ವೆಂಕೋಬಿ ಸಂಗನಕಲ್ಲು


Team Udayavani, Feb 11, 2022, 4:22 PM IST

ballari news

ಬಳ್ಳಾರಿ: ಚುನಾವಣೆ ಬಹಿಷ್ಕರಿಸಿ, ಮತದಾನದ ಹಕ್ಕನ್ನುತ್ಯಜಿಸಿದರೂ ತಾಲೂಕಿನ ಹರಗಿನಡೋಣಿ ಗ್ರಾಮಸ್ಥರಕುಡಿಯುವ ನೀರಿನ ಬವಣೆ ಮಾತ್ರ ನೀಗುತ್ತಿಲ್ಲ. ಕೆರೆ ನಿರ್ಮಿಸಿ ಶಾಶ್ವತ ಪರಿಹಾರ ಕಲ್ಪಿಸುವುದಾಗಿಜನಪ್ರತಿನಿಧಿ ಗಳು ನೀಡಿರುವ ಭರವಸೆಯೂ ಇನ್ನು ದಾಖಲೆಗಳಲ್ಲಿದ್ದು, ವೇಗ ಪಡೆದುಕೊಳ್ಳುತ್ತಿಲ್ಲ.
ತಾಲೂಕಿನ ಹರಗಿನಡೋಣಿ ಗ್ರಾಮದಲ್ಲಿ ಅನಾದಿಕಾಲದಿಂದಲೂ ಕುಡಿವ ನೀರಿನ ಸಮಸ್ಯೆಯಿದೆ.ವರ್ಷದ ಅರ್ಧ ದಿನಗಳು ಮಳೆಯ ಅಂತರ್ಜಲವನ್ನೇ ಆಶ್ರಯಿಸಿರುವ ಗ್ರಾಮಸ್ಥರು, ಅವು ಬತ್ತಿದ ಬಳಿಕ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಅನಾವರಣಗೊಳ್ಳುತ್ತದೆ.

ಬೇಸಿಗೆಯಮೂರ್‍ನಾಲ್ಕು ತಿಂಗಳುಗಳ ಕಾಲ ಜಿಲ್ಲಾಡಳಿತದಿಂದ ಟ್ಯಾಂಕರ್‌ ಮೂಲಕ ಸರಬರಾಜು ಮಾಡುವಕುಡಿಯುವ ನೀರಿಗಾಗಿ ಗ್ರಾಮಸ್ಥರ ನಡುವೆಮಾರಾಮಾರಿಗಳು ನಡೆದಿವೆ. ಊಟ ಮಾಡಿದರೆತಟ್ಟೆಗಳನ್ನು ತೊಳೆಯಲು ನೀರು ಬೇಕಾಗುತ್ತದೆ ಎಂದು ಪೇಪರ್‌ ಪ್ಲೇಟ್‌ಗಳಲ್ಲಿ ಊಟ ಮಾಡಿ ಬಿಸಾಡಿರುವಹಲವು ಉದಾಹರಣೆಗಳಿವೆ. ಗ್ರಾಮಸ್ಥರು ಇಷ್ಟೆಲ್ಲಸಂಕಷ್ಟ ಎದುರಿಸಿದರೂ ಜೀವಜಲಕ್ಕೆ ಶಾಶ್ವತ ಪರಿಹಾರಇನ್ನೂ ಗಗನಕುಸುಮವಾಗಿದೆ.

ಚುನಾವಣೆ ಬಹಿಷ್ಕರಿಸಿದ್ದ ಗ್ರಾಮಸ್ಥರು: ಗ್ರಾಮದಲ್ಲಿ600ಕ್ಕೂ ಹೆಚ್ಚು ಮನೆಗಳಿದ್ದು, ಅಂದಾಜು 5ಸಾವಿರ ಜನಸಂಖ್ಯೆ ಹೊಂದಿದೆ. ಗ್ರಾಮಕ್ಕೆ ಶಾಸಕರು,ಸಂಸದರು ಯಾರೇ ಭೇಟಿ ನೀಡಿದರೂ, ಶುದ್ಧಕುಡಿವ ನೀರು ಒದಗಿಸಲು ಶಾಶ್ವತ ಪರಿಹಾರಕಲ್ಪಿಸುವಂತೆ ಗ್ರಾಮಸ್ಥರು ಏಕೈಕ ಬೇಡಿಕೆಯನ್ನುಮುಂದಿಟ್ಟಿದ್ದಾರೆ.

ಆದರೆ ಈಡೇರಿಸುವುದಾಗಿಭರವಸೆ ನೀಡುವ ಜನಪ್ರತಿನಿ ಧಿಗಳು ನಂತರಗ್ರಾಮದ ಗೋಜಿಗೆ ಹೋಗಿಲ್ಲ. ಇದರಿಂದ ಬೇಸತ್ತಿದ್ದಗ್ರಾಮಸ್ಥರು, 2018ರಲ್ಲಿ ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆನಡೆದ ಉಪಚುನಾವಣೆಯನ್ನು ಬಹಿಷ್ಕರಿಸಿದ್ದರು.ಗ್ರಾಮದಲ್ಲಿ ಸ್ಥಾಪಿಸಿದ್ದ ಎರಡು ಮತಗಟ್ಟೆಗಳಿಗೆಒಬ್ಬರು ಸಹ ಹೋಗಿ ಮತದಾನ ಮಾಡದೆ ಕುಡಿವನೀರಿಗಾಗಿ ತಮ್ಮ ಮತದಾನದ ಹಕ್ಕನ್ನೇ ತ್ಯಜಿಸಿ ಒಗ್ಗಟ್ಟು ಪ್ರದರ್ಶಿಸಿದ್ದರು.

ಚುನಾವಣೆ ಬಳಿಕ ಅಂದಿನ ಸಂಸದವಿ.ಎಸ್‌.ಉಗ್ರಪ್ಪ, ಶಾಸಕ ಬಿ.ನಾಗೇಂದ್ರ ಸಂಬಂಧಪಟ್ಟಅಧಿ ಕಾರಿಗಳೊಂದಿಗೆ ಗ್ರಾಮಕ್ಕೆ ತೆರಳಿ, ಕೆರೆ ನಿರ್ಮಿಸಿಶಾಶ್ವತ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದ್ದರು.ಆದರೆ, ಶಾಸಕರ ಅವ ಧಿ ಕೊನೆಗೊಳ್ಳುತ್ತಿದ್ದರೂ, ಕೆರೆಮಾತ್ರ ನಿರ್ಮಾಣಗೊಂಡಿಲ್ಲ.

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.