ಮೇ 7-8ರಂದು ರಂಗ ಸಾಧಕರಿಗೆ ಪ್ರಶಸ್ತಿ

ಪ್ರದಾನ ಕರ್ನಾಟಕ ನಾಟಕ ಅಕಾಡೆಮಿ ವತಿಯಿಂದ ಪ್ರದಾನ: ಪ್ರೊ| ಆರ್‌. ಭೀಮಸೇನ

Team Udayavani, Apr 16, 2022, 12:33 PM IST

drama

ಬಳ್ಳಾರಿ: ಕರ್ನಾಟಕ ನಾಟಕ ಅಕಾಡೆಮಿ ವತಿಯಿಂದ ಮೇ 7,8 ರಂದು ಎರಡು ದಿನಗಳ ಕಾಲ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, 2021ನೇ ಸಾಲಿಗೆ ಅಕಾಡೆಮಿಯಿಂದ ನೀಡಲಾಗುವ ಜೀವಮಾನ ರಂಗಸಾಧನೆ ಪ್ರಶಸ್ತಿ, ವಾರ್ಷಿಕ ಪ್ರಶಸ್ತಿ, ದತ್ತಿ ಪುರಸ್ಕಾರ, ವಾರ್ಷಿಕ ಬಹುಮಾನ ಸೇರಿ ಎಲ್ಲ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷ ಪ್ರೊ| ಆರ್‌. ಭೀಮಸೇನ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 25 ವರ್ಷಗಳ ಬಳಿಕ ಬಳ್ಳಾರಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಹರ್ನಿಶಿ ಶ್ರಮಿಸುತ್ತಿರುವ ವೃತ್ತಿ, ಹವ್ಯಾಸಿ, ಗ್ರಾಮೀಣ ರಂಗಭೂಮಿಯ ನಟ, ನಟಿ, ನರ್ದೇಶಕ, ಸಂಗೀತ ಮೇಷ್ಟ್ರು, ನಾಟಕಕಾರ, ಮೇಕಪ್‌ ಮುಂತಾದ ನೇಪಥ್ಯ ಕಲಾವಿದ ಹಾಗೂ ಸಂಘಟಕರನ್ನು ಈ ಪ್ರಶಸ್ತಿಗಳಿಗೆ ಪರಿಗಣಿಸಲಾಗುತ್ತದೆ. ಪುರುಷ ಕಲಾವಿದರಿಗೆ 60 ವರ್ಷ ವಯಸ್ಸು, ಕನಿಷ್ಟ 25 ವರ್ಷ ರಂಗ ಸಾಧನೆ ಮತ್ತು ಮಹಿಳಾ ಕಲಾವಿದರಿಗೆ 55 ವರ್ಷ ವಯಸ್ಸು ಕನಿಷ್ಟ 20ವರ್ಷಗಳ ರಂಗಸಾಧನೆಯ ಹಿರಿಯ ಕಲಾವಿದರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ರಾಜ್ಯದ ಗಡಿನಾಡಿನಲ್ಲಿ ರಂಗಕಲೆಯೇ ಬದುಕಾಗಿರುವ ಕಲಾವಿದರನ್ನು ಮತ್ತು ರಂಗಭೂಮಿಯಲ್ಲಿ ನಿರಂತರ ಚಟುವಟಿಕೆಯಲ್ಲಿರುವ ರಂಗಸಂಸ್ಥೆಯನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ ಎಂದವರು ವಿವರಿಸಿದರು. ‘ಯುವರಂಗ’ ಕಳೆದ 2021ನೇ ಸಾಲಿಗೆ ರಂಗಶಾಲೆಗಳಿಂದ ಪದವೀಧರರಾಗಿ ರಂಗಭೂಮಿಯಲ್ಲಿ ಗಮನಾರ್ಹ ಸಾಧನೆ ಮಾಡುತ್ತಿರುವ 40 ವರ್ಷ ಮೀರದ ಯುವ ರಂಗನಿರ್ದೇಶಕ, ನಿರ್ದೇಶಕಿಯನ್ನು ಪ್ರಥಮ ಬಾರಿಗೆ ಯುವರಂಗ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದರು.

ದತ್ತಿ ಪುರಸ್ಕಾರ ನಿಧಿ ಹೆಚ್ಚಳ

ಕಳೆದ 2020ನೇ ಸಾಲಿಗೆ ನಾಡಿನ ಖ್ಯಾತ ಹಿರಿಯ ರಂಗ ಕಲಾವಿದೆ ‘ಮಾಲತಿಶ್ರೀ ಮೈಸೂರು’ ಅವರ ದತ್ತಿ ನಿಧಿ ಪುರಸ್ಕಾರ ಆರಂಭಗೊಂಡು ಇದುವರೆಗೂ ಪ್ರಶಸ್ತಿ ಜೊತೆಗೆ 5 ಸಾವಿರ ಗೌರವಧನ ನೀಡಲಾಗುತ್ತಿತ್ತು. 2021ನೇ ಸಾಲಿನ ದತ್ತಿ ನಿಧಿ ಪುರಸ್ಕಾರದ ಗೌರವಧನವನ್ನು ಪ್ರಶಸ್ತಿ ಜೊತೆಗೆ 10ಸಾವಿರ ರೂಗೆ ಹೆಚ್ಚಿಸಿ ನೀಡಲಾಗುತ್ತಿದೆ. ಮಹಿಳಾ ಪ್ರಾತಿನಿಧ್ಯ, ಸಾಮಾಜಿಕ ಹಾಗೂ ಪ್ರಾದೇಶಿಕ ನ್ಯಾಯಗಳನ್ನು ಗಮನದಲ್ಲಿಟ್ಟುಕೊಂಡು ಅಕಾಡೆಮಿಯ ಒಂದು ಜೀವಮಾನ ರಂಗಸಾಧನೆ ಪ್ರಶಸ್ತಿ, ಒಂದು ಯುವರಂಗ ಪ್ರಶಸ್ತಿ, ಗಡಿನಾಡು ಪ್ರಶಸ್ತಿ ಸೇರಿದಂತೆ ಒಟ್ಟು 25 ವಾರ್ಷಿಕ ರಂಗ ಪ್ರಶಸ್ತಿ ಮತ್ತು ಒಂದು ರಂಗಸಂಸ್ಥೆ ಸೇರಿದಂತೆ ಒಟ್ಟು 5 ದತ್ತಿ ನಿಧಿ ಪುರಸ್ಕಾರಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ಪ್ರಶಸ್ತಿ ಪ್ರದಾನ ಸಮಾರಂಭ

ಬಳ್ಳಾರಿಯಲ್ಲಿ ಮೇ 7, 8 ರಂದು ಎರಡು ದಿನಗಳ ಕಾಲ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಮೇ 7ರಂದು ಶನಿವಾರ ಪ್ರಶಸ್ತಿ ಪುರಸ್ಕೃತರು ಆಗಮಿಸಲಿದ್ದು ಅಂದು ಸಂಜೆ 4 ಗಂಟೆಗೆ ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸುವ ಅದ್ಧೂರಿ ರಂಗ ಶೋಭಾಯಾತ್ರೆ ನಡೆಯಲಿದೆ. ಪೌರಾಣಿಕ ನಾಟಕ ಪ್ರದರ್ಶನಗೊಳ್ಳಲಿದೆ. ಮರುದಿನ ಮೇ 8 ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅಕಾಡೆಮಿ ಸದಸ್ಯ ಪ್ರಭುದೇವ ಕಪ್ಪಗಲ್ಲು, ಶಿವೇಶ್ವರಗೌಡ ಇತರರು ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.