ಮನೆ ಕುಸಿದು ಮೃತಪಟ್ಟ ವೃದ್ಧೆ ಕುಟುಂಬಕ್ಕೆ ಪರಿಹಾರ ನೀಡಿ
Team Udayavani, Nov 27, 2021, 12:46 PM IST
ಕೂಡ್ಲಿಗಿ: ತುಪ್ಪಕನಹಳ್ಳಿ ಗ್ರಾಮದಲ್ಲಿ ಮನೆಕುಸಿದು ಮೃತಪಟ್ಟ ವೃದ್ಧೆ ಕುಟುಂಬಕ್ಕೆ ವಸತಿಯೊಂದಿಗೆ 10 ಲಕ್ಷರೂ. ಪರಿಹಾರ ನೀಡಬೇಕು ಎಂದು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಕೂಡ್ಲಿಗಿ ಸಿಐಟಿಯು ಹಾಗೂ ಸಿಡಬ್ಲೂಎಫೈ ಸಹಯೊಗದಲ್ಲಿ ಕಟ್ಟಡ ಕಾರ್ಮಿಕರು, ಸಿಐಟಿಯು ಕಾರ್ಯದರ್ಶಿ ಹಾಗೂ ಎಸ್ಡಿಎಂಸಿ ರಾಜ್ಯ ಮುಖಂಡ ಗುನ್ನಳ್ಳಿ ರಾಘವೇಂದ್ರ ನೇತೃತ್ವದಲ್ಲಿ ತಾಲೂಕಿನ ನಿರಾಶ್ರಿತರಿಗೆ ಯೋಗ್ಯ ಪರಿಹಾರ ಹಾಗೂ ವಸತಿ ಕಲ್ಪಿಸುವಂತೆ ಒತ್ತಾಯಿಸಿ ಕ್ರಮಕ್ಕಾಗಿ ಕಟ್ಟಡ ಕಾರ್ಮಿಕರು ತಹಶೀಲ್ದಾರ್ರಿಗೆ ಹಕ್ಕೊತ್ತಾಯ ಪತ್ರ ನೀಡಿದರು.
ರಾಘವೇಂದ್ರ ಮಾತನಾಡಿ, ಪಟ್ಟಣ ಸೇರಿದಂತೆ ತಾಲೂಕಿನಲ್ಲಿರುವ ಪ್ರತಿ ಗ್ರಾಮಗಳಲ್ಲಿ ನಿರಾಶ್ರಿತ ಕುಟುಂಬಗಳಿಗಾಗಿ ಮಳೆಗಾಲದಲ್ಲಿ ಗಂಜಿ ಕೇಂದ್ರ ಪ್ರಾರಂಭಿಸಬೇಕಿದೆ. ಅವರಿಗೆ ಸೂಕ್ತ ವಸತಿ ಕಲ್ಪಿಸಬೇಕು ಮತ್ತು ಗ್ರಾಮದವರಿಗೆ ಪರಿಹಾರ ನೀಡಬೇಕು ಎಂದು ಈ ಮೂಲಕ ತಾಲೂಕಾಡಳಿತಕ್ಕೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ತಾಲೂಕಿನ ವಿವಿಧೆಡೆಗಳಿಂದ ಬಂದಿದ್ದ ಕಾರ್ಮಿಕ ಮುಖಂಡರು ಹಾಗೂ ಹೋರಾಟಗಾರರು ಹಾಗೂ ವಕೀಲರಾದ ಸಿ. ವಿರುಪಾಕ್ಷಪ್ಪ, ಹೂಲೆಪ್ಪ, ಸತ್ಯಪ್ಪ,ನಾಗರಾಜ, ತಮ್ಮಪ್ಪ, ಬಂಗಾರಪ್ಪ, ಬಸವರಾಜ, ಶಿವರಾಮ, ಅಮರೇಶ, ಮಹದೇವಪ್ಪ, ಅಜೀಜ್, ಮಂಜುನಾಥ, ಸಿದ್ದೇಶ, ಯರಿಸ್ವಾಮಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ