ಬೆಲ್ಲ ತಯಾರಿಕಾ ಘಟಕದ ಮೇಲೆ ದಾಳಿ
Team Udayavani, Mar 22, 2021, 8:06 PM IST
ಹೊಸಪೇಟೆ: ತಾಲೂಕು ಆಹಾರ ಸುರಕ್ಷತಾ ಅಧಿಕಾರಿಗಳು, ನಗರದ ಬೆನಕಾಪುರ ಮಾಗಣಿ ಪ್ರದೇಶದಲ್ಲಿರುವ ಬೆಲ್ಲ ತಯಾರಿಕಾ (ಆಲೆಮನೆ) ಘಟಕದ ಮೇಲೆ ದಿಢೀರ್ ದಾಳಿ ನಡೆಸಿದರು.
ಈ ವೇಳೆ ಘಟಕದಲ್ಲಿ ಸಂಗ್ರಹಿಸಿ ಇಡಲಾಗಿದ್ದ 250 ಕೆ.ಜಿ ತೂಕದ ಬೆಲ್ಲ ಮತ್ತು ಬಣ್ಣದ ಡಬ್ಬಗಳನ್ನು ವಶಪಡಿಸಿಕೊಂಡರು. ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಅವರ ನಿರ್ದೇಶನದ ಮೇರೆಗೆ ತಾಲೂಕು ಆಹಾರ ಸುರಕ್ಷತಾ ಅಧಿಕಾರಿ ಉಮೇಶ್ ಮತ್ತು ಅವರ ಸಿಬ್ಬಂದಿ ಸಮೀಪದ ಬೆನಕಾಪುರದಲ್ಲಿ ಕೆ.ಈಶ್ವರಪ್ಪ ಎನ್ನುವವರಿಗೆ ಸೇರಿದ ಬೆಲ್ಲ ತಯಾರಿಕಾ ಘಟಕದ ಮೇಲೆ ದಿಢೀರ್ ದಾಳಿ ನಡೆಸಿ, ಬೆಲ್ಲ ಹಾಗೂ ಬಣ್ಣದ ಡಬ್ಬಗಳನ್ನು ವಶಪಡಿಸಿಕೊಂಡಿದ್ದಾರೆ.
ಇತ್ತೀಚೆಗೆ ತಾಲೂಕಿನ ಮಲಪನಗುಡಿ ಸುತ್ತಮುತ್ತ ಬೆಲ್ಲ ತಯಾರಿಕಾ ಘಟಕಗಳ ಮೇಲೆ ಉಪವಿಭಾಗಾ ಧಿಕಾರಿ ಸಿದ್ದರಾಮೇಶ್ವರ ಅವರು, ದಿಢೀರ್ ದಾಳಿ ನಡೆಸಿ, ಬೆಲ್ಲದ ಗುಣಮಟ್ಟ ಪರಿಶೀಲನೆ ನಡೆಸಿದ್ದರು. ಬೆಲ್ಲ ತಯಾರಿಕೆಯಲ್ಲಿ ಯಾವುದೇ ರಾಸಾಯನಿಕ ವಸ್ತು ಬಳಕೆ ಮಾಡದೇ ಉತ್ತಮ ಗುಣಮಟ್ಟದ ಬೆಲ್ಲ ತಯಾರಿಸುವಂತೆ ಗಾಣದ ಮಾಲೀಕರಿಗೆ ಸೂಚನೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ