ಜಿಪಂ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಟಿಕೆಟ್ ನೀಡಲು ಮನವಿ
Team Udayavani, Jul 31, 2021, 12:01 PM IST
ಹಗರಿಬೊಮ್ಮನಹಳ್ಳಿ: ತಾಲೂಕಿನ ಬಾಚಿಗೊಂಡನಹಳ್ಳಿ ಜಿಪಂ ಕ್ಷೇತ್ರಕ್ಕೆ ಎಸ್ಸಿ ಮೀಸಲು ಬಂದಿದ್ದು ಗದ್ದಿಕೇರಿ ದೊಡ್ಡಬಸಪ್ಪನವರು ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆಗೆ ಅವಕಾಶ ನೀಡಿ ಎಂದು ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಎಸ್ಸಿ ಮೀಸಲು ಆಕಾಂಕ್ಷಿ ಗದ್ದಿಕೇರಿ ದೊಡ್ಡಬಸಪ್ಪ ಮಾತನಾಡಿ, ಕಳೆದ 20 ವರ್ಷಗಳಿಂದ ಕಾಂಗ್ರೆಸ್ನಲ್ಲಿಯೇ ದುಡಿದಿದ್ದು, ಈ ಬಾರಿ ಸ್ಪರ್ಧೆಗೆ ಅವಕಾಶ ಸಿಕ್ಕಿರುವುದರಿಂದ ನನಗೆ ಅವಕಾಶ ನೀಡಿ. ತಾಲೂಕು ಅಂಬೇಡ್ಕರ್ ಸಂಘದ ಅಧ್ಯಕ್ಷನಾಗಿ, ಗದ್ದಿಕೇರಿ ಗ್ರಾಪಂ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ಎಸ್ಸಿ ಮೀಸಲಿನಲ್ಲಿ ಎಡಗೈ ಸಮುದಾಯಕ್ಕೆ ಅವಕಾಶ ನೀಡಿದರೆ ಸಾಮಾಜಿಕ ನ್ಯಾಯಕ್ಕೆ ಬೆಲೆ ಬಂದಂತಾಗುತ್ತದೆ.
ಕಾಂಗ್ರೆಸ್ ಸಾಮಾಜಿಕ ನ್ಯಾಯದ ತಳಹದಿಯಲ್ಲಿ ಇರುವುದರಿಂದ ಸ್ಪರ್ಧೆಯಲ್ಲಿ ನನಗೆ ಅವಕಾಶ ಸಿಗುವುದು ಖಚಿತ ಎಂದು ತಿಳಿಸಿದರು. ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ ಮಾತನಾಡಿ, ಕಾಂಗ್ರೆಸ್ ಹಿರಿಯರು, ಕ್ಷೇತ್ರದ ಶಾಸಕರ ತೀರ್ಮಾನದಂತೆ ಸ್ಪರ್ಧೆಗೆ ಅವಕಾಶ ನೀಡಲಾಗುವುದು.
ದೊಡ್ಡಬಸಪ್ಪರವರನ್ನು ಸ್ಪರ್ಧೆ ಸಾಲಿನಲ್ಲಿ ಪರಿಗಣಿಸಲಾಗುವುದು ಎಂದು ತಿಳಿಸಿದರು. ತಂಬ್ರಹಳ್ಳಿ ಗ್ರಾಪಂ ಉಪಾಧ್ಯಕ್ಷ ಮೈಲಾರ ಶಿವಕುಮಾರ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರೆಡ್ಡಿ ಮಂಜುನಾಥ ಪಾಟೀಲ್, ಗ್ರಾಪಂ ಸದಸ್ಯ ದೊಡ್ಡಬಸಪ್ಪ, ಪಟ್ಟಣಶೆಟ್ಟಿ ಸುರೇಶ, ಗೌರಜ್ಜನವರ ಗಿರೀಶ್, ದೇವಿಪ್ರಸಾದ್, ವಿಷ್ಣು, ಯಮನೂರಪ್ಪ, ಬಾಚಿಗೊಂಡನಹಳ್ಳಿ ಬೆಂಬಲಿಗರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ