Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Team Udayavani, Apr 14, 2024, 2:35 PM IST
ಬಳ್ಳಾರಿ: ದಿಂಗಾಲೇಶ್ವರ ಶ್ರೀಗಳ ಚುನಾವಣೆ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ. ನಾನು ಅದೇ ಕ್ಷೇತ್ರದ ಬಂದಿರುವೆ. ದಿಂಗಾಲೇಶ್ವರ ಶ್ರೀಗಳ ಸ್ಪರ್ಧೆಯಿಂದ ಬಿಜೆಪಿ, ಪ್ರಹ್ಲಾದ್ ಜೋಶಿ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಬಳ್ಳಾರಿಯಲ್ಲಿ ಶಾಸಕ ಅರವಿಂದ್ ಬೆಲ್ಲದ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲಗಿದವರನ್ನು ಎಬ್ಬಿಸಬಹುದು ಆದರೆ ಮಲಗಿದ ಹಾಗೆ ನಟನೆ ಮಾಡಿದರೆ ಎಬ್ಬಿಸುವುದು ಕಷ್ಟ. ನಿಜವಾದ ಸಮಸ್ಯೆಯಿದ್ದರೆ ಮಾತನಾಡಿ ಬಗೆಹರಿಸಿ ಮನವೊಲಿಸುವ ಕೆಲಸ ಮಾಡಬಹುದು. ಶ್ರೀಗಳ ಸ್ಪರ್ಧೆ ಹಿಂದೆ ಬೇರೆ ಶಕ್ತಿಗಳು ಕೆಲಸ ಮಾಡುತ್ತಿದೆ. ಹೀಗಾಗಿ ಮನವೊಲಿಸುವ ಪ್ರಯತ್ನ ಮಾಡಲ್ಲ, ಅವಶ್ಯಕತೆಯೂ ಇಲ್ಲ. ಅವರ ಸ್ಪರ್ಧೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಅನಿಸುತ್ತದೆ ಎಂದರು.
ಈಶ್ವರಪ್ಪ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬೆಲ್ಲದ್, ಅವರು ಬಿಜೆಪಿ ಮತ್ತು ಸಂಘದ ನಿಷ್ಠಾವಂತ ಕಾರ್ಯಕರ್ತರು. ನಾಮಪತ್ರ ಹಿಂಪಡೆಯುವ ವಿಶ್ವಾಸವಿದೆ ಎಂದರು.
ಕಾಂಗ್ರೆಸ್ ಸುಳ್ಳು ಗ್ಯಾರಂಟಿ ವರ್ಕೌಟ್ ಆಗುವುದಿಲ್ಲ. 10 ಕೆಜಿ ಅಕ್ಕಿ ಕೊಡುತ್ತೇವೆಂದು ಕೊಟ್ಟಿಲ್ಲ. ಮೋದಿಯವರೇ ಐದು ಕೆಜಿ ಅಕ್ಕಿ ಕೊಟ್ಟಿದ್ದಾರೆ. ಮೋದಿಯವರೇ ಮೂರನೇ ಬಾರಿ ಪ್ರಧಾನಿ ಎಂದು ಜನರು ನಿರ್ಧಾರ ಮಾಡಿದ್ದಾರೆ. ದೇಶದಲ್ಲಿ ಮೋದಿ ಗ್ಯಾರಂಟಿ ಮಾತ್ರ ಎಂದರು.
ಬೆಳಗಾವಿಯಲ್ಲಿ ಪಂಚಮಸಾಲಿ ಬಗ್ಗೆ ನಿರಾಣಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಮುರುಗೇಶ್ ನಿರಾಣಿ ನಮ್ಮ ಪಕ್ಷದರು. ಸಂಜಯ ಪಾಟೀಲ್ ಹೇಳಿಕೆ ಬಗ್ಗೆ ಮಾತನಾಡುವ ಅವಶ್ಯಕತೆಯಿಲ್ಲ. ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ. ಬಳ್ಳಾರಿಯಲ್ಲಿ ರಾಮುಲು ಜನಪ್ರಿಯತೆ, ಜನಾರ್ದನ ರೆಡ್ಡಿ ಶಕ್ತಿಯಿದೆ. ಸೂರ್ಯ ಉದಯಿಸುವುದು ಎಷ್ಟು ಸತ್ಯವೋ, ಬಳ್ಳಾರಿಯಲ್ಲಿ ರಾಮುಲು ಗೆಲವು ಅಷ್ಟೇ ಸತ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್