಲಾಗುವುದು ಎಂದು ಹೇಳಿದರು.  2017 ನವೆಂಬರ್‌ 13 ರಂದು ಬೆಳಗಾವಿಯ
ಸುವರ್ಣಸೌಧದಲ್ಲಿ ನಡೆದ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಕಾಲುವೆಗಳಿಗೆ ನೀರು ಹರಿಸುವ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಇದರಲ್ಲಿ ಜಲಾಶಯದ ಬಲದಂಡೆಯ ಕೆಳಮಟ್ಟದ (ಎಲ್‌ಎಲ್‌ಸಿ) ಕಾಲುವೆಗೆ ಆನ್‌ ಆ್ಯಂಡ್‌ ಆಫ್‌ ಪದ್ಧತಿಯಡಿ 2017 ನ.30 ರಿಂದ ಡಿ.10ರ ವರೆಗೆ ಪ್ರತಿದಿನ 700 ಕ್ಯುಸೆಕ್‌ ನೀರು ಹರಿಸಬೇಕು. ಡಿ.11 ರಿಂದ ಡಿ. 31ರವರೆಗೆ ಕಡಿತಗೊಳಿಸಿ, ಪುನಃ 2018 ಜ.1 ರಿಂದ ಜ.22ರ ವರೆಗೆ ಪ್ರತಿದಿನ 600 ಕ್ಯುಸೆಕ್‌ ನೀರು ಹರಿಸಿ, ಜ.23 ರಿಂದ ಫೆ.2ರ ವರೆಗೆ ಕಡಿತಗೊಳಿಸಬೇಕು. ಫೆ.3 ರಿಂದ 25ರ ವರೆಗೆ ಪುನಃ 600 ಕ್ಯುಸೆಕ್‌ ಹರಿಸಿ, ಫೆ.26ರಿಂದ ಮಾ.7ರ ವರೆಗೆ ಕಡಿತಗೊಳಿಸಬೇಕು. ಮಾ.8 ರಿಂದ ಮಾ.30ರ ವರೆಗೆ ಪುನಃ ನೀರು ಹರಿಸಬೇಕಿದೆ. ಆದರೆ, ಮಾ.21 ರಿಂದ ಕಾಲುವೆಗೆ ನೀರು ಕಡಿತಗೊಳಿಸುವುದಾಗಿ ಜಲಾಶಯದ ಅಧಿಕಾರಿಗಳು ತಿಳಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಒಂದು ವೇಳೆ ಕಾಲುವೆಯಲ್ಲಿ ನೀರು ಹರಿಸದಿದ್ದರೆ, 2 ಲಕ್ಷ ಎಕರೆ ಪ್ರದೇಶದಲ್ಲಿ ನಾಟಿ ಮಾಡಲಾಗಿರುವ 700 ಕೋಟಿ ರೂ. ಮೌಲ್ಯದ ಭತ್ತ ನಾಶವಾಗಲಿದೆ. ಇದರಿಂದ ಭಾರಿ ನಷ್ಟವಾಗಲಿದ್ದು, ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಅಲ್ಲದೇ, ಜಲಾಶಯದಲ್ಲಿ ಇನ್ನು 7.5 ಟಿಎಂಸಿ ಅಡಿ ನೀರು ಸಂಗ್ರಹವಿದೆ. ಮಾ.21 ರಿಂದ ಪ್ರತಿದಿನ 600 ಕ್ಯೂಸೆಕ್‌ ನೀರು ಕಾಲುವೆಗೆ ಹರಿಸಿದರೂ, 10 ದಿನಗಳಿಗೆ ಕೇವಲ ಅರ್ಧ ಟಿಎಂಸಿ ಅಡಿ ನೀರು ಸಾಕಾಗಲಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಎಲ್‌ಎಲ್‌ಸಿ ಕಾಲುವೆಗೆ ಮಾ.21 ರಿಂದ ನೀರು ಕಡಿತಗೊಳಿಸದೆ, ಐಸಿಸಿ ಸಭೆಯ ನಿರ್ಣಯದಂತೆ ಬೇಸಿಗೆ ಬೆಳೆಗೆ ನೀರು ಹರಿಸಬೇಕು. ಇಲ್ಲವಾದಲ್ಲಿ ಮಾ.21 ರಿಂದಲೇ ಮುನಿರಾಬಾದ್‌ನಲ್ಲಿನಲ್ಲಿನ ಜಲಾಶಯದ ಮುಖ್ಯ ಅಭಿಯಂತರರ ಕಚೇರಿ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸಲಾಗುವುದು. ಜತೆಗೆ ಜಿಲ್ಲೆಯ ಸಿರುಗುಪ್ಪ, ಕಂಪ್ಲಿ, ಕುರುಗೋಡು, ಸಿರಿಗೇರಿ ಕ್ರಾಸ್‌, ತೆಕ್ಕಲಕೋಟೆಯಲ್ಲಿ ರಸ್ತೆತಡೆ ನಡೆಸಲಾಗುವುದು ಎಂದರು.

ಕಾಲುವೆಗೆ ನೀರು ಹರಿಸದಿದ್ದರೆ ಮುಂಬರುವ ಚುನಾವಣೆಯಲ್ಲಿ ಕಾಲುವೆ ವ್ಯಾಪ್ತಿಯ ಕ್ಷೇತ್ರಗಳಿಂದ ಯಾವೊಬ್ಬ ಜನಪ್ರತಿನಿಧಿ ಗಳು ಸಹ ನಾಮಪತ್ರ ಸಲ್ಲಿಸಬಾರದು ಎಂದು ಪುರುಷೋತ್ತಮಗೌಡ ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಸಂಘದ  .ರಂಜಾನ್‌ಸಾಬ್‌,
ಬಸವನಗೌಡ, ಶಾನವಾಸಪುರ ಶರಣಪ್ಪ, ಜಾಲಿಹಾಳ್‌ ಶ್ರೀಧರಗೌಡ, ಬಸವನಗೌಡ ಸೇರಿದಂತೆ ಹಲವು ರೈತ ಮುಖಂಡರು ಇದ್ದರು.

ಐಸಿಸಿ ಸಭೆಯ ನಿರ್ಣಯದಂತೆ ಬೇಸಿಗೆ ಬೆಳೆಗೆ ನೀರು ಹರಿಸಬೇಕು. ಇಲ್ಲವಾದಲ್ಲಿ ಮಾ.21 ರಿಂದಲೇ ಮುನಿರಾಬಾದ್‌ನಲ್ಲಿನಲ್ಲಿನ
ಜಲಾಶಯದ ಮುಖ್ಯ ಅಭಿಯಂತರರ ಕಚೇರಿ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸಲಾಗುವುದು. ಜತೆಗೆ ಜಿಲ್ಲೆಯ ಸಿರುಗುಪ್ಪ, ಕಂಪ್ಲಿ, ಕುರುಗೋಡು, ಸಿರಿಗೇರಿ ಕ್ರಾಸ್‌, ತೆಕ್ಕಲಕೋಟೆಯಲ್ಲಿ ರಸ್ತೆತಡೆ ನಡೆಸಲಾಗುವುದು. 
ದರೂರು ಪುರುಷೋತ್ತಮಗೌಡ, ಅಖಂಡ ರೈತಸಂಘದ ಅಧ್ಯಕ್ಷ

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.