ವಿದ್ಯುತ್ ಕಾಯ್ದೆ ತಿದ್ದುಪಡಿ ನೀತಿ ವಿರೋಧಿಸಿ ಮನವಿ
Team Udayavani, May 30, 2020, 7:31 AM IST
ಹೊಸಪೇಟೆ: ಕೇಂದ್ರ ಸರ್ಕಾರದ ವಿದ್ಯುತ್ ಕಾಯ್ದೆ ತಿದ್ದುಪಡಿ ನೀತಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚವ್ವನ ಹಳ್ಳಿ ಮಂಜುನಾಥ ಬಣ)ಪದಾಧಿಕಾರಿಗಳು ಶುಕ್ರವಾರ ಉಪವಿಭಾಗಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಕೇಂದ್ರ ಸರ್ಕಾರವು ವಿದ್ಯುತ್ ವಿತರಣೆ ಸುಧಾರಣೆಗಾಗಿ 2014ರಲ್ಲಿ ತಿದ್ದುಪಡಿ ಕಾಯ್ದೆಯನ್ನು 2020ರಲ್ಲಿ ಜಾರಿಗೆ ತರಲು ಕರಡು ಪ್ರತಿ ಪ್ರಕಟಿಸಿದೆ. ಸರ್ಕಾರಿ ಸ್ವಾಮ್ಯದ ವಿತರಣೆ ವ್ಯವಸ್ಥೆಯನ್ನು ಖಾಸಗಿ ವ್ಯಕ್ತಿ ಹಾಗೂ ಕಂಪನಿಗಳಿಗೆ ನೀಡಲು ಈ ಕಾಯ್ದೆ ಸಹಾಯಕವಾಗಲಿದೆ. ಸರ್ಕಾರಿ ಸ್ವಾಮ್ಯದ ವಿದ್ಯುತ್ಛಕ್ತಿ ಕಂಪನಿಗಳಿಗೆ ಖಾಸಗೀಕರಣಗೊಳಿಸಲು ಸರ್ಕಾರ ಹೊರಟಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ ರೈತರ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ಛಕ್ತಿಯನ್ನು ಪೂರೈಸುತ್ತಿದ್ದು, ಕೇಂದ್ರ ಸರ್ಕಾರದ ಹೊಸ ವಿದ್ಯುತ್ ನೀತಿಯಿಂದ ರೈತರು ಪಂಪ್ಸೆಟ್ಗಳಿಗೆ ಮೀಟರ್ ಅಳವಡಿಕೆ ಹಾಗೂ ಕಡ್ಡಾಯ ವಿದ್ಯುತ್ ಬಿಲ್ ಪಾವತಿಸಬೇಕುತ್ತದೆ. ರೈತರ ಕೃಷಿ ಪಂಪ್ ಸೆಟ್ಗಳ ಬಿಲ್ ಪಾವತಿಗಾಗಿ ಕೇಂದ್ರ ಸರ್ಕಾರ, ಕಾನೂನನ್ನು ಜಾರಿಗೆ ತರಲು ಮುಂದಾಗಿದೆ. ಕೂಡಲೇ ರೈತ ವಿರೋಧಿ ವಿದ್ಯುತ್ ನೀತಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಕಲ್ಲಾಳ್ ಪರಶುರಾಮ, ದೇವರಮನೆ ಮಹೇಶ್, ಎಂ.ಪ್ರಕಾಶ್, ನೀರಳ್ಳಿ ವೆಂಕಟೇಶ್ ನಾಯಕ, ಎಂ. ಸೋಮಪ್ಪ, ಷಣ್ಮುಕಪ್ಪ, ಫಕೀರಪ್ಪ, ಬಸಪ್ಪ, ಪಂಪಾಪತಿ, ಭಾಷಸಾಬ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…