ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನ
Team Udayavani, Jun 16, 2022, 1:45 PM IST
ಬಳ್ಳಾರಿ: ತಾಲೂಕಿನ ಹಂದಿಹಾಳು ಗ್ರಾಮದಲ್ಲಿ ಜೂ.18 ರಂದುಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಗ್ರಾಮವಾಸ್ತವ್ಯನಡೆಸಲಿದ್ದು, ಗ್ರಾಮಸ್ಥರ ದೂರು-ದುಮ್ಮಾನ ಆಲಿಸಲಿದ್ದಾರೆ.ಇದಕ್ಕಾಗಿ ಎಲ್ಲ ಸಿದ್ಧತೆಗಳು ಗ್ರಾಮದಲ್ಲಿ ಭರದಿಂದ ಸಾಗಿವೆ.ಜಿಲ್ಲಾಧಿಕಾರಿಗಳಿಗೆ ವಿವಿಧ ಇಲಾಖೆಗಳ ಅಧಿಕಾರಿಗಳುಸಾಥ್ ನೀಡಲಿದ್ದಾರೆ ಎಂದು ಎಡಿಸಿ ಪಿ.ಎಸ್. ಮಂಜುನಾಥಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ ಅನೇಕ ಸಮಸ್ಯೆಗಳಿಗೆಪರಿಹಾರ ಕಲ್ಪಿಸಲಿದ್ದಾರೆ ಮತ್ತು ಉಳಿದ ಸಮಸ್ಯೆಗಳಿಗೆಕಾಲಮಿತಿಯಲ್ಲಿ ಪರಿಹರಿಸಲು ಅಧಿಕಾರಿಗಳಿಗೆ ನಿರ್ದೇಶನನೀಡಲಿದ್ದಾರೆ.ಜಿಲ್ಲಾಧಿಕಾರಿಗಳು ಹಂದಿಹಾಳು ಗ್ರಾಮದಲ್ಲಿ ಗ್ರಾಮವಾಸ್ತವ್ಯನಡೆಸಲಿದ್ದು, ಅಪರ ಜಿಲ್ಲಾಧಿಕಾರಿಗಳು, ಸಹಾಯಕಆಯುಕ್ತರು, ಬಳ್ಳಾರಿ ತಹಶೀಲ್ದಾರರು ಹಾಗೂ ಜಿಲ್ಲಾಮಟ್ಟದಅಧಿಕಾರಿಗಳು ಇರಲಿದ್ದಾರೆ.
ತಾಲೂಕುಮಟ್ಟದಲ್ಲಿ ತಹಶೀಲ್ದಾರರು ಸಹ ಒಂದೊಂದುಊರುಗಳನ್ನು ಗುರುತಿಸಿ ಆ ಗ್ರಾಮಗಳಲ್ಲಿ ಗ್ರಾಮವಾಸ್ತವ್ಯನಡೆಸುವ ಮೂಲಕ ಜನರ ಸಮಸ್ಯೆಗಳಿಗೆ ದನಿಯಾಗುವಕೆಲಸ ಮಾಡಲಿದ್ದಾರೆ. ಈ ಗ್ರಾಮ ವಾಸ್ತವ್ಯದ ಮೂಲಕ ಜನರಮನೆಬಾಗಿಲಿಗೆ ಸರ್ಕಾರ ತೆರಳಿದಂತಾಗಲಿದೆ ಎಂದವರುಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ