
52 ನಿವೇಶನಗಳ ಬಹಿರಂಗ ಹರಾಜು 11ಕ್ಕೆ
Team Udayavani, Dec 24, 2020, 4:26 PM IST

ಬಳ್ಳಾರಿ: ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ವ್ಯಾಪ್ತಿಯ 52 ನಿವೇಶನಗಳನ್ನು ಜ.11 ರಂದು ಬಹಿರಂಗ ಹರಾಜು ಮಾಡಲು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಹೇಳಿದರು.
ಬುಧವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ವಿವಿಧ ಬಡಾವಣೆಗಳಲ್ಲಿ ಲಭ್ಯವಿರುವ 52 ವಾಸ ಯೋಗ್ಯ ಮೂಲೆ, ಬಿಡಿ ನಿವೇಶನಗಳು, ವರ್ಕ್ ಶಾಪ್ ವಾಣಿಜ್ಯ ನಿವೇಶನಗಳು ಹಾಗೂ ಖಾಲಿ ಜಾಗಗಳು ಬಹಿರಂಗ ಹರಾಜಿನ ಮೂಲಕ ಸಾರ್ವಜನಿಕರಿಗೆ ಹಂಚಿಕೆ ಮಾಡಲು ಅನುಮೋದಿಸಲಾಯಿತು.
ನಗರದ ರಾಘವೇಂದ್ರ ಕಾಲೋನಿ 2ನೇ ಹಂತದ 26 ವಾಸ ಯೋಗ್ಯ ನಿವೇಶನಗಳು, ಶ್ರೀಕನಕದುರ್ಗಮ್ಮ ಬಡಾವಣೆಯಲ್ಲಿರುವ 1 ವಾಸ ಯೋಗ್ಯ ನಿವೇಶನ, ಅಟಲ್ ಬಿಹಾರಿ ವಾಜಪೇಯಿಬಡಾವಣೆಯಲ್ಲಿ 7 ವಾಸ ಯೋಗ್ಯ ನಿವೇಶನಗಳು ಹಾಗೂ ವಾಣಿಜ್ಯ ನಿವೇಶನ 1, ಡಾ| ಸರ್| ಎಂ.ವಿ. ಲಾರಿ ತಂಗುದಾಣ ವರ್ಕ್ಶಾಪ್ ವಾಣಿಜ್ಯ ನಿವೇಶನಗಳು 11, ಕುವೆಂಪು ನಗರದಲ್ಲಿ 3 ವಾಸ ಯೋಗ್ಯ ನಿವೇಶನಗಳು, ಲಾಲ್ ಬಹದ್ದೂರ್ ಶಾಸ್ರ್ತಿ ವಾಣಿಜ್ಯ ಸಂಕೀರ್ಣದಲ್ಲಿ 3 ಖಾಲಿ ಜಾಗಗಳನ್ನು ಜ.11 ರಂದು ಹರಾಜು ಮೂಲಕ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.
ಬಿ.ಗೋನಾಳ್ ಗ್ರಾಮದಲ್ಲಿ ಪ್ರಾಧಿಕಾರ ಮತ್ತು ರೈತರ ಸಹಭಾಗಿತ್ವದಲ್ಲಿ 101.98 ಎಕರೆ ಜಮೀನಿನಲ್ಲಿ50:50 ಅನುಪಾತದಂತೆ, ಪ್ರಾಧಿಕಾರ ಮತ್ತುಖಾಸಗಿ ಸಹಭಾಗಿತ್ವದಲ್ಲಿ ವಸತಿ ಬಡಾವಣೆಯನ್ನುನಿರ್ಮಿಸಲು ಇ-ಟೆಂಡರ್ ಪ್ರಾಕ್ಯೂಮೆಂಟ್ಮುಖಾಂತರ ಟೆಂಡರ್ ಆಹ್ವಾನಿಸುವ ಕುರಿತುಸಭೆಯಲ್ಲಿ ಅನುಮೋದಿಸಲಾಯಿತು. ಶೀಘ್ರವೇ ಇ-ಪ್ರಾಕ್ಯೂರ್ವೆುಂಟ್ ಮೂಲಕಟೆಂಡರ್ ಆಹ್ವಾನಿಸಲಾಗುತ್ತದೆ ಎಂದ ಅವರು,ಪ್ರಾಧಿಕಾರದ ವ್ಯಾಪ್ತಿಯಲ್ಲಿ 20 ಜಾಹೀರಾತುಫಲಕಗಳಿಗೆ ಪ್ರತಿಯೊಂದಕ್ಕೆ 10 ಲಕ್ಷ ರೂ. ವಿಧಿಸುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಯಿತು.
ಕೈಗಾರಿಕೆ ಬಹುನಿವೇಶನ ವಿನ್ಯಾಸ ನಕ್ಷೆ ಅನುಮೋದನೆ, ಖಾಸಗಿ ವಸತಿ ವಿನ್ಯಾಸ ನಕ್ಷೆ ಅನುಮೋದನೆ ನೀಡಲು, ಜಮೀನುಗಳಿಗೆಭೂ-ಉಪಯೋಗ ಬದಲಾವಣೆಗೆ ಅನುಮೋದನೆನೀಡುವ ಬಗ್ಗೆ, ವಸತಿ ವಿನ್ಯಾಸ ನಕ್ಷೆ ಮಂಜೂರಾತಿ ಕೋರಿರುವ ಅರ್ಜಿಗಳು, ಏಕ ನಿವೇಶನ ವಸತಿ ವಿನ್ಯಾಸ ಕೋರಿ ಮನವಿ, ಏಕ ನಿವೇಶನ ವಾಣಿಜ್ಯ ವಿನ್ಯಾಸ ನಕ್ಷೆ ಮಂಜೂರು ಕೋರಿರುವ ಅರ್ಜಿಗಳಿಗೆಅನುಮೋದನೆ ನೀಡುವ ಬಗ್ಗೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ,ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ವೀರೇಂದ್ರ ಕುಂದಗೋಳ, ಪ್ರಾಧಿಕಾರದಕಾರ್ಯಪಾಲಕ ಅಭಿಯಂತರ ರವಿಶಂಕರ್ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಹಾಗೂ ಕಾರ್ಯನಿರ್ವಾಹಕ ಅಭಿಯಂತರರು ಇದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari; ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಸ್ವಚ್ಛ ಬಳ್ಳಾರಿ ಸ್ವಸ್ಥ ಬಳ್ಳಾರಿ ಕಾರ್ಯಕ್ರಮ

Kurugodu; ಹೊಲಕ್ಕೆ ನೀರು ಹರಿಸುವಾಗ ಹಾವು ಕಡಿದು ರೈತ ಮೃತ್ಯು

Kotturu: ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಶಾಂತಿ ಸಭೆ

Ballari; ಯಾರಿಗೂ ಹೆದರಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳುತ್ತಿಲ್ಲ: ಸೋಮಶೇಖರ್ ರೆಡ್ಡಿ

JDS ಜೊತೆ ಹೊಂದಾಣಿಕೆ ಕೇಂದ್ರಕ್ಕೆ ಬಿಟ್ಟದ್ದು: ಶಾಸಕ ಯತ್ನಾಳ್
MUST WATCH
ಹೊಸ ಸೇರ್ಪಡೆ

Nuclear Submarin:ಹಳದಿ ಸಮುದ್ರದಲ್ಲಿ ಚೀನಾ ಪರಮಾಣು ಜಲಾಂತರ್ಗಾಮಿ ದುರಂತ; 55 ನಾವಿಕರ ಸಾವು

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್ ಸಿಂಹ ವಾಗ್ದಾಳಿ

Udupi: ಆಭರಣ ಜ್ಯುವೆಲ್ಲರ್ಸ್ ಮಾಲಕ ಮಧುಕರ್ ಕಾಮತ್ ಪತ್ನಿ ರಾಧಾ ಕಾಮತ್ ನಿಧನ

Belagavi: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ