ಅಭಿವೃದ್ಧಿ ಕಾಮಗಾರಿಗೆ ಅನುಮೋದನೆ


Team Udayavani, Nov 20, 2020, 3:54 PM IST

ಅಭಿವೃದ್ಧಿ ಕಾಮಗಾರಿಗೆ ಅನುಮೋದನೆ

ಬಳ್ಳಾರಿ: ನಗರದ ಬುಡಾ ಕಚೇರಿ ಸಭಾಂಗಣದಲ್ಲಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ ಬುಧವಾರ ನಡೆಯಿತು.

ಪ್ರಾಧಿಕಾರದ ಅಧ್ಯಕ್ಷ ದಮ್ಮೂರು ಶೇಖರ್‌ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಗರದ ಡಾ| ರಾಜಕುಮಾರ್‌ ಉದ್ಯಾನವನದ ಅಭಿವೃದ್ಧಿ, ಗೋನಾಳ್‌ ಗ್ರಾಮದಲ್ಲಿ ನೂತನ ವಸತಿ ಬಡಾವಣೆ ನಿರ್ಮಾಣ, ಬಳ್ಳಾರಿ ಮಾಸ್ಟರ್‌ ಪ್ಲ್ಯಾನ್‌ಗೆ 12 ಗ್ರಾಮಗಳ ಸೇರ್ಪಡೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿ ಸಭೆಯ ಒಪ್ಪಿಗೆ ಪಡೆಯಲಾಯಿತು.

ನಗರದ ಡಾ| ರಾಜಕುಮಾರ್‌ ಉದ್ಯಾನವನ ಹಾಗೂ ಕೆರೆಯನ್ನು 6.48 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದಕ್ಕೆ ಹಾಗೂ ಸಂಪರ್ಕ ರಸ್ತೆ ಕಲ್ಪಿಸುವುದಕ್ಕೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ನಗರದ ಕೊಳಚೆ ಪ್ರದೇಶಗಳನ್ನು 77 ಲಕ್ಷ ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದಕ್ಕೆ ತೀರ್ಮಾನಿಸಲಾಯಿತು.

ಬಿ.ಗೋನಾಳ್‌ ಗ್ರಾಮದಲ್ಲಿ ಪ್ರಾಧಿಕಾರ ಮತ್ತು ರೈತರ ಸಹಭಾಗಿತ್ವದಲ್ಲಿ 101.98 ಎಕರೆ ಜಮೀನಿನಲ್ಲಿ 50:50 ಅನುಪಾತದಂತೆ, ಪ್ರಾಧಿಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ವಸತಿ ಬಡಾವಣೆನಿರ್ಮಿಸಲು ಇ-ಟೆಂಡರ್‌ ಪ್ರಾಕ್ಯೂಮೆಂಟ್‌ ಮುಖಾಂತರ ಟೆಂಡರ್‌ ಕರೆಯಲು ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು. ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಲಭ್ಯವಿರುವ ನಾಗರಿಕ ಸೌಲಭ್ಯ ನಿವೇಶನಗಳನ್ನು ಬಹಿರಂಗ ಹರಾಜಿನ ಮೂಲಕ ಹಂಚಿಕೆ ಮಾಡುವುದಕ್ಕೆ ಸಾಮಾನ್ಯ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು ಎಂದು ಅಧ್ಯಕ್ಷ ದಮ್ಮೂರು ಶೇಖರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಗರಾಭಿವೃದ್ಧಿ ಪ್ರಾಧಿಕಾರದ ಮಾಸ್ಟರ್‌ ಪ್ಲ್ಯಾನ್‌ ನಲ್ಲಿ 12 ಗ್ರಾಮಗಳನ್ನು ಸೇರ್ಪಡೆ ಮಾಡುವ ಬಗ್ಗೆ ಹಾಗೂ ನಗರದ ವಿವಿಧ ಸ್ಥಳಗಳಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಸ್ವಾಗತ ಫಲಕ, 1 ಕೋಟಿ ವೆಚ್ಚದಲ್ಲಿ ಶುದ್ಧ ಕುಡಿವ ನೀರಿನ ಘಟಕ, 1 ಕೋಟಿ ಹೈ-ಮಾಸ್ಟ್‌ ಕಾಮಗಾರಿಗಳ ಕೈಗೆತ್ತಿಕೊಳ್ಳುವುದರ ಕುರಿತು ವಿವರಿಸಿದರು. ಪ್ರಾಧಿಕಾರದ ವ್ಯಾಪ್ತಿಯ ಹಳ್ಳಿಗಳಿಗೆ ಸ್ವಾಗತ ಫಲಕಗಳನ್ನು ನಿರ್ಮಿಸುವುದು ಮತ್ತು ಖಾಸಗಿ ವಸತಿ ವಿನ್ಯಾಸದ ಅಂತಿಮ ಹಂತದ ನಿವೇಶನವನ್ನು ಬಿಡುಗಡೆ ಮಾಡುವ ಕುರಿತು ಚರ್ಚಿಸಲಾಯಿತು. ಪ್ರಾಧಿಕಾರದ ವ್ಯಾಪ್ತಿಯಲ್ಲಿನ

ಅನುಮೋದಿತ/ ಟಿ.ಎಸ್‌. ನಂಬರ್‌ಗಳ ನಿವೇಶನ ಉಪ ವಿಭಜನೆ ಕೋರಿ ಬಂದ ಅರ್ಜಿಗಳ ಬಗ್ಗೆಯೂ ಚರ್ಚೆ ನಡೆಯಿತು. ಪಿಪಿಪಿ ಮಾದರಿಯಲ್ಲಿ ನಗರದ 3 ಭಾಗಗಳಲ್ಲಿ ಪ್ರಾಧಿಕಾರ ಆವರಣದ ಎರಡುಸ್ಥಳಗಳಲ್ಲಿ ಮತ್ತು ಆಯುಕ್ತರ ವಸತಿಗೃಹದ ಬಳಿ ವಾಣಿಜ್ಯ ಮಳಿಗೆ ನಿರ್ಮಿಸುವುದಕ್ಕೆ ಸಭೆ ಒಪ್ಪಿಗೆ ನೀಡಿತು. ಖಾಲಿ ನಿವೇಶನಗಳಿಗೆ ಸ್ವತ್ಛಗೊಳಿಸುವ ಸಂಬಂಧ ಪಾಲಿಕೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗುವುದು ಎಂದು ದಮ್ಮೂರು ಶೇಖರ್‌ ತಿಳಿಸಿದರು.

ಕೈಗಾರಿಕೆ ಬಹುನಿವೇಶನ ವಿನ್ಯಾಸನಕ್ಷೆ ಅನುಮೋದನೆ, ಖಾಸಗಿ ವಸತಿ ವಿನ್ಯಾಸ ನಕ್ಷೆ ಅನುಮೋದನೆ ನೀಡಲು, ಜಮೀನುಗಳಿಗೆ ಭೂ-ಉಪಯೋಗ ಬದಲಾವಣೆಗೆ ಅನುಮೋದನೆ ನೀಡುವ ಬಗ್ಗೆ ಚರ್ಚಿಸಲಾಯಿತು.

ನಗರ ಶಾಸಕ ಜಿ.ಸೋಮಶೇಖರ್‌ ರೆಡ್ಡಿ, ವಿಧಾನ ಪರಿಷತ್‌ ಸದಸ್ಯರಾದ ಕೆ.ಸಿ. ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಎಡಿಸಿ ಮಂಜುನಾಥ್‌, ಬುಡಾ ಆಯುಕ್ತ ಈರಪ್ಪ ಬಿರಾದಾರ, ಇಂಜಿನೀಯರ್‌ ರವಿಶಂಕರ್‌, ಜಿಲ್ಲಾ ಆರೊಗ್ಯ, ಲೋಕೋಪಯೋಗಿ, ಜೆಸ್ಕಾಂ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.