ಕೆರೆಗಳಿಗೆ ನೀರುಣಿಸುವ ಯೋಜನೆ ಪ್ರಕಟ: ವಿಜಯೋತ್ಸವ
Team Udayavani, Feb 11, 2019, 8:32 AM IST
ಕೊಟ್ಟೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಮಂಡಿಸಿದ ರಾಜ್ಯ ಬಜೆಟ್ನಲ್ಲಿ ಕೊಟ್ಟೂರು ಕೆರೆ ಸೇರಿದಂತೆ ಹಗರಿಬೊಮ್ಮನಹಳ್ಳಿ ಕ್ಷೇತ್ರದ 12 ಕೆರೆಗಳಿಗೆ ನೀರುಣಿಸುವ 85 ಕೋಟಿ ರೂ. ವೆಚ್ಚದ ಯೋಜನೆ ಪ್ರಕಟಿಸಿದ್ದನ್ನು ಸ್ವಾಗತಿಸಿ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಬೈಕ್ ರ್ಯಾಲಿ ಮೂಲಕ ವಿಜಯೋತ್ಸವ ಆಚರಿಸಿದರು.
ಬೀದಿ ಬದಿಯ ವ್ಯಾಪಾರ ಮಾಡುವ ಅರ್ಹ ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿದ ಎಸ್. ಭಿಮಾನಾಯ್ಕ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬೀದಿ ಬದಿಯ ವ್ಯಾಪಾರಿಗಳಿಗೆ ಬಡ್ಡಿರಹಿತ ಸಾಲ ಮಂಜೂರು ಮಾಡಲು ಸಹಕಾರಿ ಬ್ಯಾಂಕ್ಗಳಿಗೆ ಸೂಚಿಸಿದ್ದರು. ಅದರಂತೆ ಪಟ್ಟಣದ ಬಿಡಿಸಿಸಿ ಬ್ಯಾಂಕ್ ಬೀದಿ ಬದಿಯ ಅರ್ಹ ವ್ಯಾಪಾರಿಗಳಿಗೆ ಕಳೆದ 2 ತಿಂಗಳಲ್ಲಿ 125 ಫಲಾನುಭವಿಗಳಿಗೆ ಬಡ್ಡಿ ರಹಿತ 2,000ರಿಂದ 10,000 ರೂ. ಸಾಲ ಮಂಜೂರು ಮಾಡಿದೆ ಎಂದರು.
ಬೀದಿ ಬದಿಯ ವ್ಯಾಪಾರಸ್ಥರಿಗೆ ಮೀಟರ್ ಬಡ್ಡಿಗೆ ಸಾಲ ಪಡೆದು ಅದನ್ನು ತೀರಿಸಲಾಗದೆ ಹಿಂದುಳಿದಿದ್ದರು. ಅಂತಹ ವ್ಯಾಪಾರಿಗಳನ್ನು ಗುರುತಿಸಿ ಬಡ್ಡಿ ಇಲ್ಲದೆ ಸಾಲ ಮಂಜೂರು ಮಾಡಲಾಗಿದೆ. ಇದರು ಮೀಟರ್ ಬಡ್ಡಿಗೆ ಕಡಿವಾಣ ಹಾಕಿದಂತಾಗಿದೆ ಎಂದು ಹೇಳಿದರು.
ಹೊಸಪೇಟೆ ಕೇಂದ್ರ ಬಿಡಿಸಿಸಿ ಬ್ಯಾಂಕ್ನ ಉಪಾಧ್ಯಕ್ಷ ಗುಂಡುಮಣುಗು ತಿಪ್ಪೇಸ್ವಾಮಿ, ಎಂ. ಗುರುಸಿದ್ಧನಗೌಡ, ಹೊಸಪೇಟೆ ಸಹಾಯಕ ಆಯುಕ್ತ ಲೋಕೇಶ್, ತಹಶೀಲ್ದಾರ್ ಮಂಜುನಾಥ, ಜಿಪಂ ಸದಸ್ಯ ಎಂ.ಎಂ.ಜೆ. ಹರ್ಷವರ್ಧನ, ಪಿ.ಎಚ್. ದೊಡ್ಡರಾಮಣ್ಣ, ಬ್ಯಾಂಕಿನ ವ್ಯವಸ್ಥಾಪಕ ಶ್ರೀಧರ, ಮಂಜುನಾಥ ಗೌಡ್ರು, ಬ್ಯಾಂಕಿನ ಸಿಬ್ಬಂದಿ, ಮುಖಂಡರಾದ ಎಪಿಎಂಸಿ. ಅಧ್ಯಕ್ಷ ಬೂದಿ ಶಿವಕುಮಾರ, ಐ.ಎಂ. ದ್ವಾರಕೇಶ್, ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ