
ಬಳ್ಳಾರಿ: ಕೃಷಿ ಕಾರ್ಮಿಕರಿದ್ದ ಆಟೋ ಕಾಲುವೆಗೆ ಪಲ್ಟಿ; ಮೂವರು ಸಾವು, ಮೂವರು ನಾಪತ್ತೆ
Team Udayavani, Sep 14, 2022, 11:56 AM IST

ಬಳ್ಳಾರಿ: ಕೃಷಿ ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಅಪೆ ಆಟೋವೊಂದು ತಾಲೂಕಿನ ಕೊಳಗಲ್ಲು ಗ್ರಾಮ ಬಳಿಯ ಹೆಚ್.ಎಲ್.ಸಿ. ಕಾಲುವೆಯಲ್ಲಿ ಬಿದ್ದಿದ್ದು, ಮೂವರು ಮೃತಪಟ್ಟಿದ್ದು, ನಾಲ್ವರು ಸುರಕ್ಷಿತವಾಗಿ, ಇನ್ನು ಮೂವರು ನಾಪತ್ತೆಯಾಗಿರುವ ಘಟನೆ ಬುಧವಾರ ನಡೆದಿದೆ.
ಎಲ್ಲರೂ ತಾಲೂಕಿನ ಕೊಳಗಲ್ಲು ಗ್ರಾಮದ ನಿವಾಸಿಗಳಾಗಿದ್ದಾರೆ.
ಕೊಳಗಲ್ಲು ಗ್ರಾಮದ ನಿಂಗಮ್ಮ, ದುರುಗಮ್ಮ, ಪುಷ್ಪಾವತಿ ದುರ್ಮರಣಕ್ಕೀಡಾದ ದುರ್ಧೈವಿಗಳು. ಬುಧವಾರ ಬೆಳಗ್ಗೆ ಎಂದಿನಂತೆ ಕೃಷಿ ಕೆಲಸಕ್ಕೆಂದು ಎಂದಿನಂತೆ ಅಪೆ ಆಟೋದಲ್ಲಿ ನಿಂಗಮ್ಮ, ದುರುಗಮ್ಮ, ಪುಷ್ಪಾವತಿ, ಕುಡತಿನಿ ಹುಲಿಗೆಮ್ಮ, ಲಕ್ಷ್ಮಿ, ನಾಗರತ್ನಮ್ಮ, ಈಡಿಗರ ಭೀಮ, ದಮ್ಮೂರಿ ಎರ್ರಮ್ಮ, ಹೇಮಾವತಿ, ಶಿಲ್ಪಾ, ಮಹೇಶ್ ಒಟ್ಟು ಹತ್ತು ಜನರು ಹೋಗಿದ್ದಾರೆ. ಪಕ್ಕದ ತುಂಗಭದ್ರಾ ಜಲಾಶಯದ ಬಲದಂಡೆ ಮೇಲ್ಮಟ್ಟದ (ಹರಚ್.ಎಲ್.ಸಿ.) ಕಾಲುವೆ ಮೇಲೆ ಆಟೋ ಸಂಚರಿಸುತ್ತಿದ್ದಾಗ ಮುಂದಿನ ಚಕ್ರಕ್ಕೆ ಕಲ್ಕು ತಗುಲಿ ಆಯ ತಪ್ಪಿ ಆಟೋ ಕಾಲುವೆಗೆ ಉರುಳಿದೆ.
ಇದನ್ನೂ ಓದಿ: ವಿಟ್ಲಪಡ್ನೂರು : ಜಾಗದ ವಿಚಾರದಲ್ಲಿ ಜಗಳ, ಸಹೋದರನ ಕೊಲೆಯಲ್ಲಿ ಅಂತ್ಯ
ಘಟನೆಯಲ್ಲಿ ನಿಂಗಮ್ಮ, ದುರುಗಮ್ಮ, ಪುಷ್ಪಾವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಡತಿನಿ ವೀರೇಶ್, ಹುಲಿಗೆಮ್ಮ, ನಾಗರತ್ನಮ್ಮ, ಮೂವರು ನಾಪತ್ತೆಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಈಡಿಗರ ಭೀಮ, ದಮ್ಮೂರು ಎರ್ರೆಮ್ಮ, ಹೇಮಾವತಿ, ಶಿಲ್ಪಾ, ಮಹೇಶ್ ಈ ಐವರು ಈಜಿ ದಡ ಸೇರಿ ಜೀವಂತವಾಗಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ನಾಪತ್ತೆಯಾದವರ ಶೋಧ ಮಾಡುತ್ತಿದ್ದಾರೆ.
ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಮಂಜುನಾಥ್, ಎಸ್ ಪಿ ಸೈದುಲು ಅಡಾವತ್, ಮೇಯರ್ ರಾಜೇಶ್ವರಿ ಸುಬ್ಬರಾಯುಡು ಸೇರಿ ಹಲವು ಜನಪ್ರತಿನಿಧಿಗಳು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರಿಗೆ ಜಿಲ್ಲಾ ಉಸ್ತುವಾರಿ ಸಚಿವ, ಶ್ರೀರಾಮಲು ಸಂತಾಪ ಸೂಚಿಸಿದ್ದು,ಮೃತರ ಕುಟುಂಬದವರೊಂದಿಗೆ ಮಾತಾನಾಡಿ, ಧೈರ್ಯ ತುಂಬಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಡಿಕೆಶಿ, ಯುವತಿ ಸೇರಿ ಸಿಡಿ ಗ್ಯಾಂಗ್ ಬಂಧಿಸಲು ರಮೇಶ ಜಾರಕಿಹೊಳಿ ಒತ್ತಾಯ

ಗಾಂಧಿ ಮಾರ್ಗದಲ್ಲಿ ನಡೆಯುವ ಸಂಕಲ್ಪವನ್ನು ಮಾಡಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಹವಾಮಾನ ವೈಪರೀತ್ಯದಿಂದ ವಿಮಾನ ಹಾರಾಟ ರದ್ದು: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ಹೈದರಾಬಾದ್: ಖ್ಯಾತ ಕವಿ, ವಿಮರ್ಶಕ, ಕತೆಗಾರ ಕೆ.ವಿ.ತಿರುಮಲೇಶ್ ವಿಧಿವಶ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ

ಬಿಆರ್ಟಿಗೂ, ಅರಸರಿಗೂ ಅವಿನಾಭವ ಸಂಬಂಧ

ದ್ವಿಚಕ್ರ ವಾಹನ ಕಳ್ಳರ ಬಂಧನ: 12 ಬೈಕ್ ಪೊಲೀಸರ ವಶಕ್ಕೆ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ