ಚುನಾವಣೆ ಸಲುವಾಗಿ ರೈತರನ್ನು ತಮ್ಮತ್ತ ಸೆಳೆಯುವ ಯತ್ನ: ಬಿ.ನಾರಾಯಣಪ್ಪ
ಶಾಸಕ ಗಣೇಶ್ ಸ್ವಾರ್ಥ ಕೆಲಸ ಬಿಟ್ಟು ರೈತಪರ ಕಾಳಜಿ ವಹಿಸಲಿ: ನಾರಾಯಣಪ್ಪ
Team Udayavani, Nov 26, 2022, 1:17 PM IST
ಕುರುಗೋಡು: ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ಅವರಿಗೆ ರೈತಪರ ಕಾಳಜಿ ಇಲ್ಲ. ಬದಲಾಗಿ ತಮ್ಮ ಸ್ವಾರ್ಥಕ್ಕಾಗಿ ರೈತರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ರಾಮಸಾಗರ ಬಿ.ನಾರಾಯಣಪ್ಪ ಆರೋಪಿಸಿದರು.
ಸಮೀಪದ ಎಮ್ಮಿಗನೂರು ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕ್ಷೇತ್ರದ ರೈತರು ಪ್ರಮುಖವಾಗಿ ಬೆಳೆದಂತಹ ಭತ್ತ ಹಾಗೂ ಇತರ ಬೆಳೆಗಳಿಗೆ ಸರಕಾರ ಬೆಂಬಲ ಬೆಲೆ ನೀಡಿಲ್ಲ. ಅಲ್ಲದೆ, ಖರೀದಿ ಕೇಂದ್ರಗಳನ್ನು ಆರಂಭಿಸಿಲ್ಲ. ಈ ಕುರಿತು ಶಾಸಕರು ದ್ವನಿ ಎತ್ತದೆ ಮೌನವಾಗಿದ್ದಾರೆ ಎಂದು ಹೇಳಿದರು.
ಕ್ಷೇತ್ರದ ಗ್ರಾಮಗಳಲ್ಲಿನ ಮಾಗಣಿ ರಸ್ತೆಗಳು ಹಾಳಾಗಿ ರೈತರಿಗೆ ತುಂಬಾ ಸಮಸ್ಯೆಯಾಗಿದೆ. ತುಂಗಭದ್ರಾ ನದಿ ನೀರು ಹರಿಸುವುದು ವಿಶೇಷವೇನಲ್ಲ. ಈ ಹಿಂದೆ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಂಪ್ಲಿಯಿಂದ ಕುರುಗೋಡು ಮಾರ್ಗವಾಗಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಯವರೆಗೆ 2 ದಿನಗಳ ಕಾಲ ಪಾದಯಾತ್ರೆ ನಡೆಸಲಾಗಿತ್ತು. ಅಂದು ರೈತರ ಹೋರಾಟದೊಂದಿಗೆ ಭಾಗಿಯಾಗಿ ರೈತರ ಪರ ನಿಲ್ಲದ ಶಾಸಕರು ಇಂದು ತಮ್ಮ ಚುನಾವಣಾ ಲಾಭಕ್ಕಾಗಿ ಸಭೆ, ನಾನಾ ಸಮಾರಂಭಗಳ ಹೆಸರಲ್ಲಿ ಇಲ್ಲಸಲ್ಲದ ಆಶ್ವಾಸನೆ ನೀಡುತ್ತಾ ರೈತರನ್ನು ತಮ್ಮತ್ತ ಸೆಳೆಯುವಂತಹ ಯತ್ನ ಮಾಡುತ್ತಿದ್ದಾರೆ ಎಂದರು.
ಈ ಎಲ್ಲ ಬೆಳವಣಿಗೆಗಳನ್ನು ಕ್ಷೇತ್ರದ ರೈತರು ಗಮನಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಶಾಸಕರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ