ಕಾರಂತ ಸಾಹಿತ್ಯ ರತ್ನ ಪುಸ್ತಕ ಪ್ರಶಸ್ತಿ ಪ್ರದಾನ

ಕೇವಲ ಪ್ರಶಸ್ತಿ, ಸನ್ಮಾನಕ್ಕಾಗಿ ಯಾರು ಕೆಲಸ ಮಾಡಬಾರದು.

Team Udayavani, Aug 9, 2022, 5:45 PM IST

ಕಾರಂತ ಸಾಹಿತ್ಯ ರತ್ನ ಪುಸ್ತಕ ಪ್ರಶಸ್ತಿ ಪ್ರದಾನ

ಸಿರುಗುಪ್ಪ: ಇಂದು ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದವರಿಗೆ ಪ್ರಶಸ್ತಿಗಳು ಬರುತ್ತಿಲ್ಲ. ಆದರೆ ಯಾವುದೇ ಸಾಧನೆ ಮಾಡದೆ ಇರುವವರಿಗೆ ಪ್ರಶಸ್ತಿಗಳು ಬರುತ್ತಿರುವುದು ಪ್ರಶಸ್ತಿಗಳ ಮೌಲ್ಯ ಕಡಿಮೆಯಾಗುತ್ತಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ನಿಷ್ಠಿ ರುದ್ರಪ್ಪ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ಕಾರಂತ ರಂಗಲೋಕ ಕಲಾತ್ಮಕ ಮನಸ್ಸುಗಳ ತಾಣ ಬೈರಗಾಮದಿನ್ನೆ ಸಂಸ್ಥೆಯು ಹಮ್ಮಿಕೊಂಡಿದ್ದ “ಕಾರಂತ ಸಾಹಿತ್ಯ ರತ್ನ -2022′ ರಾಜ್ಯಮಟ್ಟದ ಪುಸ್ತಕ ಪ್ರಶಸ್ತಿ ಹಾಗೂ ಆರ್‌.ಪಿ. ಮಂಜುನಾಥ್‌ ರಚಿಸಿದ “ಪ್ರೀತಿ ಜೋಳಿಗೆ ಫಕೀರ’ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅರ್ಹರಿಗೆ ಪ್ರಶಸ್ತಿಗಳನ್ನು ಕೊಟ್ಟರೆ ಪ್ರಶಸ್ತಿ ಗೌರವ ಕೂಡ ಹೆಚ್ಚಾಗುತ್ತದೆ. ಇಂದು ಶಿಫಾರಸ್ಸುಗಳ ಮೇಲೆ ಅರ್ಹರಲ್ಲದವರಿಗೆ ಪ್ರಶಸ್ತಿಯನ್ನು ನೀಡುತ್ತಿರುವುದು ಪ್ರಶಸ್ತಿ ಮೌಲ್ಯವೇ ಕಡಿಮೆಯಾಗಿದ್ದು, ಪ್ರಶಸ್ತಿಗೆ ಅರ್ಹರಾದವರು ತಮಗೆ ಪ್ರಶಸ್ತಿ ಬೇಡ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿರುವುದು ದುರಂತವೇ ಸರಿ.

ತಾಲೂಕಿನ ಬೈರಗಾಮದಿನ್ನೆ ಗ್ರಾಮದ ಕಾರಂತ ರಂಗಲೋಕ ಕಲಾತ್ಮಕ ಮನಸ್ಸುಗಳ ತಾಣ ಸಂಸ್ಥೆಯು ತುಂಬಾ ಪಾರದರ್ಶಕ ಮತ್ತು ಉತ್ಕೃಷ್ಟ ಗುಣಮಟ್ಟದ ಅರ್ಹರನ್ನು ಗುರುತಿಸಿ “ಕಾರಂತ ಸಾಹಿತ್ಯ ರತ್ನ’ ರಾಜ್ಯಮಟ್ಟದ ಪುಸ್ತಕ ಪ್ರಶಸ್ತಿ ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ ಎಂದು ಹೇಳಿದರು.

ನಾಡೋಜ ಬೆಳಗಲ್ಲು ವೀರಣ್ಣ ಮಾತನಾಡಿ, ಕಲೆ ಮತ್ತು ಜ್ಞಾನ ಯಾರಪ್ಪನ್ನ ಸ್ವತ್ತಲ್ಲ. ಅದು ಶ್ರಮಜೀವಿಗಳ ಸಂಪತ್ತು. ಹಾಗಾಗಿ ತಾಳ್ಮೆ ಮತ್ತು ಶ್ರಮವಹಿಸಿ ತಮ್ಮ ಕ್ಷೇತ್ರದಲ್ಲಿ ದುಡಿದವರಿಗೆ ಇಂದಲ್ಲ ನಾಳೆ ಪ್ರತಿಫಲ ದೊರೆಯುತ್ತದೆ. ಕೇವಲ ಪ್ರಶಸ್ತಿ, ಸನ್ಮಾನಕ್ಕಾಗಿ ಯಾರು ಕೆಲಸ ಮಾಡಬಾರದು. ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಪ್ರಶಸ್ತಿ ತಾನಾಗಿಯೇ ಒಲಿದು ಬರುತ್ತದೆ ಎಂದು ಹೇಳಿದರು.

ಸಂಸ್ಥೆ ಕಾರ್ಯದರ್ಶಿ ಆರ್‌.ಪಿ.ಮಂಜುನಾಥ್‌ ಮಾತನಾಡಿದರು. ಕಾರಂತ ರತ್ನ ರಾಜ್ಯಮಟ್ಟದ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾದ ಲೇಖಕರಾದ ಡಾ| ಶೋಭಾ ನಾಯಕ್‌, ಅಕರ್‌ ಸಿ  ಕಾಲಿಮಿರ್ಚಿ, ಪ್ರೊ| ಎಚ್‌.ಟಿ. ಪೋತೆ, ಧಿಧೀರೇಂದ್ರ ನಾಗರಹಳ್ಳಿ, ರಾಮಣ್ಣ ತಟ್ಟಿ, ವಿದ್ಯಾರೆಡ್ಡಿ, ಕೆ.ಪಿ. ಮಂಜುನಾಥ ರೆಡ್ಡಿ, ಡಾ| ಕೆ. ಶ್ರೀಪತಿ ಹಳಗುಂದ, ಡಾ| ಎಂ. ಚಂದ್ರಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿ ಗೌರವಿಸಲಾಯಿತು.

ಕಲಾವಿದೆ ಉಷಾರಾಣಿ ರಂಗ ಗೀತೆ ಗಾಯನ ನಡೆಸಿಕೊಟ್ಟರು. ಪುಸ್ತಕ ಪ್ರಶಸ್ತಿ ಆಯ್ಕೆ ಸಮಿತಿ ತೀರ್ಪುಗಾರರಾದ ಡಾ| ಕೆ. ಶಿವಲಿಂಗಪ್ಪ ಹಂದಿಹಾಳು, ನಾಡೋಜ ಬೆಳಗಲ್ಲು ವೀರಣ್ಣ, ಡಾ| ಶಿವಕುಮಾರ ತಾತಾ, ಕಸಾಪ ಜಿಲ್ಲಾಧ್ಯಕ್ಷ ಡಾ| ನಿಷ್ಠಿ ರುದ್ರಪ್ಪ ಮತ್ತು ಸಾರ್ವಜನಿಕರು ಇದ್ದರು.

ಟಾಪ್ ನ್ಯೂಸ್

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.