ತಣಿಯದ ಪಾಲಿಕೆ ಅತೃಪ್ತ ಸದಸ್ಯರ ಮುನಿಸು

ಅನ್ಯಾಯ ಸರಿಪಡಿಸುವಂತೆ ಕೊಂಡಯ್ಯರಿಗೆ ಮನವಿ

Team Udayavani, Apr 11, 2022, 4:55 PM IST

mayor

ಬಳ್ಳಾರಿ: ಇಲ್ಲಿನ ಮಹಾನಗರಪಾಲಿಕೆ ಮೇಯರ್‌ ಆಯ್ಕೆಯಿಂದ ಮುನಿಸುಗೊಂಡಿರುವ ಅತೃಪ್ತ ಸದಸ್ಯರು ಗ್ರಾಮೀಣ ಶಾಸಕ ನಾಗೇಂದ್ರರ ಮೇಲೂ ಬೇಸತ್ತಿದ್ದು, ಮಧ್ಯಪ್ರವೇಶಿಸಿ ಸಮಸ್ಯೆ ಇತ್ಯರ್ಥಪಡಿಸುವಂತೆ ವಿಧಾನ ಪರಿಷತ್‌ ಮಾಜಿ ಸದಸ್ಯ, ಕಾಂಗ್ರೆಸ್‌ ಹಿರಿಯ ಮುಖಂಡ ಕೆ.ಸಿ. ಕೊಂಡಯ್ಯರನ್ನು ಭೇಟಿ ಮಾಡಿ ತಮಗಾದ ಅನ್ಯಾಯ ಹೇಳಿಕೊಂಡಿದ್ದಾರೆ.

ತಿರುಪತಿಗೆ ತೆರಳಿದ್ದ ಮಾಜಿ ಶಾಸಕ ಕೆ.ಸಿ. ಕೊಂಡಯ್ಯ ಶುಕ್ರವಾರ ನಗರಕ್ಕೆ ವಾಪಸ್ಸಾಗಿದ್ದು ಬೆಳಗ್ಗೆ 11 ಗಂಟೆ ಸುಮಾರಿಗೆ ಅವರ ಮನೆಗೆ ತೆರಳಿದ ಅತೃಪ್ತ 12 ಜನ ಸದಸ್ಯರು ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ಬಳ್ಳಾರಿ ಮಹಾನಗರ ಪಾಲಿಕೆಯ 39 ವಾರ್ಡ್‌ಗಳಲ್ಲಿ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ 11, ನಗರ ವಿಧಾನಸಭಾ ಕ್ಷೇತ್ರದಲ್ಲಿ 29 ವಾರ್ಡ್‌ಗಳು ಬರಲಿವೆ. ಗ್ರಾಮೀಣ ಕ್ಷೇತ್ರಕ್ಕೆ ಕಾಂಗ್ರೆಸ್‌ನ ನಾಗೇಂದ್ರ ಅವರೇ ಶಾಸಕರಾಗಿರುವುದರಿಂದ ಅಲ್ಲಿನ ವಾರ್ಡ್ ಗಳಿಗೆ ಶಾಸಕರ ಅನುದಾನ, ಡಿಎಂಎಫ್‌, 15ನೇ ಹಣಕಾಸು ಸೇರಿ ಹೆಚ್ಚಿನ ಅನುದಾನ ಸಿಗಲಿದೆ.

ನಗರ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇರುವುದರಿಂದ ಇಲ್ಲಿನ ಕಾಂಗ್ರೆಸ್‌ ಸದಸ್ಯರ ವಾರ್ಡ್‌ಗಳಿಗೆ ಶಾಸಕರ ಅನುದಾನ ನೀಡುತ್ತಿಲ್ಲ. ನಾವೇನಿದ್ದರೂ ಡಿಎಂಎಫ್‌ ನ 25 ಕೋಟಿ, 15ನೇ ಹಣಕಾಸು ಯೋಜನೆಯ 15-16 ಕೋಟಿ ಇದ್ದು, ಇದರಲ್ಲಿ ಪ್ರತಿವಾರ್ಡ್‌ಗೆ 60-70 ಲಕ್ಷ ಅನುದಾನ ಸಿಗಲಿದ್ದು, ಎಷ್ಟು ಅಭಿವೃದ್ಧಿ ಮಾಡಬೇಕು ಎಂಬುದೇ ಗೊತ್ತಾಗುತ್ತಿಲ್ಲ ಎಂದು ಅತೃಪ್ತ ಸದಸ್ಯರು ಅಳಲು ತೋಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಪಾಲಿಕೆ ಮೇಯರ್‌ ಸ್ಥಾನಕ್ಕೆ ಹಿಂದಿನ ಮೀಸಲಾತಿಯಂತೆ 30 ನೇ ವಾರ್ಡ್‌ ಸದಸ್ಯ ಆಸೀಫ್‌ ಹೆಸರನ್ನು ತಂದಿದ್ದ ಶಾಸಕ ನಾಗೇಂದ್ರ ಅವರು, ಮೀಸಲಾತಿ ಸಾಮಾನ್ಯ ಮಹಿಳೆಗೆ ಬದಲಾದರೂ ತಮ್ಮ ಕ್ಷೇತ್ರದ 34 ನೇ ವಾರ್ಡ್‌ ಸದಸ್ಯೆ ಎಂ. ರಾಜೇಶ್ವರಿ ಸುಬ್ಬರಾಯುಡು ಅವರನ್ನು ಪಟ್ಟು ಹಿಡಿದು ಮೇಯರ್‌ ಮಾಡಿದ್ದಾರೆ. ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರು ಇಲ್ಲದ ಕಾರಣ ಮೇಯರ್‌ ಸ್ಥಾನ ನೀಡಿದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಅನುಕೂಲವಾಗಲಿದೆ. ಹಾಗಾಗಿ ನಗರ ಕ್ಷೇತ್ರಕ್ಕೆ ಮೇಯರ್‌ ಸ್ಥಾನವನ್ನು ನೀಡುವಂತೆ ಕೋರಲಾಗಿತ್ತು. ಆದರೆ ನಮ್ಮ ಸಮಸ್ಯೆ ಆಲಿಸುವವರು, ಗೋಳು ಕೇಳುವವರೇ ಇಲ್ಲವಾಗಿದ್ದಾರೆ. ಹಾಗಾಗಿ ನೀವೇ ಜವಾಬ್ದಾರಿ ವಹಿಸಿಕೊಂಡು ಸಮಸ್ಯೆ ಇತ್ಯರ್ಥಪಡಿಸಬೇಕು ಎಂದು ಕೊಂಡಯ್ಯರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕೊಂಡಯ್ಯ ಅವರು ಏ. 12ರವರೆಗೆ ಸಮಯ ಕೊಡಿ, ಇಲ್ಲಿನ ಎಲ್ಲ ಬೆಳವಣಿಗೆಯನ್ನು ಪಕ್ಷದ ರಾಜ್ಯ ಮುಖಂಡರ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದ್ದಾರೆ ಎನ್ನಲಾಗುತ್ತಿದೆ.

ಸದಸ್ಯರೊಂದಿಗೆ ಚರ್ಚಿಸಿಲ್ಲ

ಮೇಯರ್‌ ಆಯ್ಕೆ ಚುನಾವಣೆಯಂದು ಸಾಕಷ್ಟು ಭಿನ್ನಮತವಿತ್ತಾದರೂ ಯಾರೂ ತೋರ್ಪಡಿಸಿಲ್ಲ. ಇದಾದ ಬಳಿಕ ಸರ್ಕಾರಿ ಅತಿಥಿಗೃಹದಲ್ಲಿ ಶಾಸಕರು ಕರೆದಿದ್ದ ಸಭೆಗೆ ನಾವ್ಯಾರು ಸದಸ್ಯರು ಹೋಗಿಲ್ಲ. ಮೊದಲೇ ಬೇಸರದಲ್ಲಿರುವ ನಾವು ಸಭೆಗೆ ಏಕೆ ಹೋಗಬೇಕು. ಇದರಿಂದ ಬೇಸತ್ತು 6ನೇ ವಾರ್ಡ್‌ ಸದಸ್ಯೆ ಎಂ.ಕೆ. ಪದ್ಮರೋಜಾ ಮತ್ತವರ ಪತಿ ಮಾಜಿ ಸದಸ್ಯ ಎಂ.ವಿವೇಕಾನಂದ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದರೂ, ಶಾಸಕರು ಕರೆದು ಸಮಸ್ಯೆ ಕೇಳಿಲ್ಲ. ಆಗಲೇ ಎಲ್ಲರನ್ನೂ ಪ್ರತ್ಯೇಕವಾಗಿ ಕರೆದು ಮಾತನಾಡಿದ್ದರೆ ಸಮಸ್ಯೆ ಬಗೆಹರಿಯುತ್ತಿತ್ತು ಎಂದು ಸದಸ್ಯರೊಬ್ಬರು ತಿಳಿಸಿದ್ದಾರೆ.

ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರು ನಗರ ಕ್ಷೇತ್ರ ವ್ಯಾಪ್ತಿಯ ಪಾಲಿಕೆ ಸದಸ್ಯರನ್ನು ಕಡೆಗಣಿಸುತ್ತಿದ್ದಾರೆ. ಅವರು ನಮ್ಮೊಂದಿಗೆ ಪ್ರತ್ಯೇಕವಾಗಿ ಮಾತನಾಡಿದರೆ ಸಮಸ್ಯೆ ಇತ್ಯರ್ಥವಾಗಲಿದೆ. ನಾವೇನು ಪಕ್ಷ ಬಿಟ್ಟು ಹೋಗುವವರಲ್ಲ. ಕೂತು ಮಾತನಾಡಬೇಕು ಅಷ್ಟೇ.  -ನಂದೀಶ್‌ ಕುಮಾರ್‌, 18ನೇ ವಾರ್ಡ್‌ ಪಾಲಿಕೆ ಸದಸ್ಯರು, ಬಳ್ಳಾರಿ.

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವ 6ನೇ ವಾರ್ಡ್‌ ಸದಸ್ಯೆ ಎಂ.ಕೆ. ಪದ್ಮರೋಜಾ ಮತ್ತವರ ಪತಿ ಎಂ.ವಿವೇಕಾನಂದರ ರಾಜೀನಾಮೆ ಪತ್ರ ನನಗೆ ಸಿಕ್ಕಿಲ್ಲ. ಬಂದು ಕೊಡುವುದಾಗಿ ತಿಳಿಸಿದ್ದರು ಅಷ್ಟೆ. ಕೂತು ಚರ್ಚಿಸಿದರೆ ಸಮಸ್ಯೆ ಬಗೆಹರಿಯಲಿದೆ. ಸದ್ಯದ ವಾಸ್ತವಾಂಶವನ್ನು ಪಕ್ಷದ ವರಿಷ್ಠರಾದ ಡಿ.ಕೆ. ಶಿವಕುಮಾರ್‌, ಈಶ್ವರಖಂಡ್ರೆ, ಯು.ಟಿ.ಖಾದರ್‌ ಅವರ ಗಮನಕ್ಕೆ ತಂದಿದ್ದೇನೆ.  – ಜಿ.ಎಸ್‌.ಮಹ್ಮದ್‌ ರಫೀಕ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷರು, ಬಳ್ಳಾರಿ.

-ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.