ಬಿಜೆಪಿಯವರಿಗೆ ತಕ್ಕ ಉತ್ತರ ನೀಡಿ: ಲಾಡ್‌

ಸಂಡೂರಿನ ಎಲ್ಲ ರಸ್ತೆಗಳ ಕಾಮಗಾರಿ ಪೂರ್ಣ•ಸಮಪಾಲು-ಸಮಬಾಳು ಕಾಂಗ್ರೆಸ್‌ ತತ್ವ

Team Udayavani, May 28, 2019, 10:14 AM IST

ballary-tdy-2..

ಸಂಡೂರು: ವಾರ್ಡ್‌ ನಿವಾಸಿಗಳನ್ನು ಉದ್ದೇಶಿಸಿ ಮಾಜಿ ಸಚಿವ ಸಂತೋಷ್‌ ಲಾಡ್‌, ಈ.ತುಕಾರಾಂ ಮಾತನಾಡಿದರು.

ಸಂಡೂರು: ಸುಳ್ಳು ಭರವಸಗಳನ್ನೇ ನೀಡಿ ಮತ ಕೇಳಲು ಬರುತ್ತಿರುವ ಬಿಜೆಪಿ ಪಕ್ಷದವರಿಗೆ ತಕ್ಕ ಉತ್ತರ ನೀಡಿ ಎಂದು ಸಂತೋಷ್‌ ಲಾಡ್‌ ತಿಳಿಸಿದರು.

ಪಟ್ಟಣದ 13,14 ಹಾಗೂ ಇತರ ವಾರ್ಡ್‌ಗಳಲ್ಲಿ ಬಹಿರಂಗ ಪ್ರಚಾರ ನಡೆಸಿ ಬಳಿಕ ಮಾತನಾಡಿದ ಅವರು, ಸಂತೋಷ್‌ ಲಾಡ್‌ ಎಂದೂ ಸಹ ಜಾತಿವಾದಿಯಲ್ಲಿ, ಧರ್ಮ ವಿರೋಧಿಯೂ ಅಲ್ಲ, ಟಿಕೆಟ್ ಸಿಗದ ಕೆಲವು ಮುಸ್ಲಿಂ ಸಹೋದರರು ಸಂತೋಷ್‌ ಲಾಡ್‌ ಮುಸ್ಲಿಂ ವಿರೋಧಿ ಎಂದು ಬಿಂಬಿಸುವ ಪ್ರಯತ್ನ ನಡೆಸಿದ್ದಾರೆ. ತಾಲೂಕಿನಾದ್ಯಂತ ಎಲ್ಲ ಹುದ್ದೆಗಳನ್ನು ಮುಸ್ಲಿಂ ಬಾಂಧವರಿಗೆ ನೀಡಿದ್ದೇವೆ. ತಾಪಂ ಅಧ್ಯಕ್ಷರಾಗಿ, ವಾಡಾ ಅಧ್ಯಕ್ಷರಾಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ನಾಮನಿರ್ದೇಶನ ಸದಸ್ಯರಾಗಿ, ತಾಪಂ ಸದಸ್ಯರಾಗಿ ಮುಸ್ಲಿಂ ಬಾಂಧವರನ್ನು ಆಯ್ಕೆ ಮಾಡಿದ್ದೇವೆ. ಆದರೆ ಕೆಲವರು ವೈಯಕ್ತಿಕ ಕಾರಣಕ್ಕೆ ತಮ್ಮ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಂಡೂರಿಗೆ ತುಂಗಭದ್ರಾ ನೀರು ತರಲು 50 ಕಿಮೀ ಪೈಪ್‌ ಹಾಕಿ ನೀರು ತಂದಿದ್ದೇವೆ. ಸಂಡೂರಿನ ಎಲ್ಲಾ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಿದ್ದೇವೆ. 100 ಹಾಸಿಗೆ ಆಸ್ಪತ್ರೆಯಲ್ಲಿ ಎಲ್ಲಾ ಸೌಲಭ್ಯ ಒದಗಿಸಲಾಗಿದೆ. ಪ್ರತಿ ಹೋಬಳಿಯಲ್ಲಿ 3 ವಸತಿ ಶಾಲೆ ನಿರ್ಮಿಸಿದ್ದೇವೆ. ನಮ್ಮಿಂದ ಕಿತ್ತುಕೊಳ್ಳಲು ಯತ್ನಿಸಿದ್ದ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರವನ್ನು ಉಳಿಸಿದ್ದೇವೆ. ಶುದ್ಧ ಕುಡಿಯುವ ನೀರನ್ನು ನೀಡಿದ್ದೇವೆ. ಆದರೂ ಸಹ ಜನತ ಸುಳ್ಳು ಮಾತಿಗೆ ಮಾರುಹೋಗಿ ಬಿಜೆಪಿಗೆ ಬೆಂಬಲ ನೀಡುವುದು ಸರಿಯಲ್ಲ. ನಿಮ್ಮ ಆಶೀರ್ವಾದದಿಂದ ರಾಜಕೀಯಕ್ಕೆ ಬಂದಿದ್ದೇವೆ. ಇಲ್ಲಿಯೇ ಹುಟ್ಟಿದ್ದೇವೆ. ಇಲ್ಲಿಯೇ ಸಾಯುತ್ತೇವೆ ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಈ.ತುಕಾರಾಂ ಮಾತನಾಡಿ, ಸಂಡೂರಿನ ಪೂರ್ಣ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದು, ನಿಮ್ಮ ಬೆಂಬಲವೇ ನಮ್ಮ ಕೆಲಸಕ್ಕೆ ಸ್ಫೂರ್ತಿಯಾಗಿದೆ. ಎಲ್ಲಾ ವರ್ಗದ ಜನತೆಗೆ ಸಮಪಾಲು ಸಮಬಾಳು ತತ್ವ ಅಳವಡಿಸಿಕೊಂಡು ಹೋಗುತ್ತಿದ್ದು, ಆದ್ದರಿಂದ ಕಾಂಗ್ರೆಸ್‌ ಬೆಂಬಲಿಸಲು ಮನವಿ ಮಾಡಿದರು. ವಾರ್ಡ್‌ ಸದಸ್ಯರು, ಕಾಂಗ್ರೆಸ್‌ ಮುಖಂಡರಾದ ರೋಷನ್‌ ಜಮೀರ್‌, ಸಿ.ಎಚ್.ಪೀರಾ, ಇತರ ಹಲವಾರು ಗಣ್ಯರು ಪ್ರಚಾರದಲ್ಲಿ ಭಾಗಿಗಳಾಗಿ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.