ಪುನೀತ್‌ ಹೆಸರಲ್ಲಿ ಶಾಲೆ-ಆಸ್ಪತ್ರೆ


Team Udayavani, Nov 9, 2021, 7:45 PM IST

ballari news

ಬಳ್ಳಾರಿ: ಕನ್ನಡ ಚಿತ್ರರಂಗದ ಮೇರು ನಟ ಪುನೀತ್‌ ರಾಜ್‌ಕುಮಾರ್‌ ನಿಧನರಾದ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ ಮಾಜಿ ಸಚಿವಜಿ. ಜನಾರ್ಧನರೆಡ್ಡಿ, ಅವರ ಹೆಸರಲ್ಲಿ ಬಳ್ಳಾರಿಯಲ್ಲಿ ಬಡ ಮಕ್ಕಳಿಗಾಗಿ ಉಚಿತ ವಸತಿ ಶಾಲೆ ತೆರೆಯುವ,ಆಸ್ಪತ್ರೆ ಸ್ಥಾಪಿಸುವ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ನಗರ ಹೊರವಲಯದ ಬೆಳಗಲ್ಲು ರಸ್ತೆಯಲ್ಲಿನರುಕ್ಮಿಣಮ್ಮ ಚೆಂಗಾರೆಡ್ಡಿ ಸ್ಮಾರಕ ಮೆಮೋರಿಯಲ್‌ವಿಶ್ವಭಾರತಿ ಕಲಾನಿಕೇತನ ಬುದ್ಧಿಮಾಂದ್ಯ ಮಕ್ಕಳಶಾಲೆ ಆವರಣದಲ್ಲಿ ಸೋಮವಾರ ನಡೆದಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪತ್ನಿ ಲಕ್ಷ್ಮಿ ಅರುಣಾ,ನಗರ ಶಾಸಕ, ಸಹೋದರ ಜಿ.ಸೋಮೇಖರರೆಡ್ಡಿ ಅವರೊಂದಿಗೆ ಜನಾರ್ಧನರೆಡ್ಡಿ ಪುನೀತ್‌ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದರು.

ನಟ ಪುನೀತ್‌ ರಾಜ್‌ಕುಮಾರ್‌ ಅವರ ಬಗ್ಗೆಇಂತಹ ಕಾರ್ಯಕ್ರಮ ಮಾಡುವ ಸಂದರ್ಭಬರುತ್ತೆ ಎಂದು ಅಂದುಕೊಂಡಿರಲಿಲ್ಲ. ಪುನೀತ್‌ಅವರು ರಾಜ್ಯ ಕಂಡಿರುವ ಅಪೂರ್ವ ಕಲಾವಿದ.ಪಾಕಿಸ್ಥಾನದಲ್ಲೂ ಇಂಜಿನೀಯರ್‌ ಒಬ್ಬರು ಪುನೀತ್‌ಅಭಿಮಾನಿಯಾಗಿದ್ದರು. ಡಾ| ರಾಜ್‌ಕುಮಾರ್‌ಚಿತ್ರಗಳಿಂದ ಸಂಸ್ಕಾರ ಪಡೆದಂತೆ ಪುನೀತ್‌ ಅವರಚಿತ್ರಗಳು ಸಹ ಸಾಮಾಜಿಕ ಕಳಕಳಿಯಿಂದ ಕೂಡಿದ್ದವು.

ನನ್ನ ಮಗನ ಚಿತ್ರರಂಗ ಪ್ರವೇಶಕ್ಕೆ ಸಂಬಂಧಿಸಿದಂತೆಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ್ದರು.ಹೀಗೆ ಕೊನೆಯ ದಿನಗಳಲ್ಲಿ ತುಂಬ ಹತ್ತಿರವಾಗಿದ್ದರುಎಂದ ಜನಾರ್ಧನರೆಡ್ಡಿ, ಹಂಪಿಯಲ್ಲಿ ಹಮ್ಮಿಕೊಂಡಿದ್ದಶ್ರೀಕೃಷ್ಣದೇವರಾಯರ 500ನೇ ಪಟ್ಟಾಭಿಷೇಕದಲ್ಲಿಗಣ್ಯವ್ಯಕ್ತಿಗಳಿದ್ದ ವೇದಿಕೆಯಲ್ಲಿ ಪುನೀತ್‌ ಅವರಿಗೆಸನ್ಮಾನಿಸಿದ್ದನ್ನು ಮೆಲುಕು ಹಾಕಿದರು. ಅವರಿಗೆಪದ್ಮಶ್ರೀ ಪ್ರಶಸ್ತಿ ಕೊಡಿಸಲು ಸರ್ಕಾರ ತನ್ನ ಕೆಲಸಮಾಡಲಿ ಎಂದರು.

ಪುನೀತ್‌ ಅವರು 16ಕ್ಕೂ ಹೆಚ್ಚು ವೃದ್ಧಾಶ್ರಮಗಳನ್ನುನಡೆಸುತ್ತಿದ್ದರು. 2 ಸಾವಿರಕ್ಕೂ ಹೆಚ್ಚು ಬಡ ಮಕ್ಕಳಿಗೆಉಚಿತವಾಗಿ ವಿದ್ಯಾಭ್ಯಾಸ ಕೊಡಿಸುತ್ತಿದ್ದರು.ಲೆಕ್ಕವಿಲ್ಲದಷ್ಟು ಜನರಿಗೆ ದಾನಧರ್ಮಗಳನ್ನುಮಾಡಿದ್ದಾರೆ. ಹೀಗೆ ಸೇವಾ ಕಾರ್ಯಕ್ರಮದಲ್ಲಿತೊಡಗಿರುವ ಪುನೀತ್‌ ಅವರು ನಮ್ಮೆಲ್ಲರಕಣ್ತೆತೆರೆಸಿದ್ದಾರೆ. ಹಾಗಾಗಿ ಅವರಂತೆ ನಾವು ಸಹಬಳ್ಳಾರಿಯಲ್ಲಿ ಉಚಿತ ಶಿಕ್ಷಣ ನೀಡಲು ಶೀಘ್ರದಲ್ಲೇಶಾಲೆ ತೆರೆಯಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಗರ ಶಾಸಕ ಜಿ.ಸೋಮಶೇಖರ ರೆಡ್ಡಿಮಾತನಾಡಿ, ನಟ ಪುನೀತ್‌ ರಾಜ್‌ಕುಮಾರ್‌,ಸಹೋದರ ಜನಾರ್ಧನರೆಡ್ಡಿ ಇಬ್ಬರ ಕನಸು ಒಂದೇ ಆಗಿದೆ. ಜನಾರ್ದನರೆಡ್ಡಿ 1996ರಲ್ಲೇ ಬಳ್ಳಾರಿಯಲ್ಲಿ ವೃದ್ಧಾಶ್ರಮ ಸ್ಥಾಪಿಸಿ ಸೇವೆಯಲ್ಲಿ ತೊಡಗಿದ್ದಾರೆ.ಪುನೀತ್‌ 46 ವರ್ಷಕ್ಕೆ ಮೃತಪಟ್ಟಿರುವುದು ನೋವುತಂದಿದೆ. ಬಳ್ಳಾರಿಯ ಹೊಸ ಬಸ್‌ ನಿಲ್ದಾಣಕ್ಕೆಪುನೀತ್‌ ಅವರ ಹೆಸರನ್ನು ಇಡಲು ಸರ್ಕಾರದ ಜತೆಗೆಸಮಾಲೋಚನೆ ನಡೆಸಲಾಗುವುದು ಎಂದ ಅವರು,ತಂದೆಯವರ ಮಾತಿನಂತೆ ಕೆಎಂಎಫ್‌ ಜಾಹೀರಾತನ್ನುಉಚಿತವಾಗಿ ಮಾಡಿಕೊಟ್ಟಿದ್ದರು.

ಬಳ್ಳಾರಿಯಲ್ಲಿ ರಾಜ್‌ಕುಮಾರ್‌ ಪಾರ್ಕ್‌, ರಸ್ತೆಗೆ ರಾಜ್‌ಕುಮಾರ್‌ ಹೆಸರುನಾಮಕರಣ ಮಾಡಿದಾಗಿನಿಂದ ನಮ್ಮೊಡನೆ ಉತ್ತಮಬಾಂಧವ್ಯ ಹೊಂದಿದ್ದರು ಎಂದು ಸ್ಮರಿಸಿದರು. ಬಳಿಕವೃದ್ಧಾಶ್ರಮದಲ್ಲಿನ ವೃದ್ಧರಿಗೆ ಬಟ್ಟೆಗಳನ್ನು ವಿತರಿಸಿದರು.ಬುಡಾ ಅಧ್ಯಕ್ಷ ಪಾಲಣ್ಣ ಸೇರಿ ಹಲವರು ಇದ್ದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.