ಡೆಂಘೀ ತಡೆಗೆ ಸಹಭಾಗಿತ್ವ ಅಗತ್ಯ
ಡೆಂಘೀ ಮಹಾಮಾರಿ ಕುರಿತ ಜಾಗೃತಿ ಜಾಥಾಕ್ಕೆ ಚಾಲನೆ
Team Udayavani, May 17, 2022, 12:15 PM IST
ಬಳ್ಳಾರಿ: ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ರಾಷ್ಟ್ರೀಯ ಡೆಂಘೀ ದಿನಾಚರಣೆ ನಿಮಿತ್ತ ಏರ್ಪಡಿಸಿದ್ದ ಡೆಂಘೀ ಮಹಾಮಾರಿಯ ಕುರಿತ ಜಾಗೃತಿ ಜಾಥಾಕ್ಕೆ ಸೋಮವಾರ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಇಲಾಖೆ, ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾ ಕಚೇರಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆ ಸಹಯೋಗದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾವನ್ನು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಎನ್.ಬಸರೆಡ್ಡಿ ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಮುಂಬರುವ ಮಳೆಗಾಲ ಹಾಗೂ ನಂತರದ ದಿನಗಳಲ್ಲಿ ಡೆಂಘೀ ಜ್ವರವು ಹೆಚ್ಚಾಗಿ ಹರಡುವ ಸಂಭವಿರುವುದರಿಂದ ಸಮುದಾಯದ ಸಹಕಾರವನ್ನು ಪಡೆಯುವ ನಿಟ್ಟಿನಲ್ಲಿ ರಾಷ್ಟ್ರೀಯ ಡೆಂಘೀ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಡೆಂಘೀ ತಡೆಗಟ್ಟಬಹುದು-ಬನ್ನಿ ಎಲ್ಲರೂ ಕೈಜೋಡಿಸೋಣ ಎಂದು ಕರೆ ನೀಡಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾ ಧಿಕಾರಿ ಡಾ|ಆರ್. ಅಬ್ದುಲ್ಲಾ ಮಾತನಾಡಿ, ಡೆಂಘೀ ನಿಯಂತ್ರಣದಲ್ಲಿ ಸಮುದಾಯದ ಪಾತ್ರ ಪ್ರಮುಖವಾಗಿದ್ದು, ಡೆಂಘೀ ಜ್ವರವು ಈಡೀಸ್ ಈಜಿಫ್ಟಿ ಸೊಳ್ಳೆಯಿಂದ ಒಬ್ಬರಿಂದ ಒಬ್ಬರಿಗೆ ಕಚ್ಚುವುದರಿಂದ ಹರಡುತ್ತದೆ. ಈ ಸೊಳ್ಳೆಯು ಸ್ವಚ್ಛ ನೀರಿನಲ್ಲಿ ಬೆಳೆದು ತನ್ನ ಸಂತಾನ ಅಭಿವೃದ್ಧಿ ಮಾಡುತ್ತದೆ. ಡೆಂಘೀ ಜ್ವರದ ಲಕ್ಷಣಗಳಾದ ಮೂರಕ್ಕಿಂತ ಹೆಚ್ಚು ದಿನಗಳಿಂದ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಂಡಲ್ಲಿ ತಕ್ಷಣವೇ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು ಹಾಗೂ ಎಲ್ಲ ಸೇವೆಗಳು ಉಚಿತವಾಗಿರುತ್ತದೆ ಎಂದು ತಿಳಿಸಿದರು.
ಜಾಗೃತಿ ಜಾಥಾವು ನಗರದ ವಿವಿಧ ಪ್ರದೇಶಗಳಲ್ಲಿ ಮೈಕ್ ಮೂಲಕ ಹಾಗೂ ಜಾಗೃತಿ ಘೋಷಣೆಗಳನ್ನು ಕೂಗುವ ಮೂಲಕ ಮತ್ತು ಸೊಳ್ಳೆ ಮರಿಗಳನ್ನು ಸಾರ್ವಜನಿಕರಿಗೆ ತೋರಿಸಿ ಡೆಂಘೀ ಕುರಿತು ಆರೋಗ್ಯ ಜಾಗೃತಿಯನ್ನು ಮೂಡಿಸುತ್ತಾ ಸಂಚರಿಸಿತು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ| ಮೋಹನ್ಕುಮಾರಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಈಶ್ವರ ದಾಸಪ್ಪನವರ, ವಿಬಿಡಿಸಿ ಕನ್ಸಲ್ಟೆಂಟ್ ಗಳಾದ ಪ್ರತಾಪ್.ಹೆಚ್, ಹಿರಿಯ ಮತ್ತು ಕಿರಿಯ ಆರೋಗ್ಯ ಸಹಾಯಕರು, ಪ್ರಯೋಗಶಾಲಾ ತಂತ್ರಜ್ಞರು, ಶಾಂತಮ್ಮ, ಬಿಎಚ್ಇಓ, ತಾಲೂಕು ಆರೋಗ್ಯ ಸಿಬ್ಬಂದಿ, ಡಿವಿಬಿಡಿಸಿಪಿ ಕಚೇರಿಯ ಎಲ್ಲ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ