ಆಶಾಗಳು ಎಚ್ಚರಿಕೆಯೊಂದಿಗೆ ಕರ್ತವ್ಯ ನಿರ್ವಹಿಸಿ: ಚಂದ್ರಪ್ಪ
Team Udayavani, Jul 7, 2020, 5:03 PM IST
ಸಂಡೂರು: ಕೋವಿಡ್ ಪ್ರಮಾಣ ಹೆಚ್ಚಾಗುತ್ತಿದ್ದು ಆಶಾಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಬಹು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ನಿತ್ಯ ತಾಲೂಕು ಆರೋಗ್ಯ ಇಲಾಖೆ ಅಧಿಕಾರಿ ನೀಡುವ ಸಲಹೆ ಮತ್ತು ಎಚ್ಚರಿಕೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ವೈದ್ಯಾಧಿಕಾರಿ ಡಾ| ಚಂದ್ರಪ್ಪ ತಿಳಿಸಿದರು.
ಅವರು ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಸಂಜೀವಿನಿ, ಕೆಎಸ್ಆರ್ ಎಲ್ಪಿಎಸ್ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವ-ಸಂಘಗಳ ಎಂಬಿಕೆ ಎಲ್ಸಿಆರ್ಪಿ ಹಾಗೂ ಎಂಸಿಆರ್ ಪಿಗಳಿಗೆ ಕೋವಿಡ್-19 ತರಬೇತಿ ಕಾರ್ಯಗಾರ ಉದ್ದೇಶಿಸಿ ಮಾತನಾಡಿ,ನಾವು ಮಾಡುತ್ತಿರುವ ಕೆಲಸ ವೇತನಕ್ಕಿಂತ ಹೆಚ್ಚಾಗಿ ಮಾನವೀಯತೆ ಹೊಂದಿದೆ. ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಹಲವಾರು ಕೋವಿಡ್ ಪೀಡಿತರನ್ನೂ ಸಂಪರ್ಕಿಸಿರುತ್ತೇವೆ. ಆದ್ದರಿಂದ ಕಡ್ಡಾಯವಾಗಿ ನಮ್ಮ ರಕ್ಷಣಾ ಅಂಶಗಳನ್ನು ಪಾಲಿಸಬೇಕು ಇಲ್ಲವಾದಲ್ಲಿ ನಮಗೂ ಸಹ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದರು.
ಆರೋಗ್ಯ ಇಲಾಖೆಯಿಂದ 7 ದಿನಗಳ ಕಾಲ ರಕ್ಷಣೆಗಾಗಿ, ನಿರೋಧಕ ಶಕ್ತಿಯ ಮಾತ್ರೆಗಳ ಬಗ್ಗೆ ತಾಲೂಕು ಆರೋಗ್ಯಾಕಾರಿಗಳ ಗೈಡ್ಲೈನ್ಸ್ಗಳ ಬಗ್ಗೆ ಪೂರ್ಣ ಮಾಹಿತಿ ನೀಡಿ ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು. ತರಬೇತಿಯಲ್ಲಿ ಆಶಾಕಾರ್ಯಕರ್ತೆಯರು, ವಿವಿಧ ಸಂಘಟನೆಗಳ ಸದಸ್ಯರುಗಳು, ಅಂಗನವಾಡಿ ಕಾರ್ಯಕರ್ತೆಯರು ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್