ಕೋಟೆ ಮಲ್ಲೇಶ್ವರ ಬ್ರಹ್ಮರಥೋತ್ಸವ
Team Udayavani, Feb 17, 2022, 12:47 PM IST
ಬಳ್ಳಾರಿ: ಕೋವಿಡ್ ಸೋಂಕು ನಡುವೆಯೂನಗರದ ಆರಾಧ್ಯ ದೈವ ಶ್ರೀ ಕೋಟೆ ಮಲ್ಲೇಶ್ವರಸ್ವಾಮಿಯ ಮಡಿ ತೇರು, ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಕ್ತಿ, ಶ್ರದ್ಧೆ, ಸಡಗರಸಂಭ್ರಮದಿಂದ ಬುಧವಾರ ನಡೆಯಿತು. ಭಕ್ತರುಹೂ ಹಣ್ಣು ಎಸೆದು ಭಕ್ತಿ ಸಮರ್ಪಿಸಿದರು.
ನಗರದ ತೇರು ಬೀದಿಯಲ್ಲಿ ಪ್ರತಿವರ್ಷದಂತೆಸಿಂಗರಿಸಿ ನಿಲ್ಲಿಸಲಾಗಿದ್ದ ರಥಕ್ಕೆ ಭಕ್ತರು ಬೃಹತ್ಹೂ ಮಾಲೆಗಳನ್ನು ತಂದು ಹಾಕಿದರು.ತೇರಿನಲ್ಲಿ ಮಲ್ಲೇಶ್ವರ ಸ್ವಾಮಿಯನ್ನುಪ್ರತಿಷ್ಠಾಪಿಸದ ಮೇಲೆ ತೇರನ್ನು ಮೇಳ, ತಮಟೆ,ಡೊಳ್ಳು ವಾದನಗಳ ಮೂಲಕ ಒಂದಿಷ್ಟು ದೂರದವರೆಗೆ ಎಳೆದು ಸ್ವಸ್ಥಾನಕ್ಕೆ ತಂದು ನಿಲ್ಲಿಸಲಾಯಿತು.
ಪೊಲೀಸರು ಬಂದೋಬಸ್ತು ಒದಗಿಸಿದ್ದರು.ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಆದೇಶದಂತೆ ಸಂಜೆ ನಡೆಯಬೇಕಿದ್ದ ಮಲ್ಲೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ರದ್ದು ಮಾಡಲಾಗಿದ್ದು,ಬೆಳಗ್ಗೆಯೇ ಒಂದಷ್ಟು ದೂರದವರೆಗೆ ಎಳೆದುವಾಪಸ್ ಸ್ವಸ್ಥಳಕ್ಕೆ ತಂದು ನಿಲ್ಲಿಸಲಾಯಿತು.ಭಕ್ತರು ಬಂದು ನಿಂತಿರುವ ರಥಕ್ಕೆ ತೆಂಗಿನಕಾಯಿಹಣ್ಣು ಅರ್ಪಿಸಿ ಭಕ್ತಿ ಸಮರ್ಪಿಸಿದರು.
ಜಿಲ್ಲಾಉಸ್ತುವಾರಿ ಸಚಿವ ಬಿ.ಶ್ರೀರಾಮುಲು, ಮಾಜಿಸಚಿವ ಜನಾರ್ದನರೆಡ್ಡಿ, ಶಾಸಕ ಜಿ.ಸೋಮಶೇಖರರೆಡ್ಡಿಯವರು, ಮಡಿತೇರಿಗೆ ವಿಶೇಷ ಪೂಜೆ ಸಲ್ಲಿಸಿಭಕ್ತಿ ಸಮರ್ಪಿಸಿದರು. ಬಳಿಕ ರಥೋತ್ಸವಕ್ಕೆ ಚಾಲನೆನೀಡಿದರು. ಬುಡಾ ಅಧ್ಯಕ್ಷ ಪಿ.ಪಾಲಣ್ಣ. ಪಾಲಿಕೆಸದಸ್ಯರು, ಮಾಜಿ ಸದಸ್ಯ ವಿ.ಎಸ್. ಮರಿದೇವಯ್ಯ,ಮೊದಲಾದವರು ಪಾಲ್ಗೊಂಡಿದ್ದರು.
ಇನ್ನು ಕೋಟೆ ಪ್ರದೇಶದಲ್ಲಿರುವ ಮಲ್ಲೇಶ್ವರಸ್ವಾಮಿ ದೇವಸ್ಥಾನವನ್ನು ಜಾತ್ರೆ ಅಂಗವಾಗಿವಿಶೇಷವಾಗಿ ಅಲಂಕರಿಸಲಾಗಿದೆ. ವಿಶೇಷಪೂಜೆ ಮಾಡಿದ ಭಕ್ತರು ಆಗಮಿಸಿ ದರ್ಶನಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
Yugadi: ಯುಗದ ಆರಂಭದ ಮುನ್ನುಡಿ ಈ ಯುಗಾದಿ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ