ಅಂಜನಿಪುತ್ರ ಚಿತ್ರಕ್ಕೆ ತಡೆ: ಪ್ರತಿಕ್ರಿಯೆಗೆ ಪುನೀತ್ ನಿರಾಕರಣೆ
Team Udayavani, Dec 25, 2017, 7:30 AM IST
ಹೊಸಪೇಟೆ: ಅಂಜನಿಪುತ್ರ ಚಿತ್ರ ಪ್ರದರ್ಶನಕ್ಕೆ ನ್ಯಾಯಾಲಯ ತಡೆ ನೀಡಿರುವ ಕುರಿತು ಪ್ರತಿಕ್ರಿಯಿಸಲು ಚಿತ್ರದ ನಾಯಕ ನಟ ಪುನೀತ ರಾಜಕುಮಾರ್ ನಿರಾಕರಿಸಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಜನಿಪುತ್ರ ಚಿತ್ರ ಪ್ರದರ್ಶನಕ್ಕೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಜ.2 ರ ವರೆಗೆ ತಡೆ ನೀಡಿರುವ ಕುರಿತು ಕೇಳಲಾದ ಪ್ರಶ್ನೆಗೆ ಚಿತ್ರ ಪ್ರದರ್ಶನಕ್ಕೆ ತಡೆ ಕೋರಿ ನ್ಯಾಯಾಲಯಕ್ಕೆ ಯಾರು ಹೋಗಿದ್ದಾರೋ ಅವರನ್ನೇ ಕೇಳಿ. ಈ ಕುರಿತಂತೆ ಚಿತ್ರದ ನಿರ್ಮಾಪಕರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಚಿತ್ರ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ಶನಿವಾರ ಸಂಜೆ ನಗರದಲ್ಲಿ ಜರುಗಿದ ಟಗರು ಚಿತ್ರದ ಆಡಿಯೋ ಬಿಡುಗಡೆಯ ಅದ್ಧೂರಿ ಸಮಾರಂಭ ಯಶಸ್ವಿಯಾಗಿದೆ. ಸಮಾರಂಭದಲ್ಲಿ ಭಾಗವಹಿಸಿರುವ ಅಭಿಮಾನಿ ಬಳಗವನ್ನು ನೋಡಿದರೆ, ಹೊಸಪೇಟೆ ಜನತೆಯೊಂದಿಗೆ ನಮ್ಮ ಸಂಬಂಧ ಗಾಢವಾಗಿದೆ ಎಂಬುದು ಮತ್ತೂಮ್ಮೆ ಸಾಬೀತಾಗಿದೆ ಎಂದರು.
ಮುಂದುವರಿದ ಪ್ರದರ್ಶನ: ಅಂಜನಿಪುತ್ರ ಚಿತ್ರ ಪ್ರದರ್ಶನಕ್ಕೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ನೀಡಿದ ತಡೆಯಾಜ್ಞೆ ನಡುವೆಯೂ ನಗರದ ಮೀರ್ ಆಲಂ ಚಿತ್ರಮಂದಿರದಲ್ಲಿ ಪ್ರದರ್ಶನ ಮುಂದುವರಿದಿದೆ. ಈ ಕುರಿತಂತೆ ನ್ಯಾಯಾಲಯದ ನೋಟೀಸು ನಮಗೆ ತಲುಪಿಲ್ಲ ಎಂದು ಚಿತ್ರ ಪ್ರದರ್ಶಕ ಶಿವಾರೆಡ್ಡಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್