ಬಳ್ಳಾರಿಯಲ್ಲಿ ರ್ಯಾಪಿಡ್ ರೆಸ್ಪಾನ್ಸ್ ತಂಡ ರಚನೆ
Team Udayavani, Jan 20, 2022, 3:03 PM IST
ಬಳ್ಳಾರಿ: ಗಣಿನಾಡು ಬಳ್ಳಾರಿ/ವಿಜಯನಗರಜಿಲ್ಲೆಗಳಲ್ಲಿ ಕೋವಿಡ್ ಸೋಂಕು ದಿನೇದಿನೆಸ್ಫೋಟಗೊಳ್ಳುತ್ತಿದ್ದರೂ, ಮನೆಗಳಲ್ಲೇ ಐಸೋಲೇಷನ್ಆಗಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆಯೂ ಹೆಚ್ಚಿದೆ.ಅದಕ್ಕಾಗಿ ಮನೆಗಳಲ್ಲೇ ಚಿಕಿತ್ಸೆ ಪಡೆಯುತ್ತಿರುವ ಶೇ.90ರಷ್ಟು ಸೋಂಕಿತರಿಗೆ “ಔಷಧ ಕಿಟ್’ಗಳನ್ನು ಮನೆಗೆಕಳುಹಿಸಲು ಮುಂದಾಗಿರುವ ಜಿಲ್ಲಾಡಳಿತ, ಆರೋಗ್ಯಇಲಾಖೆ ಅದಕ್ಕಾಗಿ “ರ್ಯಾಪಿಡ್ ರೆಸ್ಪಾನ್ಸ್ ತಂಡ’ಗಳನ್ನುರಚಿಸಿದೆ.
ಬಳ್ಳಾರಿ/ವಿಜಯನಗರ ಜಿಲ್ಲೆಗಳಲ್ಲಿ ಕೋವಿಡ್ಮೂರನೇ ಅಲೆ ದಿನೇದಿನೆ ಹೆಚ್ಚಿನ ಜನರಲ್ಲಿ ಸೋಂಕುದೃಢಪಡುತ್ತಿದ್ದು ವ್ಯಾಪಕವಾಗಿ ಹರಡುತ್ತಿದೆ. ಕೇವಲ15 ದಿನಗಳಲ್ಲಿ ಅವಳಿ ಜಿಲ್ಲೆಗಳಲ್ಲಿ ಸುಮಾರು 3ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ.ಅವಳಿ ಜಿಲ್ಲೆಗಳಲ್ಲಿ ಸೋಂಕು ಪತ್ತೆ ಪ್ರಮಾಣ ಶೇ.11ಕ್ಕೆ ಏರಿಕೆಯಾಗಿ ಜನರಲ್ಲಿ ಆತಂಕ ಮೂಡಿಸಿದರೂ,ಶೇ.90 ರಷ್ಟು ಸೋಂಕಿತರು ಆಸ್ಪತ್ರೆಗಳಲ್ಲಿದಾಖಲಾಗದೆ ಮನೆಗಳಲ್ಲೇ ಐಸೋಲೇಷನ್ಆಗಿ ಚಿಕಿತ್ಸೆ ಪಡೆಯುತ್ತಿರುವುದು ಕೊಂಚಮಟ್ಟಿಗೆನೆಮ್ಮದಿ ಮೂಡಿಸಿದೆ.
ಸೋಂಕುನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಮಾರ್ಗಸೂಚಿಯಂತೆ ಅಗತ್ಯಕ್ರಮಗಳನ್ನು ಕೈಗೊಂಡಿರುವ ಅವಳಿ ಜಿಲ್ಲೆಗಳಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆಗಳು,”ರ್ಯಾಪಿಡ್ ರೆಸ್ಪಾನ್ಸ್ ತಂಡ’ಗಳನ್ನು ರಚನೆ ಮಾಡಿ,ಸೋಂಕಿತರ ಮನೆಗಳಿಗೆ “ಔಷಧ ಕಿಟ್’ಗಳನ್ನುಕಳುಹಿಸುವ ಮೂಲಕ ಸೋಂಕು ನಿಯಂತ್ರಿಸಲುಮತ್ತಷ್ಟು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದೆ.
ವೆಂಕೋಬಿ ಸಂಗನಕಲ್ಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ